Saturday, July 25, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪುನಶ್ಚೇತನಗೊಂಡ 585 ನೇ ನಮ್ಮೂರು ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ವತಿಯಿಂದ ಕರಿಯಂಗಳ ಗ್ರಾಮ ಪಂಚಾಯತ್ ಹಾಗೂ ಕೆರೆ ಅಭಿವೃದ್ಧಿ ಸಮಿತಿ ಪೊಳಲಿ ಇದರ ಸಹಭಾಗಿತ್ವದಲ್ಲಿ ಸುಮಾರು 10 ಲಕ್ಷ ವೆಚ್ಚದಲ್ಲಿ ಕೆರೆಯಲ್ಲಿ ಶೇಖರವಾದ ಹೂಳೆತ್ತಿ ಪುನಶ್ಚೇತನ ಗೊಳಿಸಿದ 586 ನೇ ನಮ್ಮೂರು ನಮ್ಮ ಕೆರೆ ಕಾಳಿ ಸರೋವರದ ಕೆರೆ ಹಸ್ತಾಂತರ ಕಾರ್ಯಕ್ರಮ ಕೆರೆದ ಬಳಿ ಪೊಳಲಿ ಯಲ್ಲಿ ದಿನಾಂಕ 8 -5-2025 ನೇ ಗುರುವಾರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ಕಾಲೇಜಿನಲ್ಲಿ ಫ್ಯಾಷನ್ ಡಿಸೈನಿಂಗ್ ಕೋರ್ಸ್ ಕಾರ್ಯಾಗಾರ–ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ಇಲ್ಲಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಕೇಂದ್ರವಾಗಿರಿಸಿ ಫ್ಯಾಷನ್ ಡಿಸೈನಿಂಗ್ ಕೋರ್ಸ್ ತರಬೇತಿ ಶಿಬಿರ ಉದ್ಘಾಟನೆಗೊಂಡಿದೆ.. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿತ್ವಮ್ ಡಿಸೈನ್ಸ್ನ ಸಿಇಒ ಶ್ರೀಮತಿ ವಿದ್ಯಾಶ್ರೀ ಆಚಾರ್ಯ ದೀಪಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದಯತಿರಾಜ್ ಪಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಉದ್ಯೋಗ ಮತ್ತು ತರಬೇತಿ ಕೋಶದ ಸಂಯೋಜಕಿ ದೀಕ್ಷಿತಾ ಉಪಸ್ಥಿತರಿದ್ದರು. ಮನ್ವಿತ ಅಂತಿಮ ಬಿಕಾಂ ಇವರು ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೆಶ್ವರ ಭಜನಾ ಪರಿಷತ್ ಬಿ ಸಿ ರೋಡ್ ವಲಯದ ವತಿಯಿಂದ ಗಾಣದಕೋಡಿ ಕುಟುಂಬ ಚಾವಡಿಯಲ್ಲಿ ಭಜನಾ ತರಬೇತಿ ಶಿಬಿರ-ಕಹಳೆ ನ್ಯೂಸ್

ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೆಶ್ವರ ಭಜನಾ ಪರಿಷತ್ ಬಿ ಸಿ ರೋಡ್ ವಲಯದ ವತಿಯಿಂದ ಒಂದು ವಾರದ ಭಜನಾ ತರಬೇತಿ ಶಿಬಿರ ಬಂಟ್ವಾಳ ತಾಲೂಕಿನ ಬಂಟ್ವಾಳ ಮೂಡ ಗ್ರಾಮದ ಗಾಣದಕೋಡಿ ಕುಟುಂಬ ಚಾವಡಿಯಲ್ಲಿ ರವಿವಾರ ಆರಂಭಿಸಲಾಯಿತು . ಬಂಟ್ವಾಳ ಪುರಸಭಾ ಸದಸ್ಯ ಲೋಲಾಕ್ಷ ಶೆಟ್ಟಿ ಕಾರ್ಯಕ್ರಮ ವನ್ನು ಉದ್ಘಾಟಿಸಿದರು ಸಂದರ್ಭದಲ್ಲಿ , ಬಂಟ್ವಾಳ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಜನಾ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಭಜನೆ ಇದ್ದಲ್ಲಿ ವಿಭಜನೆ ಇಲ್ಲ ಎಂಬ ಮಾತಿನಂತೆ ಮಕ್ಕಳಿಗೆ ಸಂಸ್ಕಾರ ಸಂಸ್ಕೃತಿ ಕಲಿಸಲು ಭಜನೆ ಸುಲಭ ಮಾರ್ಗವಾಗಿದೆ.ಜೊತೆಗೆ ಏಕಾಗ್ರತೆಗೆ, ನೆನಪಿನ ಶಕ್ತಿ ವೃದ್ಧಿಸಲು ಭಜನೆ ಸಹಕಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಹೇಳಿದರು. ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ.) ಬಂಟ್ವಾಳ ಇದರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಪುಂಜಾಲಕಟ್ಟೆ ವತಿಯಿಂದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರ ಬಲಿಷ್ಠ: ಸಂಸದ ಕ್ಯಾ.ಬ್ರಿಜೇಶ್‌ ಚೌಟ-ಕಹಳೆ ನ್ಯೂಸ್

ಬಂಟ್ವಾಳ: ಪುತ್ತೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದಲ್ಲಿ ಕಾರ್ಯಾಚರಿಸುತ್ತಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 15ನೇ ಕಲ್ಲಡ್ಕ ಶಾಖೆಯು ಶನಿವಾರ ಕಲ್ಲಡ್ಕದ ಪ್ರೀತಿ ಟವರ್ನ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಂಡಿತು. ಶಾಖೆಯನ್ನು ಉದ್ಘಾಟಿಸಿದ ದ.ಕ. ಸಂಸದ ಕ್ಯಾ| ಬ್ರಿಜೇಶ್‌ ಚೌಟ ಮಾತನಾಡಿ, ತುಳುನಾಡಿನ ಮಣ್ಣಿನ ಗುಣದ ಕಾರಣಕ್ಕೆ ದ.ಕ. ಜಿಲ್ಲೆಯ ಸಹಕಾರಿ ಕ್ಷೇತ್ರವು ಬಲಿಷ್ಠವಾಗಿದ್ದು, ಸಹಕಾರಿ ಸಂಘಗಳು ಬರೀ ಲಾಭವನ್ನೇ ನೋಡದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನೆರವಾಗುವ ರೀತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಕಾಲೇಜು- ಪ್ರತಿಭಾ ಪುರಸ್ಕಾರ, ಪ್ರತಿಭಾ ದಿನೋತ್ಸವ ಆಕರ್ಷ್- ೨೦೨೫-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ ನಡೆಯುವ ಆಕರ್ಷ್ ೨೦೨೫ ಪ್ರತಿಭಾ ಪುರಸ್ಕಾರ, ಪ್ರತಿಭಾ ದಿನೋತ್ಸವ ಕಾರ್ಯಕ್ರಮವು ದಿನಾಂಕ ೨೬/೦೪/೨೦೨೫ರಂದು ಆಜಾದ್ ಭವನ ಸಭಾಂಗಣದಲ್ಲಿ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನಮ್ಮ ಭಾರತದೇಶ ಮತ್ತು ನಾವು ಹಿಂದೂಗಳು ಸದ್ಯ ಆಪತ್ತಿನ ಪರಿಸ್ಥಿತಿಯಲ್ಲಿದ್ದೇವೆ, ಪ್ರತಿಯೊಬ್ಬರೂ...
ಜಿಲ್ಲೆಬಂಟ್ವಾಳಸುದ್ದಿ

ಮಗುವಿನ ಟಿಕೆಟ್‌ ವಿಚಾರದಲ್ಲಿ ವಾಗ್ವಾದ; ನಿರ್ವಾಹಕನಿಂದ ಮಹಿಳೆ ಮೇಲೆ ಹ*ಲ್ಲೆ-ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಗುರುವಾರ ರಾತ್ರಿ ಮಗುವೊಂದಕ್ಕೆ ಅರ್ಧ ಟಿಕೆಟ್‌ ತೆಗೆಯುವ ವಿಚಾರವಾಗಿ ನಿರ್ವಾಹಕ ಟಿಕೆಟ್‌ ಯಂತ್ರದಲ್ಲಿ ಮಹಿಳೆಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಾಗ್ವಾದ ನಡೆದು ಬಳಿಕ ಬಿ.ಸಿ.ರೋಡಿನಲ್ಲಿ ಪೊಲೀಸರು ಮಾತುಕತೆ ನಡೆಸಿ ಬಸ್ಸನ್ನು ಕಳುಹಿಸಿಕೊಟ್ಟಿದ್ದಾರೆ. ಮಹಿಳೆಯು ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಬಸ್ಸನ್ನು ನಿಲ್ಲಿಸುವಂತೆ ಆಗ್ರಹಿಸಿದರು. ಆದರೆ ಚಾಲಕ ಬಸ್ಸನ್ನು ನಿಲ್ಲಿಸದೇ ಇದ್ದು, ಬಳಿಕ ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಬಂಟ್ವಾಳ ನಗರ ಪೊಲೀಸರಿಗೆ ಮಾಹಿತಿ ನೀಡಿದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜನಿವಾರ ಪ್ರಕರಣ: ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅವಮಾನಿಸಿರುವುದು ಖಂಡನೀಯ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ: ಸಂಸದ ಕ್ಯಾ. ಚೌಟ- ಕಹಳೆ ನ್ಯೂಸ್

ಮಂಗಳೂರು: ಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅಪಚಾರವೆಸಗಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿ ಅವಮಾನಿಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸಂಸದರು, ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿಇಟಿ...
1 44 45 46 47 48 219
Page 46 of 219