Recent Posts

Wednesday, May 1, 2024

ಮಂಜೇಶ್ವರ

ಕಾಸರಗೋಡುಮಂಜೇಶ್ವರಸುದ್ದಿ

ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಂಪನ್ನ ; ರಥ ಬೀದಿಯಲ್ಲಿ ಭಕ್ತ ಸಾಗರ – ಕಹಳೆ ನ್ಯೂಸ್

ಮಂಜೇಶ್ವರ,  ಡಿ 19 : ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ. ದೇವಳದ ರಥಬೀದಿಯಲ್ಲಿ ಸಹಸ್ರಾರು ಭಗವತ್ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ ನಡೆಯಿತು. ತುಳುನಾಡಿನಲ್ಲಿ ಹಿಂದಿನಿಂದಲೂ ನಾಗ ದೇವರ ಆರಾಧನೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಕೋಟ್ಯಾಂತರ ಭಕ್ತರ ಆರಾಧ್ಯದೈವ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಡನಾಗಿ ಭಕ್ತರಿಗೆ ದರ್ಶನ ನೀಡಿದ್ದು...
ಕಾಸರಗೋಡುಕ್ರೈಮ್ಮಂಜೇಶ್ವರಸುದ್ದಿ

ನೀರ್ಚಾಲು ಕನ್ಯಪ್ಪಾಡಿಯ ಯುವ ವೈದ್ಯೆ ಡಾ| ಪಲ್ಲವಿ ಜಿ.ಕೆ.ಭಟ್‌ ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ನೀರ್ಚಾಲು: ಕನ್ಯಪ್ಪಾಡಿ ನಿವಾಸಿ ನಿವೃತ್ತ ಕ್ಯಾಂಪ್ಕೋ ಉದ್ಯೋಗಿ ಗೋಪಾಲಕೃಷ್ಣ ಭಟ್‌ ಅವರ ಪುತ್ರಿ ಯುವ ವೈದ್ಯೆ ಡಾ| ಪಲ್ಲವಿ ಜಿ.ಕೆ. (25) ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜೂ. 5ರಂದು ರಾತ್ರಿ ಊಟ ಮಾಡಿ ನಿದ್ದೆ ಮಾಡಿದ್ದ ಪಲ್ಲವಿ ಮಂಗಳವಾರ ಬೆಳಗ್ಗೆ ಎದ್ದಿರಲಿಲ್ಲ. ಇದರಿಂದ ಮನೆಯವರು ಕೊಠಡಿಯ ಬಾಗಿಲು ತೆರೆದು ನೋಡಿದಾಗ ಕಿಟಕಿ ಸರಳಿಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಧಾರವಾಡದ...
ಉಡುಪಿದಕ್ಷಿಣ ಕನ್ನಡಮಂಜೇಶ್ವರರಾಜಕೀಯರಾಜ್ಯಸುದ್ದಿ

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌ಗೆ ಅದೃಷ್ಟ ; ಕಾಂಗ್ರೆಸ್‌ ಟಿಕೆಟ್ ಬಹುತೇಕ ಖಚಿತ..! ಜೆ.ಆರ್‌.ಲೋಬೋ, ಐವನ್‌ ಡಿ’ಸೋಜಾಗೆ ಕೈ ತಪ್ಪಿದ ಅವಕಾಶ..!? – ಕಹಳೆ ನ್ಯೂಸ್

ಮಂಗಳೂರು/ಉಡುಪಿ: ದ.ಕ. ಜಿಲ್ಲೆಯ ಕಾಂಗ್ರೆಸ್‌ ಪಕ್ಷದಲ್ಲಿನ ಆಕಾಂಕ್ಷಿಗಳು ತಮ್ಮೆಲ್ಲ ಪಟ್ಟುಗಳನ್ನೂ ಪ್ರಯೋಗಿಸುತ್ತಿದ್ದು ಉನ್ನತ ನಾಯಕರು ದಿಲ್ಲಿಯಲ್ಲಿ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದಾರೆ. ಇದರ ಹಿನ್ನೆಲೆಯಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಆಕಾಂಕ್ಷಿಗಳಾದ ಮೊದಿನ್‌ ಬಾವಾ, ಐವನ್‌ ಡಿ’ಸೋಜಾ, ಪದ್ಮರಾಜ್‌ ಆರ್‌. ಮುಂತಾದವರು ದಿಲ್ಲಿಯಲ್ಲೇ ಪ್ರಯತ್ನಶೀಲರಾಗಿದ್ದಾರೆ. ಆದರೂ ಹೈಕಮಾಂಡ್‌ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಪದ್ಮರಾಜ್ ಆರ್‌‌ಗೆ ಕಾಂಗ್ರೆಸ್‌ ಟಿಕೆಟ್ ಬಹುತೇಕ ಖಚಿತ : ಒಂದೆಡೆ ಮಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿ ಹೆಚ್ಚಿರುವ ಪೈಪೋಟಿ ಇನ್ನೊಂದೆಡೆ...
ಕಾಸರಗೋಡುದಕ್ಷಿಣ ಕನ್ನಡಪುತ್ತೂರುಮಂಜೇಶ್ವರಸುದ್ದಿ

ಬ್ರಹ್ಮಶ್ರೀ ರವೀಶ ತಂತ್ರಿಗಳ ಆರೋಗ್ಯದಲ್ಲಿ ಏರುಪೇರು : ಪುತ್ತೂರಿನ ಖಾಸಗೀ ಆಸ್ಪತ್ರೆಗೆ ದಾಖಲು – ಆರೋಗ್ಯದಲ್ಲಿ ಚೇತರಿಕೆ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ತಂತ್ರಗಳು, ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಬ್ರಹ್ಮಶ್ರೀ ರವೀಶತಂತ್ರಿಗಳ ಆರೋಗ್ಯದಲ್ಲಿ ಏರುಪೇರು ಸಂಭವಿಸಿದ್ದು, ಪುತ್ತೂರಿನ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗ್ಗೆ ಅನಾರೋಗ್ಯ ಕಂಡುಬಂದ ಕಾರಣ, ಪುತ್ತೂರಿನ ಡಾ.ಎಂ.ಕೆ. ಪ್ರಸಾದ್ ಅವರು ಆರೋಗ್ಯ ತಪಾಸಣೆ ನಡೆಸಿದಾಗ ವ್ಯತ್ಯಯ ಕಂಡುಬಂದಿದ್ದು, ಆಸ್ಪತ್ರೆಗೆ ದಾಖಸಿಕೊಂಡು ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಯಾವುದೇ ಭಯ ಪಡಬೇಕಾದ ಅಗತ್ಯವಿಲ್ಲ ಎಂದು ತಂತ್ರಿಗಳ ಆಪ್ತ ವಲಯದವರು ಮಾಹಿತಿ ನೀಡಿದ್ದಾರೆ....
ಕಾಸರಗೋಡುಮಂಜೇಶ್ವರಸಂತಾಪಸುದ್ದಿ

ಸರೋವರ ಕ್ಷೇತ್ರ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿದ್ದ ‘ದೇವರ ಮೊಸಳೆ’ ಬಬಿಯಾ ಇನ್ನಿಲ್ಲ – ಕಹಳೆ ನ್ಯೂಸ್

ಕಾಸರಗೋಡು : ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ "ದೇವರ ಮೊಸಳೆ" ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು...
ಆರೋಗ್ಯಕಾಸರಗೋಡುದಕ್ಷಿಣ ಕನ್ನಡಮಂಜೇಶ್ವರಸುದ್ದಿ

ಕೇರಳದಲ್ಲಿ ಮಂಕಿಫಾಕ್ಸ್ ಎರಡನೇ ಪಾಸಿಟಿವ್ ; ಶನಿವಾರ ಮಂಗಳೂರು ಏರ್ ಪೋರ್ಟ್ ಮೂಲಕ ಆಗಮಿಸಿದ ಯುವಕನಿಗೆ ಮಂಕಿಫಾಕ್ಸ್ ಪಾಸಿಟಿವ್ – ಕಹಳೆ ನ್ಯೂಸ್

ಕಣ್ಣೂರು, ಜು 18 : ಕೇರಳದಲ್ಲಿ ಮಂಕಿಫಾಕ್ಸ್ ಎರಡನೇ ಪಾಸಿಟಿವ್ ಪ್ರಕರಣ ಕಣ್ಣೂರು ಜಿಲ್ಲೆಯಲ್ಲಿ ದೃಢಪಟ್ಟಿದೆ ರಾಜ್ಯ ಆರೋಗ್ಯ ಸಚಿವಾಲಯ ದೃಢಪಡಿಸಿದೆ. ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕಣ್ಣೂರಿಗೆ ಆಗಮಿಸಿದ ಯುವಕನೋರ್ವನಿಗೆ ಮಂಕಿಫಾಕ್ಸ್ ರೋಗಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಪರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಕಿಪಾಕ್ಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ ಯುವಕನ ಮಾದರಿ ಸಂಗ್ರಹಿಸಿ ಪುಣೆಯಲ್ಲಿರುವ ವೈರಾಲಜಿ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು, ಇಂದು ಬಂದ ಫಲಿತಾಂಶದಲ್ಲಿ ಮಂಕಿಫಾಕ್ಸ್...
ಕಾಸರಗೋಡುದಕ್ಷಿಣ ಕನ್ನಡಮಂಜೇಶ್ವರಸುದ್ದಿ

ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕಣ್ಣೂರಿಗೆ ಆಗಮಿಸಿದ ಯುವಕನಲ್ಲಿ ಮಂಕಿಫಾಕ್ಸ್ ಲಕ್ಷಣ..? – ಕಹಳೆ ನ್ಯೂಸ್

ಮಂಗಳೂರು, ಜು 18 : ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕಣ್ಣೂರಿಗೆ ಆಗಮಿಸಿದ ಯುವಕನೋರ್ವನಿಗೆ ಮಂಕಿಫಾಕ್ಸ್ ರೋಗಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಪರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಕಿಪಾಕ್ಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ ಯುವಕನ ಮಾದರಿ ಸಂಗ್ರಹಿಸಿ ಪುಣೆಯಲ್ಲಿರುವ ವೈರಾಲಜಿ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಮಾತ್ರವಲ್ಲದೆ ಯುವಕನನ್ನು ಐಸೋಲೇಶನ್‌ಗೆ ಒಳಪಡಿಸಲಾಗಿದ್ದು ನಿಗಾ ಇರಿಸಲಾಗಿದೆ. ಕೇರಳದಲ್ಲಿ ಮೊದಲ ಮಂಕಿಫಾಕ್ಸ್ ಪ್ರಕರಣ ಜು.12 ರಂದು ದಾಖಲಾಗಿತ್ತು. ವಿದೇಶದಿಂದ ಶನಿವಾರ ಮಂಗಳೂರು...
ಕಾಸರಗೋಡುಕ್ರೈಮ್ಮಂಜೇಶ್ವರಸುದ್ದಿ

ಕರಾವಳಿ ಜಿಲ್ಲೆಯ ಶಾಲೆಯೊಂದರಿಂದ ಆತಂಕಕಾರಿ ಘಟನೆ ವರದಿ ; ಒಂದು ಶಾಲೆಯ 7 ಮಂದಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಕಹಳೆ ನ್ಯೂಸ್

ಕಾಸರಗೋಡು : ಒಂದೇ ಶಾಲೆಯ 7 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕರಾವಳಿ ಜಿಲ್ಲೆ ಕಾಸರಗೋಡಿನ ಬೇಕಲ ಎಂಬಲ್ಲಿ ನಡೆದಿದೆ. ಈ ಕುರಿತು ಡಿವೈಎಸ್‌ಪಿ ಸಿ.ಕೆ. ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ತನಿಖೆ ಪ್ರಾರಂಭಗೊಂಡಿದೆ. ಮೂವರು ವಿದ್ಯಾರ್ಥಿಗಳು ನೀಡಿದ ದೂರಿನಂತೆ ನಾಲ್ವರ ವಿರುದ್ಧ ಬೇಕಲ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತಮ್ಮ ವಿರುದ್ಧ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....
1 2 3
Page 1 of 3