ಮೂಡುಬಿದಿರೆಯಲ್ಲಿ ತಂದೆ ಚಲಾಯಿಸುತ್ತಿದ್ದ ಲಾರಿಯಡಿಗೆ ಸಿಲುಕಿ ಬಾಲಕ ದಾರುಣ ಸಾವು-ಕಹಳೆ ನ್ಯೂಸ್
ಬೆಳ್ತಂಗಡಿ : ಮೂಡುಬಿದಿರೆಯಲ್ಲಿ ನಿನ್ನೆ ಸಂಜೆ ತಂದೆ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ 8 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕ, ಉಜಿರೆ ಅತ್ತಾಜೆ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ ಮೂರನೇ ತರಗತಿ ವಿದ್ಯಾರ್ಥಿ ಮುರ್ಷಿದ್. ಉಜಿರೆ ನಿವಾಸಿಯಾಗಿರುವ ಅತ್ತಾಜೆ ಇಬ್ರಾಹಿಂ ಹಾಗೂ ರಹಿಮತ್ ದಂಪತಿಯ ಇಬ್ಬರು ಮಕ್ಕಳಲ್ಲಿ ಮುರ್ಷಿದ್ ಮೊದಲನೆಯವನಾಗಿದ್ದ. ಇಬ್ರಾಹಿಂ ಮೂಡುಬಿದಿರೆಯ ಕಲ್ಲಿನಕೋರೆಗೆ ಹೋಗುವಾಗ ಬಾಲಕನೂ...







