Thursday, July 23, 2026

ಕುಂದಾಪುರ

ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸುಜ್ಞಾನ ಪಿಯು ಕಾಲೇಜಿನಲ್ಲಿ ಯಶಸ್ವಿ ಕಬಡ್ಡಿ ಪಂದ್ಯಾಟ : ಕ್ರೀಡೆಯಲ್ಲಿ ಬದುಕು ಕಟ್ಟಿಕೊಳ್ಳಲು ಅಪಾರ ಅವಕಾಶ-ರಮೇಶ್‌ ಶೆಟ್ಟಿ -ಕಹಳೆ ನ್ಯೂಸ್

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಕಬಡ್ಡಿ ಪಂದ್ಯಾಟವು ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಕಾಲೇಜಿನ ಕ್ರೀಡಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮ ಉದ್ಘಾಟಿಸಿದ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಸುಕೇಶ್ ಶೆಟ್ಟಿ ಅವರು ಮಾತನಾಡಿ, ಕ್ರೀಡೆಯನ್ನು ಪ್ರೀತಿಸಿ, ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು;...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ನೇತೃತ್ವದಲ್ಲಿ ಯಶಸ್ವಿ ಥ್ರೋಬಾಲ್ ಪಂದ್ಯಾಟ -ಕಹಳೆ ನ್ಯೂಸ್

ಕುಂದಾಪುರ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ , ಕುಂದಾಪುರ ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ವಲಯ ಮಟ್ಟದ 17ರ ವಯೋಮಾನದ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯಾಟವು ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯ ಕ್ರೀಡಾಂಗಣದಲ್ಲಿ ಸೋಮವಾರ ಯಶಸ್ವಿಯಾಗಿ ನೆರವೇರಿತು. “ಕ್ರೀಡೆಯು ದೈಹಿಕ ಕ್ಷಮತೆ ಕಾಪಾಡಿಕೊಳ್ಳುವುದಕ್ಕೆ ಸಹಾಯ ಮಾಡುತ್ತದೆ.ಇದು ಜೀವನದಲ್ಲಿ ಶಿಸ್ತು ತರುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವಿಕೆಯೇ ಎಲ್ಲಕ್ಕಿಂತ ಮುಖ್ಯವಾದದ್ದು” ಎಂದು...
ಉಡುಪಿಕುಂದಾಪುರಜಿಲ್ಲೆಸುದ್ದಿ

ರಿಕ್ಷಾ ನಿಲ್ದಾಣಕ್ಕೆ ಹಾಕಲಾದ ಮೇಲ್ಚಾವಣಿ ಉದ್ಘಾಟಿಸಿದ :ಶಾಸಕ ಎ.ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ ನಗರದ ಹೃದಯ ಭಾಗದಲ್ಲಿರುವ ಶಾಸ್ತ್ರಿ ಸರ್ಕಲ್ಲಿನ ರಿಕ್ಷಾ ನಿಲ್ದಾಣಕ್ಕೆ ದಾನಿಗಳು ಹಾಗೂ ಶಾಸಕರ ಅನುದಾನದಿಂದ ಹಾಕಲಾದ ಮೇಲ್ಛಾವಣಿಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಹಾಗೂ ದಾನಿಗಳಾದ ದಿನೇಶ್ ಶೇರೆಗಾರ್ ದಿನೇಶ್ ಪ್ರಿಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ರಾಜಾಜಿನಗರ ಬೆಂಗಳೂರು ಇವರು ಜೊತೆಯಾಗಿ ಉದ್ಘಾಟಿಸಿ ದೀಪವನ್ನು ಪ್ರಜ್ವಲಿಸಿ ದಾನಿಗಳಿಗೆ ಅಭಿನಂದಿಸಿ ಮಾತನಾಡಿದ ಅವರು ರಿಕ್ಷಾ ಚಾಲಕರು ಇದನ್ನು ಸಮರ್ಪಕವಾಗಿ ಬಳಸಿಕೊಂಡು ಮುಂದಿನ ದಿನಗಳಲ್ಲಿ ರಿಕ್ಷಾ...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ರಾಷ್ಟ್ರೀಯ ಶಿಕ್ಷಣ ನೀತಿಯ ಅನಿವಾರ್ಯತೆ ಇದೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ -ಕಹಳೆ ನ್ಯೂಸ್

ಕುಂದಾಪುರ: ಸಮಾಜದಲ್ಲಿ ವಿದ್ಯಾವಂತರು, ಬುದ್ದಿವಂತರು, ಜ್ಞಾನಿಗಳು ಮೌನವಹಿಸಿದರೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯಂತಹ ಚಟುವಟಿಕೆಗಳು ಸಮಾಜದಲ್ಲಿ ಚರ್ಚೆಗೆ ಬಾರದಿದ್ದರೆ ಒಳ್ಳೆಯ ಕೆಲಸಗಳು ನಿರ್ಲಿಪ್ತವಾಗುವ ಅಪಾಯವಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಒಂದಷ್ಟು ಚರ್ಚೆಗಳು ಸಮಾಜ ಹಾಗೂ ಶಿಕ್ಷಕರ ಮಧ್ಯೆ ಆಗಬೇಕು. ನಮ್ಮ ಮುಂದಿನ ಪೀಳಿಗೆ ಶಕ್ತಿಯುತವಾಗಿ, ಭಾರತದ ಸದೃಢ ಪ್ರಜೆಗಳಾಗಿ ರೂಪುಗೊಳ್ಳಬೇಕಾದರೆ ರಾಷ್ಟ್ರೀಯ ಶಿಕ್ಷಣ ನೀತಿಯ ಅನಿವಾರ್ಯತೆ ಇದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಮತ...
ಉಡುಪಿಕುಂದಾಪುರಜಿಲ್ಲೆಶಿಕ್ಷಣಸುದ್ದಿ

ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗಾಗಿ ‘ಸಂಕಲ್ಪ್ – 2025’ ಫ್ರೆಶರ್ಸ್ ಡೇ ಕಾರ್ಯಕ್ರಮ -ಕಹಳೆ ನ್ಯೂಸ್

ಕುಂದಾಪುರ : ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗಾಗಿ 'ಸಂಕಲ್ಪ್ - 2025' ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಹಿರಿಯ ವಿದ್ಯಾರ್ಥಿಗಳು ಸಂಗೀತ, ನೃತ್ಯ ಮತ್ತು ಮನೋರಂಜನೆಯಿಂದ ತುಂಬಿದ ಸಾಂಸ್ಕೃತಿಕ ಚಟುವಟಿಕೆಯನ್ನು ಆಯೋಜಿಸುವ ಮೂಲಕ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು...
ಕುಂದಾಪುರಜಿಲ್ಲೆಶಿಕ್ಷಣಸುದ್ದಿ

ಸುಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸಂವಾದ -ಕಹಳೆ ನ್ಯೂಸ್

ಕುಂದಾಪುರ: ವ್ಯಕ್ತಿತ್ವದಲ್ಲಿ ತೃಪ್ತಿ ಎನ್ನುವ ಮೌಲ್ಯವನ್ನು ಅಳವಡಿಸಿಕೊಂಡರೆ ನೆಮ್ಮದಿಯ ಬದುಕು ನಡೆಸಲು ಸಾಧ್ಯವಾಗುತ್ತದೆ ಎಂದು ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಸೋಮವಾರ ನುಡಿದರು. ಕುಂದಾಪುರದ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕಾನೂನು ಬರುವ ಮೊದಲೇ ಸಮಾಜದಲ್ಲಿ ಕೆಲವು ಮೌಲ್ಯಗಳಿದ್ದವು. ಜನರು ಅದಕ್ಕೆ ಗೌರವ ನೀಡುತ್ತಿದ್ದರು. ಆದರೆ ಈಗ ಆ ಸಮಾಜ ಬದಲಾಗಿದೆ. ಶ್ರೀಮಂತರಿಗೆ ಮಣೆ ಹಾಕುವ ಪ್ರವೃತ್ತಿ ತಾಂಡವವಾಡುತ್ತಿದೆ. ಪ್ರಾಮಾಣಿಕತೆಗೆ, ಪ್ರಾಮಾಣಿಕರಿಗೆ ಬೆಲೆ...
ಉಡುಪಿಕುಂದಾಪುರಜಿಲ್ಲೆಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ:ಸುಜ್ಞಾನ ಪಿಯು ಕಾಲೇಜಿನ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ‌ ಆಯ್ಕೆ – ಕಹಳೆ ನ್ಯೂಸ್

ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಭಂಡಾರ್ ಕಾರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರು ಜಂಟಿಯಾಗಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಪಿ.ಯು. ಅಂತರ್ ಕಾಲೇಜು ಬಾಲಕ -ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಶ್ರೀ. ಪ್ರತಾಪ್ ಚಂದ್ರ...
ಉಡುಪಿಕುಂದಾಪುರಜಿಲ್ಲೆಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸುಜ್ಞಾನ ಪಿಯು ಕಾಲೇಜಿನಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ;ವಿದ್ಯಾರ್ಥಿಗಳು ಕಲೆಯನ್ನು ಅಸ್ವಾಧಿಸುವ ಗುಣವನ್ನು ಬೆಳೆಸಿಕೊಳ್ಳಲಿ-ಡಾ.ರಮೇಶ್ ಶೆಟ್ಟಿ – ಕಹಳೆ ನ್ಯೂಸ್

ಕುಂದಾಪುರ: ಆಗಷ್ಟೇ ಜಡಿ ಮಳೆ ಸುರಿದು ಧರೆಯಲ್ಲಾ ತಂಪಾದ ಗಳಿಗೆ! ಒಂದು ಕಡೆ ಮಕ್ಕಳೆಲ್ಲಾ ಹೊಸ ಬಟ್ಟೆ ತೊಟ್ಟುಕೊಂಡು ಖುಷಿಯಿಂದ ಓಡಾಡುತ್ತಿದ್ದರೆ, ಇನ್ನೊಂದು ಕಡೆ ಘಂ ಎನ್ನುವ ಹಬ್ಬದೂಟದ ಪರಿಮಳ. ಪೂಜೆ ಪುನಸ್ಕಾರಗಳು ಮತ್ತೊಂದು ಕಡೆ...ಅರೇ ಏನಿದು ಸಂಭ್ರಮ, ಸಡಗರವೆಂದು ಎಲ್ಲರೊಳಗೊಂದು ಕುತೂಹಲ! ಇದು ಯಡಾಡಿ-ಮತ್ಯಾಡಿಯ ಸುಂದರವಾದ ಪರಿಸರದಲ್ಲಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆ ಹಾಗೂ ಸುಜ್ಞಾನ ಪಿಯು ಕಾಲೇಜಿನಲ್ಲಿ ಕಂಡು ಬಂದ ಗೌರಿ-ಗಣೇಶ ಹಬ್ಬದ ಸಂಭ್ರಮ....
1 2 3 4 5 20
Page 3 of 20