ಯುವವಾಹಿನಿ ಬಂಟ್ವಾಳ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ – ಕಹಳೆ ನ್ಯೂಸ್
ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಗುರುತತ್ವ ಅನುಷ್ಠಾನದಲ್ಲಿ ಯುವವಾಹಿನಿ ಮಹತ್ತರ ಹೆಜ್ಜೆಯಿರಿಸಿದೆ : ಜಗನ್ನಾಥ ಬಂಗೇರ ನಿರ್ಮಲ್ ಯುವವಾಹಿನಿ ಸಂಸ್ಥೆಯು ಮನೆ ಮನ ಬೆಳಗುವ ಜ್ಯೋತಿಯಾಗಿ ಹೊಸ ಆಶಾಕಿರಣ ಮೂಡಿಸಿದೆ. ನಾರಾಯಣಗುರುಗಳ ತತ್ವ ಪ್ರಚಾರ ಅನುಷ್ಠಾನದಲ್ಲಿ ಯುವವಾಹಿನಿಯ ಕಾರ್ಯಯೋಜನೆಗಳು ಯಶಸ್ವಿಯಾಗಿದೆ ಎಂದು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನರಿಕೊಂಬು ಶ್ರೀ ನಾಲ್ಕೈತ್ತಾಯ...







