ಪುಣ್ಯಭೂಮಿ ಧರ್ಮಸ್ಥಳವನ್ನು ಅಪವಿತ್ರಗೊಳಿಸುವ ಯತ್ನವೇಕೇ…!!?? – ಶ್ರೀನಿಧಿ ಹೆಗ್ಡೆ-ಕಹಳೆ ನ್ಯೂಸ್
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಇದು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ. ಇದು ನಮ್ಮ ನಾಡಿನ ನಂಬಿಕೆಯ ಮಡಿಲು, ಭಕ್ತಿಯ ಶುದ್ಧ ರೂಪ, ಸಹಸ್ರಾರು ಕುಟುಂಬಗಳಿಗೆ ಬೆಳಕಾಗಿರುವ ಜೀವಂತ ಧಾರ್ಮಿಕ ಕ್ಷೇತ್ರ. ದೇವತಾ ಸಾನ್ನಿಧ್ಯದಲ್ಲಿ ಈ ಕ್ಷೇತ್ರವು ಸಾವಿರಾರು ಸಮಾಜಮುಖಿ ಯೋಜನೆಗಳ ಮೂಲಕ ಪ್ರಜ್ವಲಿತವಾಗಿದ್ದು, ಸಾಮಾಜಿಕ ಬದಲಾವಣೆಗೆ ಮಾದರಿಯಾಗಿ ನಿಂತಿದೆ. ಇಂತಹ ಪುಣ್ಯಭೂಮಿಯ ವಿರುದ್ಧ ಇತ್ತೀಚೆಗೆ ಕೆಲವರು, ಧಾರ್ಮಿಕ ಶ್ರದ್ಧೆಯ ವಿರೋಧಿಗಳು ಹಾಗೂ ನಿರಾಧಾರ ನಿಲುವು ಹೊಂದಿರುವವರು, ಧರ್ಮಸ್ಥಳದ...







