ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ-ಕಹಳೆ ನ್ಯೂಸ್
ಮೂಡುಬಿದಿರೆ : ಕಲ್ಲಬೆಟ್ಟು ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜು ಮತ್ತು ಆಂಗ್ಲಮಾಧ್ಯಮ ಶಾಲೆಯಲ್ಲಿ ಎಪ್ಪತ್ತೆರಡನೇ ವರ್ಷದ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಧ್ವಜಾರೋಹಣಗೈದ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮಾತನಾಡಿ ನಮ್ಮ ದೇಶಕ್ಕೆ ಭಾವೈಕ್ಯತೆಯು ಜೀವವಾಗಿದೆ. ಸಮೃಧ್ಧ ಸಂಸೃತಿಯ ಇತಿಹಾಸ ಮತ್ತು ವೀರ ಧೀರರ ಪರಂಪರೆಯ ಹಿನ್ನಲೆಯಿದೆ. ನಾವೆಲ್ಲರು ನಮ್ಮ ನಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡುವ ಮೂಲಕ ಸಾಂಘಿಕವಾಗಿ ಪ್ರಯತ್ನ ಪಟ್ಟರೆ ದೇಶದ ವಿವಿಧ ಕ್ಷೇತ್ರಗಳ ಪ್ರಗತಿ...







