Thursday, July 23, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು ಗರ್ಭಗುಡಿಗೆ ಸಿಡಿಲು ಬಡಿತ; ಕೋಟ್ಯಂತರ ರೂ. ಹಾನಿ – ಕಹಳೆ ನ್ಯೂಸ್

ಬಂಟ್ವಾಳ: ತಾಲೂಕಿನಲ್ಲಿ ರಂದು ಮೇ 16 ಸಂಜೆ ಸುರಿದ ಭಾರೀ ಗಾಳಿ-ಮಳೆಯ ಜೊತೆಗಿನ ಸಿಡಿಲಿನ ಆರ್ಭಟಕ್ಕೆ ಮಣಿನಾಲ್ಕೂರಿನ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ಗರ್ಭಗುಡಿಯ ಪ್ರಾಕಾರ ಛಿದ್ರಗೊಂಡು ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ಗರ್ಭಗುಡಿ ಪ್ರಾಕಾರ ಛಿದ್ರ – 1 ಕೋಟಿ ರೂ.ಗೂ ಅಧಿಕ ನಷ್ಟ! ತಾಲೂಕಿನ ಮಣಿನಾಲ್ಕೂರು ಗ್ರಾಮದ ಇಳಿಯೂರು ಎಂಬಲ್ಲಿ ಇಂದು ಸಂಜೆ ಸುಮಾರು 4.30 ರ ವೇಳೆಗೆ ಸುರಿದ ಭಾರೀ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಾಥಮಿಕ ಅರೋಗ್ಯ ಕೇಂದ್ರ ಮಾಣಿ ಇಂಟರ್ ಲಾಕ್ ಅಳವಡಿಕೆ ಉದ್ಘಾಟನೆ ಹಾಗೂ ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯಕ್ಕೆ ಸಹಕರಿಸಿದವರಿಗೆ ಅಭಿನಂದನಾ ಕಾರ್ಯಕ್ರಮ -ಕಹಳೆ ನ್ಯೂಸ್

ಮಾಣಿ : ಬಂಟ್ವಾಳ ತಾಲೂಕು ಪ್ರಾಥಮಿಕ ಅರೋಗ್ಯ ಕೇಂದ್ರ ಮಾಣಿ ಇಲ್ಲಿ ಬಂಟ್ವಾಳ ತಾಲೂಕಿನ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ, ಆರೋಗ್ಯ ಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಹಾಗೂ ವಿವಿಧ ದಾನಿಗಳ ಸಹಕಾರದಿಂದ ಆಸ್ಪತ್ರೆಯ ಆವಾರಣಕ್ಕೆ ಅಲವಡಿಸಿದ ಇಂಟೆರ್ ಲಾಕ್ ಉದ್ಘಾಟನೆ ಹಾಗೂ ಅರೋಗ್ಯಕೇಂದ್ರದ ಮೂಲಭೂತ ಸೌಕರ್ಯಕ್ಕೆ ಸಹಕರಿಸಿದವರಿಗೆ ಅಭಿನಂದನಾ ಕಾರ್ಯಕ್ರಮ ಮೇ 13 ಬುಧವಾರ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು. ಕಾರ್ಯಕ್ರಮವನ್ನು ಶ್ರೀ ಉಳ್ಳಾಲ್ತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವೀಪತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಮನೆ ದುರಸ್ತಿ ಶ್ರಮದಾನ ಹಾಗೂ ಮಾಸಿಕ ಸಭೆ -ಕಹಳೆ ನ್ಯೂಸ್

ಕಾಡಬೆಟ್ಟು : ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಮಧ್ವ ಕಮಲ ಪೂಜಾರ್ತಿ ಮನೆಯ ಮೇಲ್ಛಾವಣಿ ದುರಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ.) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡುಬೆಟ್ಟು, ವಗ್ಗ ವತಿಯಿಂದ ಮಾಡಲಾಯಿತು. ಇದು ಈ ವರ್ಷದಲ್ಲಿ ಕಾಡಬೆಟ್ಟು ವಗ್ಗ ಶೌರ್ಯ ಘಟಕದ 6ನೇ ಮನೆ ದುರಸ್ತಿಯ ಶ್ರಮದಾನವಾಗಿದ್ದು, ಕಮಲ ಪೂಜಾರ್ತಿಯವರು ತೀರಾ ಬಡತನದಿಂದ ಮನೆಯಲ್ಲಿ ಒಬ್ಬರೇ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಶಕಗಳ ಬಳಿಕ ಬಂಧನ: 1992ರ ಅಕ್ರಮ ಪೆಟ್ರೋಲ್ ಪ್ರಕರಣದ ಆರೋಪಿ ಸೆರೆ -ಕಹಳೆ ನ್ಯೂಸ್

ವಿಟ್ಲ: ಅಕ್ರಮ ಪೆಟ್ರೋಲ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಆರೋಪಿಯನ್ನು ಕೊನೆಗೂ ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಸರಗೋಡು ಮಂಜೇಶ್ವರ ನಿವಾಸಿ ಸಿದ್ದೀಕ್ ಬಂಧಿತ ಆರೋಪಿ. 1992ರ ಅಕ್ಟೋಬರ್ 14 ರಂದು ಮಂಜೇಶ್ವರ ನಿವಾಸಿಗಳಾದ ಇಬ್ರಾಹಿಂ ಮತ್ತು ಸಿದ್ದೀಕ್ ಎಂಬುವವರು ಕಾರಿನಲ್ಲಿ ಅಕ್ರಮವಾಗಿ ಪೆಟ್ರೋಲ್ ಸಾಗಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದರು. ಇವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೆಟ್ರೋಲಿಯಂ ಕಾಯ್ದೆಯಡಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ ಹಾಗೂ ಮಾತೃಭೂಮಿ ಸೇವಾ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಬಡ ಮಹಿಳೆಯ ಮನೆ ದುರಸ್ತಿ ಮಾಡಿ ಹಸ್ತಾಂತರ -ಕಹಳೆ ನ್ಯೂಸ್

ಬಂಟ್ವಾಳ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ ಹಾಗೂ ಮಾತೃಭೂಮಿ ಸೇವಾ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ,ಸಮಾಜದ ಸಮಾಜಮುಖಿ ಬಂಧುಗಳ ಸಹಕಾರದಿಂದ ದುರಸ್ತಿಗೊಂಡ ಬಂಟ್ಟಾಳ ತಾಲೂಕಿನ ನಾವೂರು ಗ್ರಾಮದ ಸಿಂತಾನಿಕಟ್ಟೆಯ ಶ್ರೀಮತಿ ಅಪ್ಪಿ ಬಡ ಮಹಿಳೆಯ ಮನೆಯ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಉದ್ಯಮಿಗಳಾದ ಸಂದೇಶ್ ಶೆಟ್ಟಿ, ಅಖಿಲ ಕರ್ನಾಟಕದ ಮಾಜಿ ಸೈನಿಕರ ಸಂಘ ಬಂಟ್ವಾಳ ಘಟಕದ ಅಧ್ಯಕ್ಷರಾದ ಮೋನಪ್ಪ ಪೂಜಾರಿ ಮೊಗರ್ನಾಡು, ಮಾಜಿ ಸೈನಿಕರಾದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಂಚಿನಡ್ಕಪದವಿನಲ್ಲಿ ವಿದ್ಯಾರ್ಥಿನಿ ಶಿಕ್ಷಣಕ್ಕೆ ವಿಹಿಂಪ-ಬಜರಂಗದಳದಿಂದ ಸಹಾಯಧನ ಹಸ್ತಾಂತರ-ಕಹಳೆ ನ್ಯೂಸ್

ಇರಾ ಗ್ರಾಮದ ಕಂಚಿನಡ್ಕಪದವು ನಿವಾಸಿಗಳಾದ ಶ್ರೀಮತಿ ಭಾರತಿ ಹಾಗೂ ಶ್ರೀ ರಾಜೇಶ್ ದಂಪತಿಗಳು ಆರ್ಥಿಕ ಸಂಕಷ್ಟದಲ್ಲಿದ್ದು, ಅವರ ಪುತ್ರಿ ಕುಮಾರಿ ಶರಣ್ಯ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಂಚಿ ಘಟಕದ ವತಿಯಿಂದ ರೂ.15,000 ಸಹಾಯಧನವನ್ನು ಹಸ್ತಾಂತರಿಸಲಾಯಿತು. ಈ ಧನಸಹಾಯಕ್ಕೆ ಸ್ಪಂದಿಸಿದ ಶರ್ಮೋದ್ ಕುಮಾರ್ ಬೆಹರಿನ್ ಅವರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ಹಸ್ತಾಂತರ ಹಾಗೂ ಜನಜಾಗೃತಿ ವೇದಿಕೆ ಸದಸ್ಯರಿಂದ ಮನೆಗೆ ಉಚಿತವಾಗಿ ವಿದ್ಯುತ್ ವೈರಿಂಗ್ ವ್ಯವಸ್ಥೆಯ ಭರವಸೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಇತ್ತೀಚೆಗೆ ವಿದ್ಯುತ್ ಅವಘಡದಿಂದ ಮನೆ ಹೊತ್ತಿ ಉರಿದು ನಷ್ಟ ಸಂಭವಿಸಿದ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಗಣೇಶಕೋಡಿ ರಾಜೇಶ್ವರಿ ರವರಿಗೆ 10 ಸಾವಿರ ಮಂಜೂರಾಗಿದ್ದು ಇದನ್ನು ಮೇ 5 ಮಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ, ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಂಟ್ವಾಳ ತಾಲೂಕು ಜನಜಾಗೃತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹೈದರಾಬಾದಿನ ಇಂಡಿಯನ್ ಸ್ಕೂಲ್ ಆಫ್ ಬುಸಿನೆಸ್ ಸಂಸ್ಥೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಧ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಪಾನಮುಕ್ತರಾದ ನವಜೀವನ ಸಮಿತಿ ಸದಸ್ಯರ ಸಂದರ್ಶನ – ಕಹಳೆ ನ್ಯೂಸ್

ಬಂಟ್ವಾಳ: ಹೈದರಾಬಾದಿನ ಇಂಡಿಯನ್ ಸ್ಕೂಲ್ ಆಫ್ ಬುಸಿನೆಸ್ ಸಂಸ್ಥೆಯವರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ನಡೆಯುತ್ತಿರುವ ನಡೆಯುತ್ತಿರುವ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಪಾನಮುಕ್ತರಾದ ನವಜೀವನ ಸಮಿತಿ ಸದಸ್ಯರ ಸಂದರ್ಶನ ಕಾರ್ಯಕ್ರಮವು ಮೇ 5 ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಇದರ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಜರಗಿತು ಐ ಎಸ್ ಬಿ ಸಂಶೋಧನಾ ಸಂಸ್ಥೆಯ ಸಹ ನಿರ್ದೇಶಕರಾದ ಆನಂದ್ ಎಸ್ ರವರು ದೀಪ ಬೆಳಗಿಸುವ...
1 3 4 5 6 7 219
Page 5 of 219