ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ನಡೆದ “ಪಕ್ಷಿಗಾಗಿ ನೀರು” ಕಾರ್ಯಕ್ರಮ : ಪುರಸಭಾ ವ್ಯಾಪ್ತಿಯ ಅನೇಕ ಕಡೆ ಮಡಿಕೆ ಮೂಲಕ ಪಕ್ಷಿಗಳಿಗೆ ನೀರಿನ ವ್ಯವಸ್ಥೆ – ಕಹಳೆ ನ್ಯೂಸ್
ಕುಂದಾಪುರ : ಬಿಸಿಲಿನ ತಾಪದಿಂದಾಗಿ ಮನುಷ್ಯನಿಗಷ್ಟಲ್ಲದೇ ಪಕ್ಷಿಗಳಿಗೂ ನೀರಿನ ಕೊರತೆ ಉಂಟಾಗಿದೆ. ಈ ಬಿಸಿಲಿನ ತಾಪದಿಂದಾಗಿ ಅನೇಕ ಪಕ್ಷಿಗಳು ಪ್ರಾಣ ಕಳೆದುಕೊಳ್ಳುತ್ತಿದೆ. ಇದನ್ನು ಗಮನಿಸಿ ಕುಂದಾಪುರದ ಸಾಮಾಜಿಕ ಹೋರಾಟಗಾರರಾದ ಶಿವ ಕುಮಾರ್ ಮೆಂಡನ್ ನೇತೃತ್ವದಲ್ಲಿ, ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ "ಪಕ್ಷಿಗಾಗಿ ನೀರು" ಎನ್ನುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅದ್ಯಕ್ಷ ಕಿಶೋರ್ ಕುಮಾರ್ ಚಾಲನೆ ನೀಡಿ, ಮಾತನಾಡಿದ ಕಿಶೋರ್ ಕುಮಾರ್ ನೀರನ್ನು ಮಿತವಾಗಿ ಬಳಸುವುದು ಮತ್ತು ದುರ್ಬಳಕೆ...







