Sunday, June 14, 2026

ಮೂಡಬಿದಿರೆ

ಮೂಡಬಿದಿರೆರಾಜಕೀಯಸುದ್ದಿ

ವಿಪಕ್ಷೀಯರ ವಿರೋಧದ ಮಧ್ಯೆಯೇ ಉದ್ಘಾಟನೆಗೊಂಡ ಇರುವೈಲು ಗ್ರಾಮ ಪಂಚಾಯತ್ ನ ನೂತನ ಕಟ್ಟಡ – ಕಹಳೆ ನ್ಯೂಸ್

ಮೂಡುಬಿದಿರೆ: ಪ್ರೊಟೋಕಾಲನ್ನು ಪಾಲಿಸಿಲ್ಲ, ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ವಿರೋಧ ಪಕ್ಷದ ಸದಸ್ಯರು ಮತ್ತು ಕೆಲ ಬೆಂಬಲಿತರ ವಿರೋಧದ ಮಧ್ಯೆ ಪೆÇಲೀಸರ ಬಂದೋಬಸ್ತಿನೊಂದಿಗೆ ಇರುವೈಲು ಗ್ರಾ.ಪಂ.ನ ಮತ್ತು ತೋಡಾರು ನೂತನ ಕಟ್ಟಡವು ಕ್ಷೇತ್ರದ ಶಾಸಕ ಉಮಾನಾಥ ಎ.ಕೋಟ್ಯಾನ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟನೆಗೊಂಡಿತು. ನಂತರ ಮಾತನಾಡಿದ ಶಾಸಕರು ಈ ಹಿಂದೆ ಪ್ರೊಟೋಕಾಲನ್ನು ಪ್ರಕಾರವೇ ಆಮಂತ್ರಣ ಪತ್ರಿಕೆಯಲ್ಲಿ ಸಂಬಂಧಪಟ್ಟವರ ಹೆಸರುಗಳನ್ನು ಪ್ರಕಟಿಸಲಾಗಿತ್ತು. ಆದರೆ ತಾ. ಪಂ. ಕಾರ್ಯ ನಿರ್ವಹಣಾಧಿಕಾರಿ ದಯಾವತಿ...
ಮೂಡಬಿದಿರೆಸುದ್ದಿ

ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ 2023ರಲ್ಲಿ ಆಳ್ವಾಸ್ ಸಾಧನೆ : ಆಳ್ವಾಸ್ ಭವಾನಿಗೆ ಕಂಚಿನ ಪದಕ – ಕಹಳೆ ನ್ಯೂಸ್

ಮೂಡುಬಿದಿರೆ: ಚೀನಾದ ಚೆಂಗ್ಗುವಿನಲ್ಲಿ ನಡೆದ ಜಾಗತಿಕ ವಿಶ್ವ ವಿದ್ಯಾಲಯಗಳ ಕ್ರೀಡಾಕೂಟದ (ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ -2023) ಲಾಂಗ್‌ಜoಪ್‌ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿ ಕ್ರೀಡಾ ದತ್ತು ಯೋಜನೆಯ ಕ್ರೀಡಾಪಟು ಭವಾನಿ ಯಾದವ್ ಭಗವತಿ ಬರೆದಿದ್ದಾರೆ. ಭವಾನಿ ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ರತಿಷ್ಠಿತ ಕ್ರೀಡಾ ದತ್ತು ಅಡಿಯಲ್ಲಿ ಆಳ್ವಾಸ್ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದು, ಮಂಗಳೂರು ವಿಶ್ವವಿದ್ಯಾಲಯ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ. ಜಾಗತಿಕ ವಿಶ್ವವಿನ ಕ್ರೀಡಾಕೂಟದಲ್ಲಿ...
ಮೂಡಬಿದಿರೆಸುದ್ದಿ

ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹದಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದ.ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ ಮತ್ತು ಇನ್ನರ್ ವ್ಹೀಲ್ ಕ್ಲಬ್ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಸಮಾಜ ಮಂದಿರದಲ್ಲಿ ನಡೆಯಿತು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲ ಅವರು ಎದೆಹಾಲಿನ ಮಹತ್ವದ ಬಗ್ಗೆ ಮಾತನಾಡಿ ತಾಯಿ ಗರ್ಭಿಣಿ ಇರುವ ಸಂದರ್ಭ ಉತ್ತಮ ಆಹಾರಗಳನ್ನು ಸೇವಿಸುವುದರಿಂದ ಆರೋಗ್ಯವಂತ...
ಮೂಡಬಿದಿರೆಶಿಕ್ಷಣಸುದ್ದಿ

ಸಾಂಪ್ರಾದಾಯಿಕ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಳ್ವಾಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಬತ್ತದ ನಾಟಿ ಕಾರ್ಯಗಾರ – ಕಹಳೆ ನ್ಯೂಸ್

ಮೂಡುಬಿದಿರೆ: ಸಾಂಪ್ರಾದಾಯಿಕ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಳ್ವಾಸ್ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮಿಜಾರು ಇಲ್ಲಿನ ತುಳು ಸಂಘವು ಸಾಂಪ್ರಾದಾಯಿಕ ಬತ್ತದ ನಾಟಿ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಿತು. ಡಾ.ಪ್ರಮೀಳ ಕೊಳಕೆ ಮತ್ತು ಪ್ರೊ.ಪ್ರಮೋದ್ ಕಾರಂತ್ ಅವರ ನೇತೃತ್ವದಲ್ಲಿ ಎಡಪದವು ಕಣ್ಣೂರಿ ಮಾಧವ ಗೌಡ ಮತ್ತು ವಾಮನ ಗೌಡ ಅವರ ಗದ್ದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಳು ಸಂಘದ ಸದಸ್ಯರು ಬಹಳ ಉತ್ಸಾಹದಿಂದ ಪಾಲ್ಗೊಂಡು ಗದ್ದೆಯಲ್ಲಿ...
ಮೂಡಬಿದಿರೆಸುದ್ದಿ

ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆದ ಕೃಷಿ ವಿಚಾರ ವಿನಿಮಯ ಕೇಂದ್ರದ ಮಾಸಿಕ ಸಭೆ – ಕಹಳೆ ನ್ಯೂಸ್

ಮೂಡುಬಿದಿರೆ: ಕೃಷಿ ವಿಚಾರ ವಿನಿಮಯ ಕೇಂದ್ರದ ಮಾಸಿಕ ಸಭೆಯು ಜು.29ರಂದು ಸಮಾಜ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಕೃಷಿಕ ಉದ್ಯಮಿ ಪ್ರಭಾತ್‍ಚಂದ್ರ ಜೈನ್ ಅವರು ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಉತ್ತಮ ಆರೋಗ್ಯದ ಜತೆಗೆ ಆರ್ಥಿಕವಾಗಿಯೂ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಹೇಳಿದರು. ಬಳಿಕ ಸಾಮಾಜಿಕ ಅರಣ್ಯ ಬೆಳೆಸಿ ಆರೋಗ್ಯ ಉಳಿಸಿ ಎಂಬ ವಿಷಯದ ಕುರಿತು ಮಾತನಾಡಿದ ಮಂಗಳೂರು ವಿವಿ ಜೀವಶಾಸ್ತ್ರ ವಿಭಾಗದ ಉಪಾನ್ಯಾಸಕರಾದ ಮನೋಹರ ಆಚಾರ್ಯ ಅವರು...
ಮೂಡಬಿದಿರೆಸುದ್ದಿ

ತುಳುಕೂಟ ಬೆದ್ರ ಇದರ ವತಿಯಿಂದ ಆಟಿಡೊಂಜಿ ಕೂಟ – ಕಹಳೆ ನ್ಯೂಸ್

ಮೂಡುಬಿದಿರೆ: ತುಳುಕೂಟ ಬೆದ್ರ ಇದರ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮವು ಸ್ಕೌಟ್ಸ್- ಗೈಡ್ಸ್ ಕನ್ನಡ ಭವನದ ರತ್ನಾಕರವರ್ಣಿ ಸಭಾಭವನದಲ್ಲಿ ನಡೆಯಿತು. ಉದ್ಯಮಿ ರಾಜೇಂದ್ರ ಕುಮಾರ್‌ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅಕ್ಕಿ ಪವಿತ್ರವಾದುದು ಅದರಲ್ಲಿ ನಮ್ಮ ಬದುಕಿದೆ ಆದರೆ ಮದುವೆ ಸಮಾರಂಭಗಳಲ್ಲಿ ಕೆಲವರು ಚಪ್ಪಲಿ ಹಾಕಿಕೊಂಡು ಅಕ್ಕಿಯನ್ನು ತುಳಿದು ಅಕ್ಷತೆಯನ್ನು ಹಾಕುತ್ತಿದ್ದಾರೆ ಇದರ ಬಗ್ಗೆ ಜಾಗೃತಿಯನ್ನು ಮೂಡಿಸಬೇಕಾಗಿದೆ ಹಾಗೂ ವಿಧಾನ ಸಭೆಯಲ್ಲಿ ತುಳುವಿನಲ್ಲಿ ಮಾತನಾಡುವಾಗ ಕನ್ನಡಿಗರು ಲಘುವಾಗಿ ಪರಿಗಣಿಸುತ್ತಾರೆ ಆದ್ದರಿಂದ...
ಮೂಡಬಿದಿರೆಸುದ್ದಿ

ಮಾಂಟ್ರಾಡಿಯಲ್ಲಿ ಸಂಜೀವಿನಿ ಮಾಸಿಕ ಸಂತೆ : ಗೆರಟೆಯಿಂದ ತಯಾರಿಸಿದ ಅಲಂಕಾರಿಕ ವಸ್ತುಗಳ ಉದ್ಘಾಟನೆ – ಕಹಳೆ ನ್ಯೂಸ್

ಮೂಡುಬಿದಿರೆ: ಕೌಶಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ದ.ಕ. ಮಂಗಳೂರು, ತಾ.ಪಂ.ಮೂಡುಬಿದಿರೆ, ಗ್ರಾ.ಪಂ.ನೆಲ್ಲಿಕಾರು, ಭ್ರಾಮರಿ ಮಹಿಳಾ ಸಂಜೀವಿನಿ ಗ್ರಾ.ಪಂ.ಮಟ್ಟದ ಒಕ್ಕೂಟ ನೆಲ್ಲಿಕಾರು ಇವುಗಳ ವತಿಯಿಂದ ಮಂಗಳವಾರ ಸಂಜೀವಿನಿ ಮಾಸಿಕ ಸಂತೆ ಮತ್ತು ಗೆರಟೆಯಿಂದ ತಯಾರಿಸಿದ ಅಲಂಕಾರಿಕ ವಸ್ತುಗಳ ಉದ್ಘಾಟನೆ ಪಂಚಾಯತ್ ಆವರಣದಲ್ಲಿ ನಡೆಯಿತು. ಪಂಚಾಯತ್ ಉಪಾಧ್ಯಕ್ಷ ಶಶಿಧರ್ ಎಂ.ಉದ್ಘಾಟಿಸಿ ಮಾತನಾಡಿ ಸರಕಾರಗಳು ಮಹಿಳೆಯರ ಸಬಲೀಕರಣಕ್ಕಾಗಿ ಅವರಿಗೆ ತರಬೇತಿ ಮತ್ತು ಆರ್ಥಿಕ...
ಕೃಷಿಮೂಡಬಿದಿರೆಸುದ್ದಿ

ಕಡಂದಲೆ ಹೈಸ್ಕೂಲು ಪರಿಸರದಲ್ಲಿ ವನ ಮಹೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ : ಮುಂಡ್ಕೂರು-ಕಡoದಲೆ ಲಯನ್ಸ್ ಕ್ಲಬ್, ದ.ಕ. ಹಾಲು ಒಕ್ಕೂಟ, ಮುಂಡ್ಕೂರು ಭಾರ್ಗವ ಜೇಸೀಸ್, ಅರಣ್ಯ ಇಲಾಖೆ, ಗ್ರಾಮ ಆರಣ್ಯ ಸಮಿತಿ ಹಾಗೂ ಪಾಲಡ್ಕ ಗ್ರಾಪಂ ಸಂಯುಕ್ತ ಆಶ್ರಯದಲ್ಲಿ ಕಡಂದಲೆ ಹೈಸ್ಕೂಲು ಪರಿಸರದಲ್ಲಿ ವನ ಮಹೋತ್ಸವ ಕಾರ್ಯಕ್ರಮ ನಡೆದಿದೆ. ದ.ಕ. ಹಾಲು ಒಕ್ಕೂಟದ ಮಾರುಕಟ್ಟೆ ಅಧಿಕಾರಿ ಡಾ. ರವಿರಾಜ ಉಡುಪ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿಶ್ವದೆಲ್ಲೆಡೆ ತಾಪಮಾನ ಏರಿಕೆಗೆ ಕಾಡು ನಾಶವಾಗುತ್ತಿರುವುದೇ ಮೂಲ ಕಾರಣ. ಇದನ್ನು ಹೋಗಲಾಡಿಸಿ ಶುದ್ಧ ಗಾಳಿ,...
1 15 16 17 18 19 29
Page 17 of 29