Saturday, April 25, 2026

ಕುಂದಾಪುರ

ಉಡುಪಿಕುಂದಾಪುರಜಿಲ್ಲೆಸುದ್ದಿ

ವಿಕಲಚೇತನರಿಗೆ ದ್ವಿಚಕ್ರ ವಾಹನ ಕೀಲಿಕೈ ಹಸ್ತಾಂತರಿಸಿದ: ಶಾಸಕ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಲ 10 ಜನ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಿಸುವ ಕಾರ್ಯಕ್ರಮ ಕುಂದಾಪುರದ ವಿಕಲಚೇತನರ ಇಲಾಖೆಯ ಆವರಣದಲ್ಲಿ ಆಯೋಜಿಸಿದ್ದು ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಫಲಾನುಭವಿಗಳಿಗೆ ದ್ವಿಚಕ್ರ ವಾಹನ ಕೀಲಿಕೈ ಹಸ್ತಾಂತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ  ಕುಂದಾಪುರ ಪುರಸಭಾ ಅಧ್ಯಕ್ಷ...
ಉಡುಪಿಕುಂದಾಪುರಜಿಲ್ಲೆಸುದ್ದಿ

ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥಾಪಕರ ದಿನಾಚರಣೆ ; ಮಕ್ಕಳಲ್ಲಿ ಶಿಸ್ತು ಮೂಡಿಸಲು ಸ್ಕೌಟ್ಸ್ & ಗೈಡ್ಸ್ ಸಹಕಾರಿ- ಡಾ. ರಮೇಶ್ ಶೆಟ್ಟಿ

ಕುಂದಾಪುರ: " ಸ್ವಾತಂತ್ರ್ಯ ಪೂರ್ವದಲ್ಲಿಯೇ ಬ್ರಿಟಿಷ್ ನಿವೃತ್ತ ಅಧಿಕಾರಿ ಪೋವೆಲ್ ರಿಂದ ಸ್ಥಾಪಿತವಾದ ಸ್ಕೌಟ್ಸ್ ಅಂಡ್ ಗೈಡ್ಸ್ ಆಂದೋಲನ ಇಂದು ಜಗತ್ತಿನಾದ್ಯಂತ ಪಸರಿಸಿ ಯುವ ಸಮುದಾಯವನ್ನು ಅದರಲ್ಲಿಯೂ ವಿಶೇಷವಾಗಿ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ದೈಹಿಕವಾಗಿ ಬೌದ್ಧಿಕವಾಗಿ ಸದೃಢವಾಗಿಸಿ ಉತ್ತಮ ಪ್ರಜೆಗಳಾಗಿ ರೂಪಿಸಲು ಸಹಕಾರಿಯಾಗಿದೆ. ಇಂದು ಭಾರತದ ಬಹುಪಾಲು ರಾಜ್ಯಗಳಲ್ಲಿ ತರಬೇತಿ ನಡೆಯುತ್ತಿದ್ದು ಬಹುಪಾಲು ಶಾಲೆಗಳಲ್ಲಿ ವಿದ್ಯಾರ್ಥಿಗಳು ಬಹಳ ಉತ್ಸುಕತೆಯಿಂದ ಪಾಲ್ಗೊಂಡು ಉತ್ತಮ ಶಿಸ್ತು ನಡತೆಗಳನ್ನು ಕಲಿತು ಪಠ್ಯ ಮತ್ತು ಪಠ್ಯೇತರ ವಿಭಾಗದಲ್ಲೂ...
ಕುಂದಾಪುರಜಿಲ್ಲೆಸುದ್ದಿ

ಕೋಡಿ ಪರಿಸರದಲ್ಲಿ ಕೃಷಿ ಜಮೀನು ಮತ್ತು ಮನೆಗಳಿಗೆ ಉಪ್ಪು ನೀರು ಬರದಂತೆ ತಡೆಯಲು ನದಿ ದಂಡೆ ಸಂರಕ್ಷಣೆಗೆ ಅನುದಾನ ಮಂಜೂರು ಮಾಡುವಂತೆ-: ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಡಿ ಪರಿಸರದಲ್ಲಿ ಕೃಷಿ ಜಮೀನು ಮತ್ತು ಮನೆಗಳಿಗೆ ಉಪ್ಪು ನೀರು ಬರದಂತೆ ತಡೆಯಲು ನದಿ ದಂಡೆ ಸಂರಕ್ಷಣೆಗೆ ಅನುದಾನ ಮಂಜೂರು ಮಾಡಲು ಇಂದು ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ವಿಧಾನಸಭೆಯ ಅಧಿವೇಶನದ ಸಂದರ್ಭದಲ್ಲಿಯೇ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ಎಸ್ ಬೋಸರಾಜರನ್ನು ಭೇಟಿ ಮಾಡಿ ಕೋಡಿ ಪರಿಸರದಲ್ಲಿ ನದಿಗಳಿಂದ ಉಪ್ಪು ನೀರು ಉಕ್ಕಿ ಕೃಷಿ ಜಮೀನು...
ಉಡುಪಿಕುಂದಾಪುರಜಿಲ್ಲೆಸುದ್ದಿ

ವಿಚಿತ್ರ ರೋಗ ಬಾಧೆಯಿಂದ ನರಳುತ್ತಿರುವ ಪುತ್ರನ ಸ್ಥಿತಿ ನೆನೆದು ತಾಯಿಯ ಕಣ್ಣೀರ ರೋದನ;ಔಷಧಕ್ಕೋಸ್ಕರ ತಾಯಿ ಖರ್ಚು ಮಾಡಿ ಸೋತು ಸುಣ್ಣ-ಕಹಳೆ ನ್ಯೂಸ್

ಕುಂದಾಪುರ:ಮೈತುಂಬಾ ಗುಳ್ಳೆ,ಚರ್ಮ ಸುಟ್ಟು ಹೋದಂತಿದೆ.ವಿಪರೀತ ಯಾತನೆ.ವೈದ್ಯರು ದೇಹದಲ್ಲಿ ಹೆಚ್ಚಿರುವ ನಂಜಿನ ಕಾರಣಕ್ಕೆ ಹೀಗಾಗುತ್ತಿದೆ ಎಂದು ಹೇಳುತ್ತಾರೆ. ಆದರೆ ಇನ್ನೂ ಕಾಯಿಲೆ ಯಾವುದೆಂದು ಖಚಿತವಾಗಿಲ್ಲ, ಮನೆಗೆ ಆಧಾರವಾಗಿದ್ದ ಇವರೀಗ ಹಾಸಿಗೆ ಹಿಡಿದಿದ್ದಾರೆ. ವಿಚಿತ್ರ ರೋಗ ಬಾಧೆಯಿಂದ ನರಳುತ್ತಿರುವ ಪುತ್ರನ ಸ್ಥಿತಿ ನೆನೆದು ತಾಯಿಯ ಕಣ್ಣೀರ ರೋದನ ಮುಗಿಲು ಮುಟ್ಟಿದೆ.ತಾಲ್ಲೂಕಿನ ತಲ್ಲೂರು ಗ್ರಾಮದ ಉಪ್ಪಿನಕುದ್ರುವಿನ ಕುಟುಂಬವೊಂದರ ದುರಂತ ಕಥಾನಕವಿದು. ಉಪ್ಪಿನಕುದ್ರುವಿನ ನಿತ್ಯಾನಂದ (38)ಎಂಬವರು ಈ ವಿಚಿತ್ರ ಕಾಯಿಲೆಯಿಂದ ನರಳುತ್ತಿದ್ದಾರೆ,ಬಾಲ್ಯದ ದಿನಗಳಿಂದಲೂ ಶ್ರಮಜೀವಿ.ತಂದೆ ಪರಮೇಶ್ವರ,...
ಉಡುಪಿಕುಂದಾಪುರಜಿಲ್ಲೆಸುದ್ದಿ

ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶೀನ ಪೂಜಾರಿ, ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ ಆಯ್ಕೆ-ಕಹಳೆ ನ್ಯೂಸ್

ಕುಂದಾಪುರ, : ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶೀನ ಪೂಜಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಜೀವ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ನಡೆಯಿತು. ಸಮಬಲದ ನಿರ್ದೇಶಕರನ್ನು ಹೊಂದಿದ್ದ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸಮಬಲದ ಸ್ಥಾನ ಪಡೆದಿದ್ದರು. ಹಾಗಾಗಿ ಅಧ್ಯಕ್ಷ ಸ್ಥಾನದ ಬಗ್ಗೆ ಕುತೂಹಲ ಕೆರಳಿಸಿತ್ತು. ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶೀನ ಪೂಜಾರಿ ಅವರಿಗೆ ಬಿಜೆಪಿ ಬೆಂಬಲಿತ ಸದಸ್ಯರು ಬೆಂಬಲ ನೀಡಿದ್ದರು. ಹಾಗಾಗಿ ಶೀನ ಪೂಜಾರಿ...
ಉಡುಪಿಕುಂದಾಪುರಜಿಲ್ಲೆಸುದ್ದಿ

ನಿರ್ಲಕ್ಷ್ಯದ ಚಾಲನೆಯಿಂದ ಮರಳಿ ಬಾರದ ಲೋಕಕ್ಕೆ ಪಯಣ -ಸಂತೋಷ್ ಶೆಟ್ಟಿ -ಕಹಳೆ ನ್ಯೂಸ್

ಕುಂದಾಪುರ :"ಒಂದು ಸಣ್ಣ ನಿರ್ಲಕ್ಷ್ಯದಿಂದಾಗಿ ಜರಗಿ ಹೋಗುವ ಭಯಾನಕತೆಗೆ ತರ ಬೇಕಾದ ದಂಡ ಮಾತ್ರ ಅಪಾರ.ಹೆತ್ತವರಿಗೆ ಮಗನಿಲ್ಲ, ಹೆಂಡತಿಗೆ ಗಂಡನಿಲ್ಲ, ತಂಗಿಗೆ ಅಣ್ಣನಿಲ್ಲ, ಮಕ್ಕಳಿಗೆ ಅಪ್ಪನಿಲ್ಲ ಕಟ್ಟ ಕಡೆಗೆ ಒಂದು ಸಂಸಾರವೇ ಕಣ್ಣೀರಿನಲ್ಲಿ ಬದುಕನ್ನು ಸವೆಸ ಬೇಕಾದ ದುರಂತವಿದು.ಇಂದು ಮಾನವನ ನಿರ್ಲಕ್ಷ ದಿಂದಾಗಿಯೇ ಭಾರತದಲ್ಲಿ ವರ್ಷವೊಂದಕ್ಕೆ ಸರಿಸುಮಾರು 1.5 ಲಕ್ಷದಿಂದ 2ಲಕ್ಷದ ತನಕ ರಸ್ತೆ ಅಪಘಾತಗಳು ಜರಗುತ್ತದೆ. ಅದರಲ್ಲಿ ಪ್ರಾಣ ಚೆಲ್ಲುವರ ಸಂಖ್ಯೆ ಅನಾಥವಾಗುವ ಕುಟುಂಬಗಳನ್ನು ಗಮನಿಸಿದರೆ ರಸ್ತೆ ಆಪಘಾತಗಳ...
ಕುಂದಾಪುರಶಿಕ್ಷಣಸುದ್ದಿ

ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ : “ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾದದು” – ಡಾ. ರಮೇಶ್ ಶೆಟ್ಟಿ-ಕಹಳೆ ನ್ಯೂಸ್

"ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ದೇಶದಲ್ಲಿನ ರಾಜರುಗಳ ದುರ್ಬಲ ಆಡಳಿತ ಮತ್ತು ಅರಾಜಕತೆ ಹಾಗೂ ಭಿನ್ನಾಭಿಪ್ರಾಯ ವಿದೇಶಗರಿಗೆ ಇಲ್ಲಿ ಗಟ್ಟಿ ನೆಲೆ ಕಂಡುಕೊಳ್ಳಲು ಸಾಧ್ಯವಾಯಿತು. ಹಾಗಾಗಿ ವ್ಯಾಪಾರಕ್ಕಾಗಿ ಬಂದ ಬ್ರಿಟಿಷರು ಸುಮಾರು 250 ವರ್ಷಗಳ ಕಾಲ ನಿರಾತಂಕವಾಗಿ ನಮ್ಮ ದೇಶದಲ್ಲಿ ಆಳ್ವಿಕೆ ನಡೆಸಿದರು. ಸ್ವಾತಂತ್ರ್ಯ ಬಂದ ನಂತರ ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿ ಅರ್ಥಪೂರ್ಣ ಬದುಕು ನಡೆಸಲು...
ಉಡುಪಿಕುಂದಾಪುರಸಂತಾಪಸುದ್ದಿ

ಜಮ್ಮು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿರೇಖೆ ಬಳಿ ಭೀಕರ ರಸ್ತೆ ಅಪಘಾತ ;ಕುಂದಾಪುರದ ಯೋಧ ಹುತಾತ್ಮ-ಕಹಳೆ ನ್ಯೂಸ್

ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು, ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಸಹಿತ? ಐವರು ಮೃತ ಪಟ್ಟಿದ್ದಾರೆ. ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು...
1 5 6 7 8 9 20
Page 7 of 20