ಪಾಣರ ಅಜಿಲ ಯಾನೆ ನಲಿಕೆ ಯವರ ಸಮಾಜ ಸೇವಾ ಸಂಘದ 3ನೇ ವಾರ್ಷಿಕೋತ್ಸವ : ಪುಸ್ತಕ ವಿತರಣೆ, ಸಮಾಜ ಸೇವಕಗೆ ಸನ್ಮಾನ– ಕಹಳೆ ನ್ಯೂಸ್
ಮೂಡುಬಿದಿರೆ ತಾಲೂಕು ಪಾಣರ ಅಜಿಲ ಯಾನೆ ನಲಿಕೆ ಯವರ ಸಮಾಜ ಸೇವಾ ಸಂಘದ 3ನೇ ವಾರ್ಷಿಕೋತ್ಸವ-ಪುಸ್ತಕ ವಿತರಣೆ-ಸಮ್ಮಾನ ಕಾರ್ಯಕ್ರಮವು ಸಮಾಜ ಮಂದಿರದಲ್ಲಿ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಶ್ರೀಪತಿ ಭಟ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಹಕ್ಕು ಇದೆ. ಶಿಕ್ಷಣದಿಂದ ಸಮಾಜದ ಬೆಳವಣಿಗೆ ಸಾಧ್ಯ ಆದ್ದರಿಂದ ಸಮಾಜದ ಎಲ್ಲಾ ಮಕ್ಕಳು ಶಿಕ್ಷಣವನ್ನು ಪಡೆಯುವಂತ್ತಾಗಬೇಕು ಎಂದ ಅವರು ಸಂಘದ ಎಲ್ಲ ಚಟುವಟಿಕೆಗಳಿಗೆ ತುಂಬು ಪ್ರೋತ್ಸಾಹ ನೀಡುವುದಾಗಿ...







