Sunday, June 14, 2026

ಮೂಡಬಿದಿರೆ

ದಕ್ಷಿಣ ಕನ್ನಡಬಂಟ್ವಾಳಮೂಡಬಿದಿರೆಸುದ್ದಿ

ಬಂಟ್ವಾಳ : ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ : ಪ್ರಾಣಾಪಾಯದಿಂದ ಪಾರಾದ ಬಸ್ ಪ್ರಯಾಣಿಕರು – ಕಹಳೆ ನ್ಯೂಸ್

ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ. ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಲಾರಿ ಚಾಲಕ ಸಹಿತ ಬಸ್ ನಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಆಳ್ವಾಸ್ ಕಾಲೇಜಿನ ಬಿ.ಪಿ.ಟಿ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ : ಕೇರಳದಲ್ಲಿ ಪ್ರಿಯಕರನೊಂದಿಗೆ ವಿವಾಹವಾದ ಆದಿರಾ – ಕಹಳೆ ನ್ಯೂಸ್

ಮೂಡಬಿದ್ರೆ: ಫೆ.23ರಂದು ನಾಪತ್ತೆಯಾಗಿದ್ದ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಬಿ.ಪಿ.ಟಿ ವಿದ್ಯಾರ್ಥಿನಿ ಆದಿರಾ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿರುವುದಾಗಿ ತಿಳಿದು ಬಂದಿದೆ. ಉಡುಪಿ ಜಿಲ್ಲೆಯ ಕೊಲ್ಲೂರಿನವಳಾಗಿರುವ ಆದಿರಾ ಆಳ್ವಾಸ್ ಕಾಲೇಜಿನಲ್ಲಿ ಬಿ.ಪಿ.ಟಿ. ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಇಲ್ಲಿನ ಶಾಂಭವಿ ಹಾಸ್ಟೆಲ್ ನಲ್ಲಿ ವಾಸ್ತವ್ಯವಿದ್ದಳು. ಫೆ.23 ರಂದು ಬೆಳಿಗ್ಗೆ ಕಾಲೇಜಿನ ಬಸ್ಸಲ್ಲಿ ಬಂದಿದ್ದ ಆಕೆ ಕನ್ನಡ ಭವನ ಬಳಿ ಇಳಿದು ಹೋದಾಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಹೆತ್ತವರು ಮೂಡುಬಿದಿರೆ ಠಾಣೆಗೆ ದೂರು...
ಉಡುಪಿದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆಯ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ನಾಪತ್ತೆ – ಕಹಳೆ ನ್ಯೂಸ್

ಮೂಡುಬಿದಿರೆ, ಫೆ 26 : ಇಲ್ಲಿನ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದೆ. ಬಿಳಿ...
ಮೂಡಬಿದಿರೆಸುದ್ದಿ

ಮೂಡುಬಿದಿರೆಯಲ್ಲಿ ವಿಶ್ ಡಮ್ ಇನ್ಸ್ಟಿಟ್ಯೂಶನ್ಸ್ ನೆಟ್ ವರ್ಕ್  ನ  ಮೂರನೇ ಶಾಖೆ ಆರಂಭ-ಕಹಳೆ ನ್ಯೂಸ್ 

ಮೂಡುಬಿದಿರೆ: ವಿಶ್ ಡಮ್ ಇನ್ಸ್ಟಿಟ್ಯೂಶನ್ಸ್ ನೆಟ್ ವರ್ಕ್  ನ ಮೂರನೇ ಶಾಖೆಯು ಮೂಡುಬಿದಿರೆಯ ಪ್ರಭು ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು.   ಭಾರತದ ಒಳಗಡೆ ಮತ್ತು ಹೊರ ದೇಶಗಳಲ್ಲಿ ಉದ್ಯೋಗಾವಕಾಶ ಲಭಿಸಲು ವಿದ್ಯರ‍್ಥಿಗಳಿಗೆ ಉನ್ನತ ಶಿಕ್ಷಣ, ಕೌಶಲಾ ಆಧಾರಿತ ತರಬೇತಿ, ಶುಲ್ಕ ಸಹಿತ ಇಂಟನ್ ಶಿಫ್ ಸೌಲಭ್ಯ,  ಕಾಲೇಜುಗಳಲ್ಲಿ ಪಾಲನಾ ಕೇಂದ್ರಗಳು ಮೊದಲಾದ ಉದ್ದೇಶಗಳನ್ನಿಟ್ಟುಕೊಂಡು ಆರಂಭಗೊಂಡಿರುವ ಈ ಕೇಂದ್ರವನ್ನು ಉದ್ಯಮಿ ಕೆ.ಶ್ರೀಪತಿ ಭಟ್ ಉದ್ಘಾಟಿಸಿದರು.   ನಂತರ ಮಾತನಾಡಿದ ಅವರುಪುರಾತನ ಇತಿಹಾಸ...
ದಕ್ಷಿಣ ಕನ್ನಡಮೂಡಬಿದಿರೆಸಂತಾಪಸುದ್ದಿ

ಮೂಡುಬಿದಿರೆ: ಬೈಲ ಕುರಲ್ ಖ್ಯಾತಿಯ “ಭಾಷಾ” ಇನ್ನಿಲ್ಲ – ಕಹಳೆ ನ್ಯೂಸ್

ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ನಾಟಕ ರಂಗದಲ್ಲಿ ವಿವಿಧ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ತುಳು ನಾಟಕ ಕಲಾವಿದ ಬೈರ ಕುರಲ್ ಖ್ಯಾತಿಯ "ಭಾಷಾ" ವಸಂತ್ ಶೆಟ್ಟಿ ತೋಡಾರು ಅವರು ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ. ತೋಡಾರು ಗಗನ್ ನಿವಾಸದ ಸುಂದರ ಶೆಟ್ಟಿ ಅವರ ಪುತ್ರ ವಸಂತ ಶೆಟ್ಟಿ(೫೨) ಕಳೆದ ಮೂರು ವರುಷಗಳಿಂದ ಅನಾರೋಗ್ಯವನ್ನು ಹೊಂದಿದ್ದರು. ಸುರೇಂದ್ರ ಕುಮಾರ್ ಕಲತ್ರಪಾದೆ ಅವರ ರಚನೆಯ ಅತ್ಯುತ್ತಮ ನಾಟಕ ಬೈರ ಕುರಲ್ ನಲ್ಲಿ "ಭಾಷಾ"...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ : ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಪುರಸಭಾ ಅಧಿಕಾರಿಗೆ ಚಾಟಿ ಬೀಸಿದ ಲೋಕಾಯುಕ್ತ ಅಧಿಕಾರಿಗಳು– ಕಹಳೆ ನ್ಯೂಸ್

ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ಅಕ್ರಮವಾಗಿ ಗ್ಯಾರೇಜ್ ನಡೆಯುತ್ತಿದ್ದು ಇದರಿಂದ ಹೊರ ಬರುತ್ತಿರುವ ಕೊಳಚೆ ನೀರಿನಿಂದ ಸಾರ್ವಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಈ ಬಗ್ಗೆ ಪುರಸಭೆಗೆ ದೂರು ನೀಡಿದಾಗ ಕ್ರಮಕೈಗೊಂಡಿಲ್ಲ ನಂತರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು ಅವರು ಪುರಸಭೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು ಆದರೆ ಮತ್ತೂ ಪುರಸಭೆ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯರಾದ ಸದಾನಂದ ನಾರಾವಿ ಅವರು ಗುರುವಾರ ಆಡಳಿತ ಸೌಧದಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಲೋಕಾಯುಕ್ತಕ್ಕೆ ಲಿಖಿತ ದೂರು...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥಕಟ್ಟೆಯಲ್ಲಿ ನಡೆದ 20ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ – ಕಹಳೆ ನ್ಯೂಸ್

ಮೂಡಬಿದ್ರೆ: ಸಂಸ್ಕಾರವಿಲ್ಲದ ಬದುಕು, ಬದುಕಲ್ಲ. ಮೊದಲು ನಮ್ಮನ್ನು ನಾವೇ ಅರಿತಿರಬೇಕು. ನಮ್ಮನ್ನು ನಾವೇ ಅರಿತುಕೊಂಡರೆ, ಸಮಾಜದಲ್ಲಿ ದ್ವೇಷ ಭಾವನೆಯಿಲ್ಲ ಎ0ದು ಒಡಿಯೂರು ಶ್ರೀ ಗುರುದೇವಾನ0ದ ಸ್ವಾಮೀಜಿ ಹೇಳಿದರು. ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ ಸಚ್ಚೇರಿಪೇಟೆ ಇದರ ವತಿಯಿ0ದ ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ನಡೆದ 20ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವದ ಧಾರ್ಮಿಕ ಸಭೆ ಸಂತ ಸಮಾಗಮ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ...
ಆರೋಗ್ಯದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ : ತಾಲೂಕು ಆಡಳಿತ ಸೌಧದಲ್ಲಿ ನಡೆದ ತಾಲೂಕು ಕೆಡಿಪಿ ಸಭೆ – ಕಹಳೆ ನ್ಯೂಸ್

ಮೂಡುಬಿದಿರೆ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೂರ್ಣಕಾಲಿಕ ವೈದ್ಯರಿಲ್ಲದಿರುವುದರಿಂದ ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆ ವಿಳಂಬವಾಗುತ್ತಿದೆ. ಪೋಲೀಸ್ ಸಿಬಂದಿ ನೇಮಕದ ಸಮಸ್ಯೆ ಹಾಗೂ ನೊಂದ ಸಂಬAಧಿಕರು ಆಕ್ರೋಶಕ್ಕೊಳಗಾಗುತ್ತಾರೆ. ಹೀಗಾಗಿ ವೈದ್ಯರು ಕೇಂದ್ರ ಸ್ಥಳದಲ್ಲಿಯೇ ಇರುವಂತಹ ವ್ಯವಸ್ಥೆಯಾಗಬೇಕು ಎಂದು ಪೋಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ ಹೇಳಿದರು. ಶಾಸಕ ಉಮನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಮೊದಲ ತಾಲೂಕು ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ...
1 11 12 13 14 15 29
Page 13 of 29