ಬೆಳ್ತಂಗಡಿಯ ಪಟ್ರಮೆಯಲ್ಲಿ ಮರ ತುಂಡರಿಸುವ ವೇಳೆ ಮರ ಬಿದ್ದು ಮೂವರು ದುರ್ಮರಣ- ಕಹಳೆನ್ಯೂಸ್
ಬೆಳ್ತಂಗಡಿ : ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಸಮೀಪ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ಧೂಪದ ಮರ ತುಂಡರಿಸುವ ವೇಳೆ ಮರ ಬಿದ್ದು ಮೂವರು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮಧ್ಯಾಹ್ನದ ವೇಳೆ ಮರ ತುಂಡರಿಸುವ ವೇಳೆ ಈ ಅವಘಡ ಸಂಭವಿಸಿದ್ದು, ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿದ ಪಟ್ರಮೆ ರಾಮಣ್ಣ ಕುಂಬಾರ ಅವರ 21 ವರ್ಷದ ಪುತ್ರ ಪ್ರಶಾಂತ್, ಸೇಸಪ್ಪ ಪೂಜಾರಿ...







