ಸಾವಿತ್ರಿ ಬಾಯಿ ಫುಲೆಯ ಜನ್ಮದಿನವನ್ನು ಸ್ಮರಿಸಿದ ಮುಲ್ಕಿ-ಮೂಡಬಿದಿರೆ ಶಾಸಕ ಉಮಾನಾಥ ಎ ಕೋಟ್ಯಾನ್- ಕಹಳೆ ನ್ಯೂಸ್
ಮೂಡಬಿದಿರೆ: ಹೆಣ್ಣು ಮಕ್ಕಳಿಗೆ ವಿದ್ಯೆಯನ್ನು ನಿರಾಕರಿಸಿದ ಸಮಾಜಕ್ಕೆ ಎದುರಾಗಿ, ನೋವು ಅವಮಾನಗಳನ್ನು ಮೆಟ್ಟಿನಿಂತು, ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶಾಲೆ ಪ್ರಾರಂಭಿಸಿ ಅಕ್ಷರ ಕಲಿಸಿದ ದಿಟ್ಟ ಮಹಿಳೆ ಸಾವಿತ್ರಿಬಾಯಿ ಫುಲೆಯವರ ಜನ್ಮದಿನವಾದ ಇಂದು, ಮುಲ್ಕಿ-ಮೂಡಬಿದಿರೆ ಶಾಸಕರಾದ ಉಮಾನಾಥ ಎ ಕೋಟ್ಯಾನ್ರವರು ಅಕ್ಷರಮಾತೆಯನ್ನ ಸ್ಮರಿಸಿ ನಮನಗಳನ್ನು ಅರ್ಪಿಸಿದ್ದಾರೆ. ಹೆಣ್ಣಿಗೆ ಶಿಕ್ಷಣ ನೀಡದ ಅಂದಿನ ಕಾಲದ ಸಮಾಜದಲ್ಲಿ, ಶಿಕ್ಷಣದೆಡೆ ಒಲವನ್ನು ಹೊಂದಿದ್ದ ಸಾವಿತ್ರಿಬಾಯಿ ಫುಲೆ ಮನೆಯನ್ನೇ ಪಾಠಶಾಲೆಯನ್ನಾಗಿಸಿ, ತಮ್ಮ ಪತಿ ಜ್ಯೋತಿ ಬಾ ಫುಲೆಯಿಂದ...