Saturday, July 25, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೋಮು ಸೌಹಾರ್ದತೆಗೆ ಧಕ್ಕೆ ಪೋಸ್ಟ್; ಆರೋಪಿ ವಿರುದ್ದ ಪ್ರಕರಣ ದಾಖಲು -ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಗಳನ್ನು ಹಾಕಿದ್ದು ಅವನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂತಹ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ವಿಟ್ಲ ಇದರ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಮತ್ತು ನವಜೀವನ ಸಮಿತಿಯ ಪೋಷಕರ ಸಭೆ-ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ.) ವಿಟ್ಲ ಇದರ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಮತ್ತು ನವಜೀವನ ಸಮಿತಿಯ ಪೋಷಕರ ಸಭೆ ವಿಟ್ಲ ವಲಯದ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳರ ಅಧ್ಯಕ್ಷತೆಯಲ್ಲಿ ವಿಟ್ಲ ಯೋಜನಾ ಕಚೇರಿಯಲ್ಲಿ ಜರಗಿತು ಸಭೆಯಲ್ಲಿ ಮಂಚಿ ವಲಯದಲ್ಲಿ ನಡೆಯುವ ಮಧ್ಯವರ್ಜನ ಶಿಬಿರದ ಬಗ್ಗೆ,ಮತ್ತು 2025 - 26ನೇ ಸಾಲಿನ ಜನ ಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ...
ಉಡುಪಿದಕ್ಷಿಣ ಕನ್ನಡಬಂಟ್ವಾಳಬೆಂಗಳೂರುಮಂಗಳೂರುಸುದ್ದಿ

ಮಂಗಳೂರಿನ ಪೊಲೀಸ್ ಕಮಿಷನ‌ರ್ ಹಾಗು ಎಸ್ಪಿ ವರ್ಗಾವಣೆ… ನೂತನ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗು ಎಸ್ಪಿ ಯಾಗಿ ಅರುಣ್ ಕುಮಾ‌ರ್ ನೇಮಕ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆ ಎರಡು ಹತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ  ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ಕಾಲೇಜನಲ್ಲಿ ರಾಣಿ ಅಬ್ಬಕ್ಕ ಅವರ ೫೦೦ನೇ ಜನ್ಮ ವರ್ಷಾಚರಣೆ ; 100 ಸರಣಿ ಉಪನ್ಯಾಸ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ರಾಣಿ ಅಬ್ಬಕ್ಕ ಅವರ ೫೦೦ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ವತಿಯಿಂದ ಆಯೋಜಿಸಲಾಗುವ ೧೦೦ ಸರಣಿ ಉಪನ್ಯಾಸ ಕಾರ್ಯಕ್ರಮಗಳಲ್ಲಿ ಮೊದಲನೇ ಸರಣಿ ಕಾರ್ಯಕ್ರಮವು KRMS ಸಂಘದ ಮಂಗಳೂರು ವಿಭಾಗ ಮತ್ತು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಸಹಯೋಗದಲ್ಲಿ ತಾ. 27/05/2025 ರಂದು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ, ಕಲ್ಲಡ್ಕ ಇಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ -ಕಹಳೆ ನ್ಯೂಸ್

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಾಣಿಲ ಗ್ರಾಮದ ಸುಮಾರು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮತ್ತು ಹತ್ತನೇ ತರಗತಿಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮ ಗಣ್ಯರ ಸಮ್ಮುಖದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರ ನಿರ್ಮಾಣ ಕಾರ್ಯ ನಮ್ಮೆಲ್ಲರ ಜವಾಬ್ದಾರಿ, ಶಿಕ್ಷಣ ಕ್ರಾಂತಿಯ ಜೊತೆಗೆ ಸಾಮಾಜಿಕ, ಧಾರ್ಮಿಕವಾಗಿ ಮಾತೃಭೂಮಿ ಯುವ ವೇದಿಕೆ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮಂಗಳೂರುಸುದ್ದಿ

ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ 3  ದಿನ ನಿಷೇಧಾಜ್ಞೆ ಜಾರಿ !- ಕಹಳೆನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27 ಸಂಜೆ 6 ರಿಂದ 30 ಸಂಜೆ 6 ರವರೆಗೆ ನಿಷೇಧಾಜ್ಞೆ ಜಾರಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜೂನ್‌ ನಲ್ಲಿ ಕಲ್ಲಡ್ಕ ಫ್ಲೈಓವರ್‌ ವಾಹನ ಸಂಚಾರಕ್ಕೆ ಮುಕ್ತ : ಉಪ್ಪಿನಂಗಡಿ, ಮಾಣಿ ಅಂಡರ್‌ಪಾಸ್‌ ಬಳಕೆಗೆ ಸಿದ್ಧ – ಕಹಳೆನ್ಯೂಸ್

ಮಂಗಳೂರು :ರಾಷ್ಟ್ರೀಯ ಹೆದ್ದಾರಿ 66ರ ಮಹತ್ವದ ಭಾಗವಾದ ಕಲ್ಲಡ್ಕ ಫ್ಲೈಓವರ್‌ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು ಜೂನ್‌ ಮೊದಲ ವಾರದಲ್ಲಿ ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳಲಿದೆ. ಇದರೊಂದಿಗೆ ಉಪ್ಪಿನಂಗಡಿ, ಮಾಣಿಯ ವೆಹಿಕಲ್‌ ಅಂಡರ್‌ಪಾಸ್‌ಗಳನ್ನು (ವಿಯುಪಿ) ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ಸಂಭವವಿದೆ. ಅವಧಿಗೂ ಮೊದಲೇ ಜಿಲ್ಲೆಗೆ ಆಗಮಿಸಿದ ಮಳೆ ಧಾರಾಕಾರವಾಗಿ ಸುರಿದಿರುವುದು ಅಂತಿಮ ಹಂತದ ಕಾಮಗಾರಿಗಳ ವೇಗಕ್ಕೆ ಅಡ್ಡಿಯಾಗಿದೆ. ಮೇ ತಿಂಗಳ ಮೊದಲ ವಾರದಲ್ಲಿ ಕಲ್ಲಡ್ಕ ಫ್ಲೈಓವರ್‌ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಈ ಹಿಂದೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು. ಚಾಲಕ ಮೃ*ತ್ಯು-ಕಹಳೆ ನ್ಯೂಸ್

ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡು- ಕೈಕಂಬ ಮಧ್ಯೆ ‌ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಕೊಳ್ನಾಡು ನೂಜಿಬೈಲು ಭಂಡಾರದಮನೆ ನಿವಾಸಿ ಜಯರಾಮ್ (50) ಮೃತಪಟ್ಟ ವ್ಯಕ್ತಿ. ಜಯರಾಮ್ ಅವರು ತುಂಬೆ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದು, ಮುಂಜಾನೆ 4.30ರ ಸುಮಾರಿಗೆ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
1 41 42 43 44 45 219
Page 43 of 219