Sunday, September 6, 2026

ಕುಂದಾಪುರ

ಕುಂದಾಪುರಸುದ್ದಿ

ಕುಂದಾಪುರ : ಬಸ್ಸು ಬೈಕ್ ಢಿಕ್ಕಿ: ಪೌರಕಾರ್ಮಿಕ ಸಾವು – ಕಹಳೆ ನ್ಯೂಸ್

ಕುಂದಾಪುರ : ಇಲ್ಲಿನ ಹಂಗಳೂರು ಬಳಿ ರಾತ್ರಿ ಬಸ್ ಬೈಕ್ ಢಿಕ್ಕಿಯಾಗಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಬಾರಕೂರಿನ ನಿವಾಸಿ, ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಂದರ (39) ಮೃತರು ತಂದೆ,ತಾಯಿಯನ್ನು ಅಗಲಿದ್ದಾರೆ. ಇವರು ಕೋಟೇಶ್ವರ ಕಡೆಯಿಂದ ಬೈಕ್ ನಲ್ಲಿ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದಾಗ ಹೆದ್ದಾರಿಯಿಂದ ಖಾಸಗಿ ಬಸ್ ಡಿಪೋಗೆ ನುಗ್ಗುತ್ತಿದ್ದಾಗ ಢಿಕ್ಕಿಯಾಗಿದೆ. ಸ್ಥಳದಲ್ಲೇ ಸುಂದರ ಅವರು ಮೃತಪಟ್ಟಿದ್ದು ನೂರಾರು ಜನ ಜಮಾಯಿಸಿದರು. ವೃತ್ತ ನಿರೀಕ್ಷಕ...
ಕುಂದಾಪುರಸುದ್ದಿ

ದ್ವೇಷ ಭಾವನೆ ಬಿತ್ತಿದ ರಾಹುಲ್ ಗಾಂಧಿ ವರ್ತನೆಯಿಂದ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿ ಮಗದೊಮ್ಮೆ ಬಟ್ಟಾಬಯಲಾಗಿದೆ : ಕಿಶೋರ್ ಕುಮಾರ್ ಕುಂದಾಪುರ-ಕಹಳೆ ನ್ಯೂಸ್

ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ 'ತಮ್ಮನ್ನು ತಾವು ಹಿಂದೂಗಳು ಎಂದು ಕರೆಸಿಕೊಳ್ಳುವವರು 24 ಗಂಟೆ ದ್ವೇಷ, ಹಿಂಸೆ ಮತ್ತು ಸುಳ್ಳಿನಲ್ಲಿ ನಿರತರಾಗಿದ್ದಾರೆ' ಎನ್ನುವ ದುರುದ್ದೇಶಪೂರಿತ ಮಾತನ್ನಾಡುವ ಮೂಲಕ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿಯನ್ನು ಮಗದೊಮ್ಮೆ ಬಟ್ಟಾಬಯಲುಗೊಳಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಹಿಂದೂ ವೇಷಧಾರಿಯಾಗಿ ದೇವಸ್ಥಾನಗಳನ್ನು ಸುತ್ತುವ ರಾಹುಲ್ ಗಾಂಧಿ ತನ್ನ ಅಪ್ರಬುದ್ಧ ಮಾತುಗಳಿಂದ ಕಪಟತನವನ್ನು ಪ್ರದರ್ಶಿಸಿ ಜಗತ್ತಿನ...
ಕುಂದಾಪುರಸುದ್ದಿ

ಕುಂದಾಪುರದ ಆರ್.ಎನ್.ಶೆಟ್ಟಿ. ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ-ಕಹಳೆ ನ್ಯೂಸ್

ಕುಂದಾಪುರ : ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಕುಂದಾಪುರ ಶಾಸ್ತ್ರಿ ಸರ್ಕಲ್ ಸಮೀಪದ ಆರ್.ಎನ್.ಶೆಟ್ಟಿ. ಸಭಾಭವನದಲ್ಲಿ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. ಜನ ಸ್ಪಂದನ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಎ.ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಮುಂದಿನ ದಿನಗಳಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಹೆಚ್ಚಾಗಿ ತಿಳಿಯುವಂತೆ ಪ್ರಚಾರ ನೀಡಿ. ಹೆಚ್ಚಿನ ಜನರಿಗೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಮತ್ತು ಈ ದಿನ...
ಕುಂದಾಪುರಸುದ್ದಿ

ಗ್ರಾಮ ಪಂಚಾಯಿತಿನ ಸಮಸ್ಯೆಗಳ ಬಗ್ಗೆ ಶೀಘ್ರ ಪರಿಹಾರಕ್ಕಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರನ್ನು ಶಾಸಕರಿಂದ ಬೇಟಿ – ಕಹಳೆ ನ್ಯೂಸ್

ಕುಂದಾಪುರ : ಗ್ರಾಮ ಪಂಚಾಯಿತಿಗಳಲ್ಲಿನ ಜಲ್ ಜೀವನ್ ಮಿಷನ್ ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ, ಮೊಬೈಲ್ ಟವರ್ ಲೈಸೆನ್ಸ್ ನೀಡುವ ಬಗ್ಗೆ ಹಾಗೂ ಸಾರ್ವಜನಿಕರಿಗೆ ಕ್ಲಪ್ತ ಸಮಯದಲ್ಲಿ ಸೇವೆಯನ್ನು ಒದಗಿಸಿ ಕ್ರಮ ಕೈಗೊಳ್ಳುವ ಬಗ್ಗೆ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಶ್ರೀ ಪ್ರತೀಕ್ ಬಾಯಲ್, ಇವರನ್ನು ಭೇಟಿಯಾಗಿ ಚರ್ಚಿಸಲಾಯಿತು. ಈ ಬಗ್ಗೆ ಅವರು ಪರಿಹಾರಕ್ಕಾಗಿ ಅಧ್ಯಕ್ಷರು,...
ಕುಂದಾಪುರಶಿಕ್ಷಣಸುದ್ದಿ

ದಿ|ಕಂಡ್ಲೂರುನರಸಿಂಹ ಜೋಗಿ ಹಾಗೂ ದಿ|ಶ್ರೀಮತಿ ಗಿರಿಜಾನರಸಿಂಹ ಜೋಗಿ ಸ್ಮರಣಾರ್ಥ ನೋಟ್ ಪುಸ್ತಕ ಕ್ರೀಡಾ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ- ಕಹಳೆ ನ್ಯೂಸ್

"ವಿದ್ಯಾರ್ಥಿಗಳ ಭವ್ಯ ಭವಿಷ್ಯ ರೂಪಿಸುವ, ವಿದ್ಯಾರ್ಥಿಗಳ ಸಾಧನೆ ಹಿಂದಿರುವ ಶಿಕ್ಷಕರನ್ನು ಗೌರವಿಸುವುದರೊಂದಿಗೆ, ಅಬ್ದುಲ್ ಕಲಾಂ ಮತ್ತು ವಿವೇಕಾನಂದರು ನಮ್ಮ ಬದುಕಿನ ಆದರ್ಶವಾಗಬೇಕು. ನಮ್ಮಿಂದ ನಮ್ಮ ತಂದೆ ತಾಯಿ ಗುರುತಿಸಿಕೊಳ್ಳುವಂತಾದರೆ ಅದು ನಮ್ಮ ಬದುಕಿನ ಬಹುದೊಡ್ಡ ಸಾರ್ಥಕತೆ" ಎಂದು ಶ್ರೀ ಶ್ರೀನಿವಾಸ ಜೋಗಿ ಮಾಲಕರು ,ಶ್ರೀ ಭವಾನಿ ಕಂಗನ್ ಸ್ಟೋರ್ಸ್ ಬೆಂಗಳೂರು ಇವರು ಹೇಳಿದರು. ರಾಮ್ಸನ್ ಸರ್ಕಾರಿ ಪ್ರೌಢಶಾಲೆ ಕಂಡ್ಲೂರು ಇಲ್ಲಿಯ ವಿದ್ಯಾರ್ಥಿಗಳಿಗೆ ತಮ್ಮ ತಂದೆ ತಾಯಿಯ ಸವಿನೆಪಿನಲ್ಲಿ ಪ್ರತಿ ವರ್ಷ...
ಕುಂದಾಪುರಸುದ್ದಿ

ಸಾರ್ವಜನಿಕರ ಮನವಿಗೆ ತುರ್ತಾಗಿ ಸ್ಪಂದಿಸಿದ ಕುಂದಾಪುರ ಶಾಸಕರು– ಕಹಳೆ ನ್ಯೂಸ್

ಕುಂದಾಪುರ: ಪುರಸಭಾ ವ್ಯಾಪ್ತಿಯ ಚಿಕ್ಕನ್ ಸಾಲ್ ರಸ್ತೆಯ ಜೈಹಿಂದ್ ಹೋಟೆಲ್ ಹತ್ತಿರದ ಅಶ್ವತ್ಥ ಮರದ ಕೊಂಬೆಗಳು ಅಗಲವಾಗಿ ರಸ್ತೆಯ ಕಡೆಗೆ ವಾಲಿಕೊಂಡಿದ್ದು, ಮಳೆಗಾಲ ಪ್ರಾರಂಭಗೊಂಡಿರುವುದರಿಂದ ರಸ್ತೆಗೆ ಬಿದ್ದು ಜೀವ ಹಾನಿಯಾಗುವ ಸಂದರ್ಭವಿದ್ದು,,ಶಾಲಾ ವಿದ್ಯಾರ್ಥಿಗಳು ತಿರುಗುವಾಗ ವಾಹನಗಳು ಅಧಿಕವಾಗಿ ಈ ರಸ್ತೆಯಲ್ಲಿ ತಿರುಗುತ್ತಿದ್ದು ಹತ್ತಿರದ ಮನೆಗಳು ಅಂಗಡಿಗಳು ಹಾಗೂ ಹೋಟೆಲ್ ಗಳು ಇದ್ದು ದುರಂತ ಸಂಭವಿಸಿದರೆ ಅಪಾರ ಹಾನಿ ನಷ್ಟ ಆಗುತ್ತದೆ. ಆದ್ದರಿಂದ ದುರಂತ ನಡೆಯುವ ಮೊದಲೇ ಮರವನ್ನು ತೆರವುಗೊಳಿಸುವುದರ ಬಗ್ಗೆ...
ಕುಂದಾಪುರಸುದ್ದಿ

ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿ ನಡೆದ ಬೃಹತ್ ಪ್ರತಿಭಟನೆ –ಕಹಳೆ ನ್ಯೂಸ್

ಕುಂದಾಪುರ: ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ ಸಂಪನ್ಮೂಲ ಹೊಂದಾಣಿಕೆಗೆ ಮಾಡಿದ ತೈಲಬೆಲೆ ಏರಿಕೆ ಸಮಸ್ಯೆ, ಬಿಜೆಪಿಯವರಿಗೆμÉ್ಟೀ ಅಲ್ಲ ರಾಜ್ಯದ ಅಷ್ಟೂ ಜನರಿಗೆ. ಅದ್ದರಿಂದ ಎಲ್ಲರ ಪರವಾಗಿ ನಡೆಸುತ್ತಿರುವ ಪ್ರತಿಭಟನೆ ಇದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಹೇಳಿದರು. ಅವರು ಶಾಸ್ತ್ರಿ ಸರ್ಕಲ್ ನಲ್ಲಿ ಕುಂದಾಪುರ ತಾಲೂಕು ಬಿಜೆಪಿ ವತಿಯಿಂದ ನಡೆದ ತೈಲಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು. ಶಾಸಕ ಕಿರಣ್ ಕುಮಾರ್ ಕೊಡ್ಗಿ ತೈಲಬೆಲೆ ಏರಿಕೆಯಿಂದ ಎಲ್ಲ ವಸ್ತುಗಳ...
ಉಡುಪಿಕುಂದಾಪುರಸುದ್ದಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವಸತಿ ನಿಲಯದಲ್ಲಿ ಜರೂರು ದಾಖಲಾತಿ ಪ್ರಕ್ರಿಯೆ ಪ್ರಾರಂಭಿಸುವ ಬಗ್ಗೆ ಕುಂದಾಪುರ ಶಾಸಕರಿಂದ ಮನವಿ -ಕಹಳೆ ನ್ಯೂಸ್

ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2024 - 25ನೇ ಸಾಲಿಗೆ ವಿದ್ಯಾರ್ಥಿಗಳ ಶಾಲಾ ಹಾಗೂ ಕಾಲೇಜು ದಾಖಲಾತಿ ಪ್ರಾರಂಭವಾಗಿದ್ದು, ಸರಕಾರಿ ವಸತಿ ನಿಲಯಗಳಲ್ಲಿ ದಾಖಲಾತಿ ಪ್ರಾರಂಭವಾಗಿರುವುದಿಲ್ಲ. ಇದರಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದ್ದು , 5 ರಿಂದ 10ನೇ ತರಗತಿ ವಿದ್ಯಾರ್ಥಿಗಳಾಗಿರುವುದರಿಂದ ಪಿ.ಜಿ ಮಾಡಿ ಸಹ ಅವರನ್ನು ಇಡಲು ಸಾಧ್ಯವಾಗದ ಕಾರಣ ಅವರ ಶೈಕ್ಷಣಿಕ ಪ್ರಗತಿಗೆ ಅಡಚಣೆ ಉಂಟಾಗುತ್ತಿದೆ. ಹೊರ ಜಿಲ್ಲೆಗಳ ವಿದ್ಯಾರ್ಥಿಗಳು ಸಹ...
1 10 11 12 13 14 20
Page 12 of 20