Saturday, April 25, 2026

ಕುಂದಾಪುರ

ಉಡುಪಿಕುಂದಾಪುರಸುದ್ದಿ

ಕುಂದಾಪುರ: ಕುಂದಾಪುರದ ಜನ ಹೃದಯವಂತರು – ಸೈಕಲ್ ಜಾಥ ಉದ್ಘಾಟಿಸಿದ ಕೋಟ ಶ್ರೀನಿವಾಸ್ ಪೂಜಾರಿ-ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕುಂದಾಪುರ, ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕೋಟೇಶ್ವರ,, ಎಂ.ಜಿ.ಫ್ರೆAಡ್ಸ್ ಕುಂಭಾಸಿ, ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ತೆಕ್ಕಟ್ಟೆ ಘಟಕ, ಸೈಕಲ್ ಅಸೋಸಿಯೇಶನ್ ಕುಂದಾಪುರ ಇವರ ಸಹಯೋಗದೊಂದಿಗೆ ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥ “ಯೋಧ-2024” ಕಾರ್ಯಕ್ರಮಕ್ಕೆ ಕೋಟ ಶ್ರೀನಿವಾಸ್ ಪೂಜಾರಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕುಂದಾಪುರದ ಜನ ಹೃದಯವಂತರು...
ಕುಂದಾಪುರಕ್ರೀಡೆಶಿಕ್ಷಣಸುದ್ದಿ

ಚದುರಂಗ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ವಿದ್ಯಾರಣ್ಯ ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

"ಹಿಂದೆ ರಾಜಾಶ್ರಯದಲ್ಲಿ ಬೆಳಕು ಕಾಣುತ್ತಿದ್ದ ಪ್ರತಿಭೆಗಳು ಇಂದು ಶಾಲೆಗಳಲ್ಲಿ ಬೆಳಕು ಕಾಣುತ್ತಿವೆ.ಮಕ್ಕಳಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ಹೊರ ಜಗತ್ತಿಗೆ ತರಲು ಶಾಲೆಯಷ್ಟು ಒಳ್ಳೆಯ ವೇದಿಕೆ ಬೇರೆ ಎಲ್ಲಿಯೂ ಸಿಗಲು ಸಾಧ್ಯವಿಲ್ಲ" ಎಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಿರ್ದೇಶಕರಾಗಿರುವ ಡಾ.ಜೀವನ್ ರಾಮ್ ಸುಳ್ಯ ಹೇಳಿದರು. ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ - ಮತ್ಯಾಡಿ ಇಲ್ಲಿ ಚದುರಂಗ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಅಭಿನಂದನಾ ಸಮಾರಂಭ ನಡೆಯಿತು. ಉಡುಪಿ...
ಕುಂದಾಪುರ

ಕುಂದಾಪುರ: ಹಿರಿಯ ಪತ್ರಕರ್ತ ಜಯಕರ ಸುವರ್ಣ ಅವರಿಗೆ ಶ್ರದ್ಧಾಂಜಲಿ ಸಭೆ – ಕಹಳೆ ನ್ಯೂಸ್

ಕುಂದಾಪುರ: ಹಿರಿಯ ಪತ್ರಕರ್ತರಾಗಿ ಕಿರಿಯ ಪತ್ರಕರ್ತರಿಗೆ ಮಾರ್ಗದರ್ಶನ ನೀಡುತ್ತಾ ಬಂದಿದ್ದ ಜಯ ಕರ ಸುವರ್ಣ ಅವರು ಸರಳ ವ್ಯಕ್ತಿತ್ವದ ಸಜ್ಜನ ವರದಿಗಾರ ಎಂದು ಹೆಸರಾದವರು. ಅವರ ಜೀವನದಲ್ಲಿ ಹಮ್ಮುಬಿಮ್ಮಿಲ್ಲದೆ ಎಲ್ಲರೊಂದಿಗೆ ಬೆರೆತು ಸಾಮಾಜಿಕ ಬದ್ಧತೆಯನ್ನು ಮೆರೆದವರು ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನ ಮಠ ಹೇಳಿದರು. ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ದಿವಂಗತ ಜಯಕರ ಸುವರ್ಣ ಅವರ ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿ ಅವರು...
ಕುಂದಾಪುರಸುದ್ದಿ

ಕುಂದಾಪುರ : ನಾಡಾ ರೇ.ಫಾ.ರೋಬರ್ಟ್ ಝಡ್.ಎಂ.ಡಿಸೋಜಾ ಐಟಿಐ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ : ಸಮಾಜಕ್ಕೆ ಹಾಗೂ ನಮಗೆ ವಯಕ್ತಿಕವಾಗಿ ಒಳಿತಾಗುವ ಯಾವುದೆ ಭಾವನೆ, ಸಲಹೆ, ಸೂಚನೆಗಳು ನಮ್ಮಲ್ಲಿ ಮೂಡಿದಾಗ ಅದನ್ನು ಬಹಿರಂಗವಾಗಿ ಪ್ರಕಟಪಡಿಸುವ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಪ್ರತಿ ವ್ಯಕ್ತಿಯಲ್ಲಿ ಆಗಾಧವಾದ ಜ್ಞಾನ ಸಂಪತ್ತು ಹುದುಗಿರುತ್ತದೆ, ಭಾμÉಯ ಸಂವಹನದ ಮೂಲಕ ಅದನ್ನು ಉದ್ದೀಪನಗೊಳಿಸುವ ಕೆಲಸಗಳು ಆಗಬೇಕು ಎಂದು ಉಡುಪಿಯ ಆಭರಣ ಮೋಟಾರ್ಸ್ ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿ ವಿನಾಯಕ ಕಾಮತ್ ಹೇಳಿದರು. ಇಲ್ಲಿಗೆ ಸಮೀಪದ ನಾಡಾ ರೇ.ಫಾ.ರೋಬರ್ಟ್ ಝಡ್.ಎಂ.ಡಿಸೋಜಾ ಐಟಿಐ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ...
ಕುಂದಾಪುರಸುದ್ದಿ

ಕುಂದಾಪುರ ಸಮೀಪದ ನಾಡಾ ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜಾ ಸ್ಮಾರಕ ಐಟಿಐ ಕಾಲೇಜಿನಲ್ಲಿ ಕೋಟ ಗೀತಾನಂದ ಫೌಂಡೇಶನ್ ಸಹಯೋಗದಲ್ಲಿ ನಡೆದ ವನ ಮಹೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್

ಕುಂದಾಪುರ : ಕುಂದಾಪುರ ಸಮೀಪದ ನಾಡಾ ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜಾ ಸ್ಮಾರಕ ಐಟಿಐ ಕಾಲೇಜಿನಲ್ಲಿ ಕೋಟ ಗೀತಾನಂದ ಫೌಂಡೇಶನ್ ಸಹಯೋಗದಲ್ಲಿ ವನ ಮಹೋತ್ಸವ ಕಾರ್ಯಕ್ರಮ ನಡೆಯಿತು. ಮನುಷ್ಯನ ಬದುಕಿನ ಅವಿಭಾಜ್ಯ ಅವಶ್ಯಕತೆಯಾಗಿರುವ ಸಸ್ಯರಾಶಿಗಳನ್ನು ಉಳಿಸಿ-ಬೆಳೆಸುವ ಮೂಲಕ ಜೀವ ಕುಲವನ್ನು ಸಂರಕ್ಷಣೆ ಮಾಡುವ ಕೆಲಸ ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ಅವರ ನೇತ್ರತ್ವದಲ್ಲಿ ನಡೆಯುತ್ತಿರುವುದು ಅತ್ಯಂತ ಸುತ್ಯರ್ಹ ಎಂದು ನಾಡಾ ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜಾ...
ಕುಂದಾಪುರಸುದ್ದಿ

ಕುಂದಾಪುರದ ಮೊಗವೀರ ಭವನದಲ್ಲಿ ನಡೆದ ‘ಜನತಾ ನವನೀತ-2024’ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ: ಗೆದ್ದವರ ಕಥೆಗಳಿಗಿಂತಲೂ ಅತೀ ಹೆಚ್ಚು ಸೋತವರ ಕಥೆಗಳನ್ನು ಓದಬೇಕು. ಗೆದ್ದವರ ಕಥೆಗಳು ಅಹಂಕಾರವನ್ನು ಕಲಿಸಿದರೆ ಸೋತವರ ಕಥೆಗಳು ನಮಗೆ ಬದುಕುವುದನ್ನು ಕಲಿಸುತ್ತವೆ. ಯಶೋಗಾಥೆಗಳು ಆರಂಭವಾಗುವುದೇ ಬಡತನ ಹಾಗೂ ಹಸಿವಿನಿಂದ ಎಂದು ಶಿಕ್ಷಕ, ವ್ಯಕ್ತಿತ್ವ ವಿಕಸನ ತರಬೇತುದಾರ ರಾಜೇಂದ್ರ ಭಟ್ ಕೆ ಅಭಿಮತ ವ್ಯಕ್ತಪಡಿಸಿದರು. ಕುಂದಾಪುರದ ಮೊಗವೀರ ಭವನದಲ್ಲಿ  ಜರುಗಿದ ವಿವಿವಿ ಮಂಡಳಿ (ರಿ) ಹೆಮ್ಮಾಡಿ, ಸಮರ್ಪಣಾ ಎಜ್ಯುಕೇಶನಲ್ ಟ್ರಸ್ಟ್ (ರಿ) ಆಡಳಿತಕ್ಕೊಳಪಟ್ಟ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ...
ಕುಂದಾಪುರಸುದ್ದಿ

ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ) ಕುಂದಾಪುರ ಆಡಳಿತದ ಲಿಟ್ಲ್ ಸ್ಟಾರ್ (ವಿದ್ಯಾರಣ್ಯ) ಆಂಗ್ಲಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿಯಲ್ಲಿ ನಡೆದ ವಿದ್ಯಾರ್ಥಿ ಪರಿಷತ್ ಪ್ರದಗ್ರಹಣ ಹಾಗೂ ಕಾನೂನು ಅರಿವು ಸಮಾರಂಭ-ಕಹಳೆ ನ್ಯೂಸ್

ಕುಂದಾಪುರ: ನಾಯಕನಾಗಿ ಬೆಳೆಯುವವನಿಗೆ ಸಮಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಜ್ಞಾನವೂ ಇರಬೇಕು. ಆಗ ಮಾತ್ರ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಿರಂತರ ಓದು ಭವಿಷ್ಯವನ್ನು ರೂಪಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗುತ್ತದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು. ಅವರು ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ) ಕುಂದಾಪುರ ಆಡಳಿತದ ಲಿಟ್ಲ್ ಸ್ಟಾರ್ (ವಿದ್ಯಾರಣ್ಯ) ಆಂಗ್ಲಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿಯಲ್ಲಿ ನಡೆದ ವಿದ್ಯಾರ್ಥಿ ಪರಿಷತ್ ಪ್ರದಗ್ರಹಣ ಹಾಗೂ ಕಾನೂನು ಅರಿವು...
ಕುಂದಾಪುರಸುದ್ದಿ

ಕುಂದಾಪುರ:ಕಂಡ್ಲೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಛಾಯಾಗ್ರಾಹಕನ ಮೃತದೇಹ ಕುಂದಾಪುರ ಆನಗಳ್ಳಿ ನದಿ ತೀರದಲ್ಲಿ ಪತ್ತೆ -ಕಹಳೆ ನ್ಯೂಸ್

ಕುಂದಾಪುರ: ಗಂಡ ಹೆಂಡತಿ ನಡುವೆ ನಡೆದ ಗಲಾಟೆ ಪೊಲೀಸ್ ಮೆಟ್ಟಿಲೇರಿದ ಪರಿಣಾಮ ಮನನೊಂದು ಪತಿ ಮನೆಯವರ ಎದುರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಡ್ಲೂರು ಎಂಬಲ್ಲಿ ನಡೆದಿದೆ. ನದಿಗೆ ಹಾರಿ ನಾಪತ್ತೆಯಾಗಿರುವವರನ್ನು ಕಾಳಾವರ ಜನತಾ ಕಾಲನಿ ನಿವಾಸಿ ಹರೀಶ್ (44) ಎಂದು ಗುರುತಿಸಲಾಗಿದ್ದು, ಇವರು ವೃತ್ತಿಯಲ್ಲಿ ಪೋಟೋಗ್ರಾಫರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಹರೀಶ್ ಸುಮಾರು 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ಇತ್ತಿಚಿನ ದಿನಗಳಲ್ಲಿ ಗಂಡ ಹೆಂಡತಿ ನಡುವೆ...
1 8 9 10 11 12 20
Page 10 of 20