Friday, April 24, 2026

ಕುಂದಾಪುರ

ಕುಂದಾಪುರಜಿಲ್ಲೆದಕ್ಷಿಣ ಕನ್ನಡಸುದ್ದಿ

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ; ದೇಶಭಕ್ತಿಯ ಉದ್ದೀಪನ ಆಂತರ್ಯದ ಶಕ್ತಿಯಲ್ಲಿ ವಿಶ್ವಾಸವಿರಲಿ: ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ -ಕಹಳೆ ನ್ಯೂಸ್

ಕುಂದಾಪುರ : ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಕರ್ನಾಟಕ ಸರಕಾರದ ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅತ್ಯಮೂಲ್ಯವಾದ ಸಮಯವನ್ನು ದ್ವೇಷಿಸಲು ಬಳಸಬೇಡಿ; ಇತಿಹಾಸವನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ; ಇತಿಹಾಸವನ್ನು ಅರಿತಾಗ ಮಾತ್ರ ವರ್ತಮಾನವನ್ನು ಸರಿಯಾಗಿ ಗ್ರಹಿಸಲು ಸಾಧ್ಯವಾಗುತ್ತದೆ ಎಂದರು. ಜನ ಸಮುದಾಯದಲ್ಲಿ ಒಗ್ಗಟ್ಟು ಇದ್ದಾಗ...
ಕುಂದಾಪುರಜಿಲ್ಲೆಸುದ್ದಿ

ಕುಂದೇಶ್ವರ ದೇವಾಲಯ ವಠಾರದಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರ ಜತೆಗೂಡಿ ಆರಂಭಿಸಿದ ನೂತನ ದೃಷ್ಟಿ ಯೋಜನೆ ಉದ್ಘಾಟನೆ -ಕಹಳೆ ನ್ಯೂಸ್

ಕುಂದಾಪುರ: ದೃಷ್ಟಿ ಯೋಜನೆ ಜಿಲ್ಲೆಯಲ್ಲಿ 8 ಕಡೆ ಅನುಷ್ಠಾನವಾಗಿದ್ದು ಕುಂದಾಪುರದಲ್ಲಿ ಇನ್ನು ಚಿಕ್ಕನ್‌ಸಾಲ್ ರಸ್ತೆ, ಫೆರ್ರಿರಸ್ತೆಯಲ್ಲಿ ಅನುಷ್ಠಾನವಾಗಲಿದೆ. 50ರಷ್ಟು ಮನೆ, ಅಂಗಡಿ ಇತ್ಯಾದಿಗಳ ಸಮೂಹಕ್ಕೆ ಒಬ್ಬ ಕಾವಲುಗಾರನನ್ನು ನಿಯೋಜಿಸಿ ಅವನ ಮೇಲ್ವಿಚಾರಣೆ ಪೊಲೀಸ್ ಇಲಾಖೆ ನಡೆಸುವ ವ್ಯವಸ್ಥೆ ಇದೆ. ಕಾವಲುಗಾರನ ವೇತನ ಆ ಪರಿಸರದವರು ಒಟ್ಟಾಗಿಸಿ ನೀಡಬೇಕು. ಇದರಿಂದ ಅಪರಾಧ ಚಟುವಟಿಕೆ ಕಡಿಮೆಯಾಗುತ್ತದೆ. ಬೇಗ ಪತ್ತೆಯಾಗುತ್ತದೆ. ಜನರಿಗೆ ಧೈರ್ಯ ಮೂಡುತ್ತದೆ ಎಂದು ಎಸ್‌ಪಿ ಹರಿರಾಮ್ ಶಂಕರ್ ಹೇಳಿದರು. ಅವರು ಕುಂದೇಶ್ವರ...
ಉಡುಪಿಕುಂದಾಪುರಜಿಲ್ಲೆಸುದ್ದಿ

ನಮ್ಮ ಸುತ್ತಲಿನ ಪರಿಸರವನ್ನು ಹಸಿರುಗೊಳಿಸುವುದರಿಂದ ಮಾತ್ರ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು: ಶಾಸಕ ಎ.ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ : ವಿಜಯ ಕರ್ನಾಟಕ ಐಎಂಜೆ ಇನ್ಸ್ಟಿ ಟ್ಯೂಷನ್ಸ್ ಮೂಡ್ಲಕಟ್ಟೆ ಕರ್ನಾಟಕ ಅರಣ್ಯ ಇಲಾಖೆ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮೂಡ್ಲಕಟ್ಟೆ ಎಂ.ಐ.ಟಿ. ಆವರಣದಲ್ಲಿ ಸಸಿ ನೆಡುವ ಮೂಲಕ ದೀಪವನ್ನು ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪರಿಸರ ದಿನಾಚರಣೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ನಮ್ಮ ಸುತ್ತಲಿನ ಪರಿಸರವನ್ನು ಹಸಿರುಗೊಳಿಸುವುದರಿಂದ ಮಾತ್ರ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು. ಗಿಡ...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಓರಿಯೆಂಟೇಶನ್ ಕಾರ್ಯಕ್ರಮ ; ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ;ಸಿಎ ದೀಪಿಕಾ ವಸನಿ -ಕಹಳೆ ನ್ಯೂಸ್

ಕುಂದಾಪುರ : ಯಡಾಡಿ-ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಜುಲೈ 28ರಂದು ಸಿಎ ಹಾಗೂ ಸಿಎಸ್ ಫೌಂಡೇಶನ್ ಕೋರ್ಸ್ನ ಓರಿಯೆಂಟೇಶನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕೆ.ವಿ.ಸಿ ಸಂಸ್ಥೆಯ ಸಿ.ಎ. ದೀಪಿಕಾ ವಸನಿಯವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ ಮತ್ತು ಖಜಾಂಚಿ ಭರತ್ ಶೆಟ್ಟಿ, ಮಂಗಳೂರಿನ ಕೆ.ವಿ.ಸಿ ಅಕಾಡೆಮಿಯ ನಿರ್ದೇಶಕರಾದ ಸಿಎ ಜೇಸನ್ ಕ್ಯಾಸ್ತಲಿನೊ,...
ಕುಂದಾಪುರಸಿನಿಮಾಸುದ್ದಿ

ಜು.23ರಂದು ಪತ್ರಿಕಾ ದಿನಾಚರಣೆ, ಡೈರಕ್ಟರಿ ಬಿಡುಗಡೆ- ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಸಂಘದ ಅಧೀಕೃತ ಸದಸ್ಯರ ಡೈರಕ್ಟರಿ ಬಿಡುಗಡೆ ಸಮಾರಂಭವು ಜು.23ರಂದು ಬೆಳಿಗ್ಗೆ 11 ಗಂಟೆಗೆ ಭಂಡಾರ್ಕಾರ್ಸ್ ಕಾಲೇಜಿನ ರಾಧಾಬಾಯಿ ಹಾಲ್ ನಲ್ಲಿ ಜರುಗಲಿದೆ. ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಇವರು ಕಾರ್ಯಕ್ರಮ ಉದ್ಘಾಟಸಲಿದ್ದಾರೆ. ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್ ಅವರು ಸಂಘದ ಅಧೀಕೃತ ಸದಸ್ಯರ...
ಕುಂದಾಪುರಶಿಕ್ಷಣಸುದ್ದಿ

ಭತ್ತದ ನೇಜಿ ನೆಡುವ ಕಾರ್ಯದಲ್ಲಿ ಭಾಗಿಯಾದ ಕುಂದಾಪುರ ತಾಲ್ಲೂಕಿನ ಗುರುಕುಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ತಾಲ್ಲೂಕಿನ ಬಾಂಡ್ಯ ಗ್ರಾಮದ, ಕೆಳ ಬಾಂಡ್ಯದ ಕೃಷಿ ಗದ್ದೆಗಳಲ್ಲಿ ಭಾನುವಾರ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಭತ್ತದ ನೇಜಿ ನೆಡುವ ಕಾರ್ಯದಲ್ಲಿ ಭಾಗಿಯಾದರು. ಆಗೊಮ್ಮೆ, ಈಗೊಮ್ಮೆ ಭೋ ಎಂದು ಸುರಿಯುವ ಪುನರ್‌ವಸು ಮಳೆ. ಅಕ್ಕ-ಪಕ್ಕದಲ್ಲೆಲ್ಲ ಕೆಸರು ತುಂಬಿದ ಗದ್ದೆಗಳು, ಮೊಳಕಾಲೆತ್ತರಕ್ಕೆ ಉಡುಪನ್ನು ಕಟ್ಟಿಕೊಂಡು ಗದ್ದೆಗಿಳಿದ ಮಕ್ಕಳಲ್ಲಿ ನಾವೇನು ಈ ಕ್ಷೇತ್ರಕ್ಕೆ ಹೊಸಬರಲ್ಲ ಎನ್ನುವ ಹುಮ್ಮಸ್ಸು. ಸ್ಥಳೀಯ ಮಹಿಳೆಯರೊಂದಿಗೆ ಕೈಜೋಡಿಸಿ ಕ್ಷಣಾರ್ಧದಲ್ಲಿ ಸಾಲು ಸಾಲು ನೇಜಿ ಗಿಡಗಳನ್ನು...
ಉಡುಪಿಕುಂದಾಪುರಜಿಲ್ಲೆಸುದ್ದಿ

ನಾಗೂರಿನ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ನಡೆದ ನಾದಾವಧಾನ ಪ್ರತಿಷ್ಠಾನ(ರಿ) ಕುಂದಾಪುರ ಇದರ 2025ರ ವಾರ್ಷಿಕೋತ್ಸವ -ಕಹಳೆ ನ್ಯೂಸ್

ಕುಂದಾಪುರ : ನಾದಾವಧಾನ ಪ್ರತಿಷ್ಠಾನ(ರಿ) ಕುಂದಾಪುರ ಇವರು ನಾಗೂರಿನ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಪ್ರತಿಷ್ಠಾನದ ಗುರುಗಳಾದ ಶ್ರೀ ಎ ಪಿ ಪಾಠಕ್ ಮತ್ತು ಶ್ರೀ ಎನ್ ಜಿ ಹೆಗಡೆಯವರ ಮಾರ್ಗದರ್ಶನದಲ್ಲಿ ಆಯೋಜಿಸಿದ ಯಕ್ಷಗಾನದ ಕುರಿತ ವಿವಿಧ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಿರಿಮಂಜೇಶ್ವರದ ಶ್ರೀ ಉಮೇಶ್ ಶಾನ್ ಭಾಗ್ ರವರು ನೆರವೇರಿಸಿದರು. ನಾದಾವಧಾನ ವಿದ್ಯಾರ್ಥಿಗಳಿಂದ ಯಕ್ಷಗಾನದ ಆಯ್ದ ಪ್ರಸಂಗಗಳಿAದ ಯಕ್ಷಗಾನ ಪದ್ಯಗಳ ಪ್ರಸ್ತುತಿ ನಡೆಯಿತು. ಖ್ಯಾತ ಯಕ್ಷಗಾನ...
ಉಡುಪಿಕುಂದಾಪುರಜಿಲ್ಲೆಸುದ್ದಿ

ವಿಶ್ವಕರ್ಮ ಯೋಜನೆಯ ಟೂಲ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ: ಶಾಸಕ ಎ.ಕಿರಣ್ ಕೊಡ್ಗಿ ಭಾಗಿ-ಕಹಳೆ ನ್ಯೂಸ್

ಸಾಲಿಗ್ರಾಮ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಆಯೋಜಿಸಲಾದ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಿಎಂ ವಿಶ್ವಕರ್ಮ ಯೋಜನೆಯ ಟೂಲ್ ಕಿಟ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಯಶಸ್ವಿಯಾಗಿ ಜಾರಿಯಾಗಿದೆ. ಬ್ಯಾಂಕಿನ ಮುಖ್ಯಸ್ಥರು ಯೋಜನೆಯ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಯಾವುದೇ ಫಲಾನುಭವಿಗಳಿಗೆ ಸೂಕ್ತ ಸಹಕಾರ ನೀಡಬೇಕು ಎಂದು...
1 2 3 4 5 6 20
Page 4 of 20