ಮೂಡುಬಿದಿರೆ ಪುರಸಭೆಯಿಂದ ಮತದಾರರ ಜಾಗೃತಿ ಆಂದೋಲನ – ಕಹಳೆ ನ್ಯೂಸ್
ಮೂಡುಬಿದಿರೆ: ಮತದಾನದ ಮಹತ್ವ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚುನಾವಣಾಧಿಕಾರಿಯವರ ನಿರ್ದೇಶನದಂತೆ ತಾಲೂಕು ಸ್ವೀಪ್ ಸಮಿತಿ ಮತ್ತು ಮೂಡುಬಿದಿರೆ ಪುರಸಭೆ ವತಿಯಿಂದ ಮತದಾರರ ಜಾಗೃತಿ ಆಂದೋಲನ ಮಂಗಳವಾರ ಮೂಡುಬಿದಿರೆ ಪೇಟೆಯಲ್ಲಿ ನಡೆಯಿತು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆ.ರಾಜು ಅವರು ಮತದಾರರನ್ನು ಜಾಗೃತಿ ಮೂಡಿಸುವ ದೊಂದಿಯ ಮೆರವಣಿಗೆಗೆ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ...







