Sunday, June 14, 2026

ಮೂಡಬಿದಿರೆ

ಮೂಡಬಿದಿರೆಸುದ್ದಿ

ರಸ್ತೆ ಪಕ್ಕದಲ್ಲಿ ತುಂಡರಿಸಿದ ರೀತಿಯಲ್ಲಿ ದನದ ತಲೆ ಪತ್ತೆ- ಕಹಳೆ ನ್ಯೂಸ್

ಮೂಡುಬಿದಿರೆ: ತುಂಡರಿಸಿದ ರೀತಿಯಲ್ಲಿ ದನದ ತಲೆ ಪತ್ತೆಯಾದ ಘಟನೆ ಮಹಾವೀರ ಕಾಲೇಜು ಸಮೀಪದ ಕೊಡಂಗಲ್ಲು ಕೀರ್ತಿನಗರ ಕ್ರಾಸ್ ಬಳಿ ನಡೆದಿದೆ. ಮುಂಡದಿಂದ ಬೇರ್ಪಟ್ಟಿದ್ದ ಹಸುವಿನ ತಲೆಬುರುಡೆಯನ್ನು ಗೋಣಿ ಚೀಲದಲ್ಲಿ ಸುತ್ತಿ ರಸ್ತೆಯ ಪಕ್ಕದಲ್ಲಿ ಬಿಟ್ಟು ಹೋಗಿದ್ದು, ಘಟನೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ಪೆÇಲೀಸರು ತಲೆಬುರುಡೆಯನ್ನು ಹೊರತೆಗೆಯುವ ವ್ಯವಸ್ಥೆ ಮಾಡಿದರು. ಈ ಘಟನೆಗೆ ಪ್ರತಿಕ್ರಿಯಿಸಿದ ಮೂಡುಬಿದಿರೆಯ ಹಿಂದೂ ಜಾಗರಣ ವೇದಿಕೆ...
ಕ್ರೀಡೆಮೂಡಬಿದಿರೆಸುದ್ದಿ

ದಕ್ಷಿಣ ಕನ್ನಡ ಮೂಡಬಿದಿರೆ 81ನೇ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಸಮಾಪನ – ಮಂಗಳೂರು ವಿವಿಗೆ ಸಮಗ್ರ ಪ್ರಶಸ್ತಿ, ಪಂಜಾಬ್‌ನ ಲವ್ಲಿ ಪ್ರೊಪೆಷನಲ್ ರನ್ನರ್ ಅಫ್- ಕಹಳೆ ನ್ಯೂಸ್

ಮೂಡುಬಿದಿರೆ: ಮಂಗಳೂರು ವಿವಿಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಾಲ್ಕು ದಿನಗಳ ಕಾಲ ನಡೆದ 81ನೇ ಅಖಿಲ ಭಾರತ ಅಂತರ್‌ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯು 6 ಚಿನ್ನ, 6-ಬೆಳ್ಳಿ ಹಾಗೂ 4 ಕಂಚಿನ ಪದಕದೊಂದಿಗೆ 105 ಅಂಕಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. 42 ಅಂಕಗಳನ್ನು ಗಳಿಸಿರುವ ಪಂಜಾಬ್ ಪಾಗ್ವಾರ್‌ನ ಲವ್ಲಿ ಪ್ರೊಫೆಷನಲ್...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡಬಿದಿರೆಯಲ್ಲಿ 81ನೇ ಅಖಿಲ ಭಾರತ ಪುರುಷರ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಆರಂಭ – ಕಹಳೆ ನ್ಯೂಸ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ 81ನೇ ಅಖಿಲ ಭಾರತ ಪುರುಷರ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಜ. 4 ರಿಂದ 7 ರವರೆಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದೆ. ಇಂದು ಸಂಜೆ 300 ಕ್ರೀಡಾ ತಂಡಗಳು ಹಾಗೂ 150 ಸಾಂಸ್ಕøತಿಕ ಕಲಾ ತಂಡಗಳಿಂದ ಆಕರ್ಷಕ ಮೆರವಣಿಗೆಯೊಂದಿಗೆ ಕ್ರೀಡಾಕೂಟಕ್ಕೆ ಚಾಲನೆ ಸಿಗಲಿದ್ದು, ಕ್ರೀಡಾಕೂಟದಲ್ಲಿ ದೇಶದ 300ಕ್ಕೂ ಅಧಿಕ ವಿಶ್ವವಿದ್ಯಾಲಯಗಳ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡಬಿದ್ರಿಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಭವನದಲ್ಲಿ ಕಾನೂನು ಸೇವಾ ಶಿಬಿರ : ಮೂಡಬಿದಿರೆಯ ಕಾನೂನು ಸೇವಾ ಪ್ರಾಧಿಕಾರದ ಸದುಪಯೋಗಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಕರೆ – ಕಹಳೆ ನ್ಯೂಸ್

ಸಮಸ್ಯೆ ಅಥವಾ ದೌರ್ಜನ್ಯಗಳನ್ನು ಮೌನವಾಗಿಯೇ ಎದುರಿಸುವುದು ಯಾವುದೇ ಸಮಾಜದ ಒಳ್ಳೆಯ ಲಕ್ಷಣವಲ್ಲ, ಇಂತಹ ಸ್ಥಿತಿಗಳಲ್ಲಿ ನೆರವು ನೀಡಲು ಕಾನೂನು ಸೇವಾ ಪ್ರಾಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರು ಹೇಳಿದರು. ಡಿ.30ರ ಗುರುವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೂಡಬಿದ್ರಿ ವಕೀಲರ ಸಂಘ ಹಾಗೂ ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಮೂಡಬಿದ್ರಿಯ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಯಕ್ಷದೇವ ಮಿತ್ರ ಕಲಾ ಮಂಡಳಿ ವತಿಯಿಂದ ಎಸ್.ಕೆ.ಎಫ್ ಬೊಯ್ದರ್ ಆಂಡ್ ಡ್ರೈಯರ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಮೋದ್ ಕುಮಾರ್ ಅವರಿಗೆ ಸನ್ಮಾನ- ಕಹಳೆ ನ್ಯೂಸ್

ಮೂಡಬಿದಿರೆ: ಶ್ರೀಯಕ್ಷದೇವ ಮಿತ್ರ ಕಲಾ ಮಂಡಳಿಯ 24ನೇ ವರುಷದ ಸಂದರ್ಭ ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಿದ ಬೆಳುವಾಯಿ ಬನ್ನಡ್ ಎಸ್.ಕೆ.ಎಫ್ ಬೊಯ್ದರ್ ಆಂಡ್ ಡ್ರೈಯರ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಮೋದ್ ಕುಮಾರ್ ಅವರನ್ನು ಯಕ್ಷದೇವ ಮಿತ್ರ ಕಲಾ ಮಂಡಳಿ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಬಳಿಕ ಮಾತನಾಡಿದ ಯಕ್ಷದೇವ ಮಿತ್ರ ಕಲಾ ಮಂಡಳಿಯ ಸ್ಥಾಪಕಾಧ್ಯಕ್ಷ ಎಂ. ದೇವಾನಂದ ಭಟ್ ಬೆಳುವಾಯಿ 25ನೇ ವರುಷಾಚರಣೆಯ ವಿಶೇಷ ಸಂದರ್ಭವನ್ನು ಮುಂದೆ 25 ಶಾಲಾ ಕಾಲೇಜುಗಳಲ್ಲಿ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಸಮಾಜದ ಹಿತಚಿಂತಕ ಧರ್ಮ ರಕ್ಷಕ ಮಾಳ ಹರ್ಷೇಂದ್ರ ಜೈನ್ ರವರಿಗೆ ಜೈನಮಠ ಮೂಡಬಿದ್ರೆಯಿಂದ ಸನ್ಮಾನ –ಕಹಳೆ ನ್ಯೂಸ್

ಮೂಡಬಿದ್ರೆ : ಉತ್ಸಾಹದ ಚಿಲುಮೆ ಯುವ ಮುಖಂಡ ಹಾಗೂ ಬಿಎಸ್ ಎಂ ಜೈನ್ ಅಸೋಶಿಯೇಶನ್ ನ ಕ್ರಿಯಾಶೀಲ ಪ್ರಧಾನ ಕಾರ್ಯದರ್ಶಿ ಮತ್ತು ತುಳುಕೂಟ ಬೆಂಗಳೂರಿನ ಕೋಶಾಧಿಕಾರಿ ಇವರ ಸಾಮಾಜಿಕ-ಧಾರ್ಮಿಕ ಹಿತ ಚಿಂತನೆ ಹಾಗೂ ಪರೋಪಕಾರಿ ಕಾರ್ಯಕ್ರಮಗಳ ಅಮೋಘ ಸೇವೆಗಾಗಿ ಮೂಡಬಿದ್ರೆಯ ಶ್ರೀ ಮಹಾವೀರ ಭವನ ದಲ್ಲಿ ನಡೆದ ಮುನಿಶ್ರೀ 108 ಶ್ರೀ ದಿವ್ಯ ಸಾಗರ ಮುನಿ ಮಹಾರಾಜರ ಚಾತುರ್ಮಾಸ ಪಿಂಚ್ ಪರಿವರ್ತನಾ ಕಾರ್ಯಕ್ರಮದಲ್ಲಿ ಜೈನಮಠದ ಶ್ರೀಗಳಾದ ಶ್ರೀ ಚಾರುಕೀರ್ತಿ ಭಟ್ಟಾರಕ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಕ್ರಿಸ್‍ಮಸ್ ಆಚರಣೆ- ಕಹಳೆ ನ್ಯೂಸ್

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ವಿಜ್ಞಾನ ಕಾಲೇಜು, ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್‍ಮಸ್ ಸಂಭ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಮೂಡುಬಿದಿರೆ ಪುರಸಭೆ ಸದಸ್ಯ ಜೊಸ್ಸಿ ಮೆನೇಜಸ್ ಮಾತನಾಡಿ, ಕ್ರಿಸ್ಮಸ್ ದೀಪಾವಳಿಯಂತೆ ಬೆಳಕಿನ ಹಬ್ಬ. ನಮ್ಮ ಬದುಕು ಇನ್ನೊಬ್ಬರ ಜೀವನಕ್ಕೆ ಬೆಳಕಾಗಬೇಕು ಎನ್ನುವುದನ್ನು ಕ್ರಿಸ್‍ಮಸ್ ಸಾರುತ್ತದೆ. ಪರಸ್ಪರ ಪ್ರೀತಿ, ವಿಶ್ವಾಸ, ಸೇವೆಯೊಂದಿಗೆ ಬದುಕುವ ಸಂದೇಶವನ್ನು ಕ್ರಿಸ್ಮಸ್ ನೀಡುತ್ತದೆ. ಮಾನವೀಯ ಮೌಲ್ಯಗಳನ್ನು ಅರಿತು ಸರ್ವರಿಗೂ ಒಳಿತು ಮಾಡಬೇಕೆನ್ನುವುದನ್ನು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆಸುದ್ದಿ

ದ.ಕ ಜಿಲ್ಲೆಯಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ, ಗೃಹ ಸಚಿವ ಅರಗ ಜ್ಞಾನೇಂದ್ರರ ಜೊತೆ ದ.ಕ ಜಿಲ್ಲೆಯ ಶಾಸಕರ ನಿಯೋಗದಿಂದ ಚರ್ಚೆ- ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ನಿಯೋಗದಿಂದ ಮಾನ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಲಾಯಿತು. ಪೋಲೀಸರ ಮೇಲೆ ಹಲ್ಲೆ, ಠಾಣೆಗೆ ಪ್ರವೇಶಿಸಿ ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇದನ್ನು ಸೂಕ್ತ ರೀತಿಯಲ್ಲಿ...
1 20 21 22 23 24 29
Page 22 of 29