ಕೇಂದ್ರದ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಾಪಸ್ಸಾಗಲಿ – ಚಂದ್ರಶೇಖರ್ ವಿ-ಕಹಳೆ ನ್ಯೂಸ್
ಕುಂದಾಪುರ: ಕಾರ್ಮಿಕ ವರ್ಗಕ್ಕೆ ಮಾರಕವಾದ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ಕೇಂದ್ರ ಸರಕಾರ ಕೈ ಬಿಡಬೇಕು ಎಂಬುದಾಗಿ ಸಿಐಟಿಯು ಕುಂದಾಪುರ ತಾಲೂಕು ಸಂಚಾಲಕರಾದ ಚಂದ್ರಶೇಖರ್ ವಿ ಇಂದಿಲ್ಲಿ ಹೇಳಿದರು. ಅವರು ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ ವಾರ್ಷಿಕ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಸರಕಾರ ಶ್ರೀಮಂತ ಉದ್ದಿಮೆದಾರರ ಪರವಾದ ನೀತಿಗಳು ಕಾರ್ಮಿಕರ ಶೋಷಣೆಯನ್ನು ಹೆಚ್ಚಿಸುವುದಾಗಿದೆ ಕಿರು ಕೈಗಾರಿಕೆಗಳಿಗೆ ಯಾವುದೇ ರಕ್ಷಣೆ ಇಲ್ಲವಾಗಿದೆ, ಅದನ್ನೇ ಅವಲಂಬಿಸಿದ ಕಾರ್ಮಿಕರು ಬೀದಿಗೆ ಬೀಳುತ್ತಿದ್ದಾರೆ. ಉಡುಪಿ...







