Wednesday, September 16, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಾಷ್ಟ್ರಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು, ನಿವೃತ್ತ ಸೇನಾನಿಗಳ ಸಂಘ, ಊರ ಪರವೂರ ದೇಶ ಭಕ್ತರ ಸಹಕಾರದೊಂದಿಗೆ ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಬರೆಮೇಲು ಮುಗೇರಡ್ಕ ಇವರಿಗೆ ವೈಭವಪೂರ್ಣ ಮೆರವಣಿಗೆ ಹಾಗೂ ಅಭಿನಂದನಾ ಕಾರ್ಯಕ್ರಮ- ಕಹಳೆ ನ್ಯೂಸ್

ಮೊಗ್ರು :ದೇಶದ ರಕ್ಷಣಾ ವಿಭಾಗದ ಭೂಸೇನೆಯಲ್ಲಿ 22 ವರ್ಷಗಳ ಕಾಲ ಅಪ್ರತಿಮ ಸೇವೆಗೈದು ನಿವೃತರಾಗಿ ಹುಟ್ಟೂರಿಗೆ ಆಗಮಿಸುತ್ತಿರುವ ಭಾರತಾಂಬೆಯ ಹೆಮ್ಮೆಯ ಸುಪುತ್ರ ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕ, ಬರೆಮೇಲು ನಿವಾಸಿ ದೇವಪ್ರಸಾದ್ ಗೌಡ ರವರು 01 ಫೆಬ್ರವರಿ 2026,ಆದಿತ್ಯವಾರ ಸಂಜೆ: 4.30 ಕ್ಕೆ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ಕುಪ್ಪೆಟ್ಟಿ- ಉರುವಾಲು- ಪದ್ಮುಂಜ- ಮೈರೋಳ್ತಡ್ಕ - ಅಲೆಕ್ಕಿ ಮೊಗ್ರು - ಮುಗೇರಡ್ಕ ದೈವಸ್ಥಾನ ಬಳಿಯವರೆಗೆ ಮೆರವಣಿಗೆ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ : ಶಾಸಕ ಹರೀಶ್ ಪೂಂಜ- ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತುರ್ತು ದುರಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಗತ್ಯ ಅನುದಾನವನ್ನು ಒದಗಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಶಾಸಕರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರವು ಬೆಳ್ತಂಗಡಿ ತಾಲೂಕಿನ 14 ವಿವಿಧ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಟ್ಟಡ ದುರಸ್ತಿ ಹಾಗೂ ಶೌಚಾಲಯಗಳ ಅಭಿವೃದ್ಧಿಗಾಗಿ ಒಟ್ಟು ರೂ.57.93 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದೆ. ಈ ಅನುದಾನದಿಂದ ಶಾಲೆಗಳ ಮೂಲಭೂತ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ -ಕಹಳೆ ನ್ಯೂಸ್

ಬೆಳಾಲು: ಜ 28 ಗ್ರಾಮ ಪಂಚಾಯತ್ ಬೆಳಾಲು ಹಾಗೂ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಯೋಗದಲ್ಲಿ ಬೆಳಾಲು ಗ್ರಾಮದ ಕೂಡಲ್ ಕೆರೆ ಎಂಬಲ್ಲಿನ ಮುಖ್ಯರಸ್ತೆಯ ಇಕ್ಕೆಲದಲ್ಲಿದ್ದ ಕಸ ಕಡ್ಡಿಗಳನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಪಂಚಾಯತ್ ಸಿಬ್ಬಂದಿಗಳಾದ ಪೂರ್ಣಿಮಾ, ಡೀಕಯ್ಯ, ಭುವನೇಶ್, ಶ್ರೇಷ್ಠ, ನಾಗಾಂಬಿಕಾ ಸಂಜೀವಿನಿ ಮಹಿಳಾ ಒಕ್ಕೂಟ ರಿ. ಬೆಳಾಲು ಇದರ ಅಧ್ಯಕ್ಷರು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ -ಕಹಳೆ ನ್ಯೂಸ್

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎನ್ನುವ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಶಾಸಕ ಹರೀಶ್ ಪೂಂಜರವರು ಗೃಹ ಸಚಿವರಾದ ಜಿ ಪರಮೇಶ್ವರ್ ರವರಿಗೆ ಆಗ್ರಹಿಸಿದರು. ಸುಮಂತ್‌ನ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದು, ಕುಟುಂಬಸ್ಥರು ಹಾಗೂ ಸ್ಥಳೀಯ ಸಾರ್ವಜನಿಕರು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಲೋಪದೋಷಗಳು ನಡೆಯದಂತೆ, ಎಲ್ಲಾ ಆಯಾಮಗಳಿಂದ ತನಿಖೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ 36 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ- ಕಹಳೆ ನ್ಯೂಸ್

ಬಂದಾರು : ಜ 25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಜ. 25 ಆದಿತ್ಯವಾರ ದಂದು ಮೈರೋಳ್ತಡ್ಕದಲ್ಲಿ 36 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪೂಜಾ ಸಮಿತಿಯ ಅಧ್ಯಕ್ಷರಾದ ಚಂದಪ್ಪ ಗೌಡ ನಡುಮಜಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ-ಕಹಳೆ ನ್ಯೂಸ್

ಉರುವಾಲು:  ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲ ಹಿಂದೂ ಸಂಗಮ ಕಾರ್ಯಕ್ರಮ ಜ.25 ರಂದು ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾಭವನ ದಲ್ಲಿ ನೆರವೇರಿತು. ವಿವಿಧ ಭಜನಾ ಮಂಡಳಿಗಳ ಸದಸ್ಯರಿಂದ ಕುಣಿತ ಭಜನೆ, ಗೊಪೂಜೆ, ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಪ್ರಜ್ವಲನೆಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಗ್ರಾಮವಿಕಾಸ ಪ್ರಾಂತ ಸಂಯೋಜಕರಾದ ಜಗದೀಶ್ ಕಲ್ಲಡ್ಕರವರು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೈಕ್ ಕದ್ದ ಕದಿಮರನ್ನು ಮರಕ್ಕೆ ಕಟ್ಟಿ ಥಳಿಸಿದ ಸಾರ್ವಜನಿಕರು,ಪ್ರಕರಣ ದಾಖಲು- ಕಹಳೆ ನ್ಯೂಸ್

ಬೆಳ್ತಂಗಡಿ : ಬೈಕ್ ಕಳ್ಳತನಕ್ಕೆ ಯತ್ನದ ಆರೋಪದ ಹಿನ್ನೆಲೆ ಇಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಸಾರ್ವಜನಿಕರು ಹಲ್ಲೆನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯಲ್ಲಿ ನಡೆದಿದೆ. ಜ.20 ರಂದು ತಡರಾತ್ರಿ ಬೆಳ್ತಂಗಡಿಯ ಮರೋಡಿ ಗ್ರಾಮದ ಪಳಾರಗೋಳಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ದೇವಿ ಪ್ರಸಾದ್ ಎಂಬವರ ಬೈಕ್ ಕಳ್ಳತನವಾಗಿದ ಆರೋಪ ಕೇಳಿಬಂದಿದ್ದು ಮಂಗಳೂರಿನ ಕುಳೂರು ನಿವಾಸಿ ಮೋಯಿದ್ದಿನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಎಂಬರ...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ) ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ) ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವನ್ನು ಕೊರಿಂಜ ಸಮುದಾಯ ಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ವಲಯದ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ ರವರು ವಹಿಸಿದರು.ನಿಕಟ ಪೂರ್ವ ವಲಯಾಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ ರವರು ದೀಪ ಬೆಳಗಿಸು ದರೊಂದಿಗೆ ಉದ್ಘಾಟಿಸಿದರು. ತರಬೇತಿ ಕಾರ್ಯಗಾರದಲ್ಲಿ ಯೋಜನಾಧಿಕಾರಿಯವರಾದ ಅಶೋಕ್ ರವರು ಒಕ್ಕೂಟದ ಮಹತ್ವ,ಪದಾಧಿಕಾರಿಗಳ ಜವಾಬ್ದಾರಿ,ಒಕ್ಕೂಟದಲ್ಲಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನ,ಯೋಜನೆಯಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ...
1 3 4 5 6 7 83
Page 5 of 83