Sunday, September 6, 2026

ಪ್ರಾದೇಶಿಕ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಡ್ಕಿದು ಒಕ್ಕೂಟದ ತ್ರೈಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ -ಕಹಳೆ ನ್ಯೂಸ್

ಮಾಣಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ ವಲಯದ ಇಡ್ಕಿದು ಒಕ್ಕೂಟದ ತ್ರೈಮಾಸಿಕ ಸಭೆಯು ಜೂಲೈ 5 ರವಿವಾರ ಕಂಬಳಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ದೇಜಪ್ಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಯೋಜನೆಯಯಿಂದ ಗುಂಪುಗಳಿಗೆ ನೀಡಲಾಗುವ ಸಾಲ ಸೌಲಭ್ಯಗಳು, ಆರೋಗ್ಯ ವಿಮೆ ಹಾಗೂ ಪ್ರಸಕ್ತ ಸಾಲಿನಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ ; ಪಾಂಡಿಚೇರಿ ಮೂಲದ ಗಂಗಾಧರನ್ ಮಾಸ್ಟರ್ ಮೈಂಡ್, 14 ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಮಂಗಳೂರು ಪೊಲೀಸರು -ಕಹಳೆ ನ್ಯೂಸ್

ಮಂಗಳೂರು : ಚಿನ್ನದ ವ್ಯಾಪಾರಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಿದ್ದು ಬಂಧನಕ್ಕಾಗಿ ಕೇರಳ ಮತ್ತು ಕೊಡಗಿನಲ್ಲಿ ಬಲೆ ಬೀಸಿದ್ದಾರೆ. ಇದೇ ವೇಳೆ, ಕೃತ್ಯದಲ್ಲಿ ಭಾಗಿಯಾದ ನಟೋರಿಯಸ್ ಆರೋಪಿಗಳ ಫೋಟೋ ಬಿಡುಗಡೆ ಮಾಡಿದ್ದು ಇವರ ಪತ್ತೆಗಾಗಿ ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ. ಪಾಂಡಿಚೇರಿ ಮೂಲದ ಶಿಬಿನ್ ಗಂಗಾಧರನ್ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗಿದ್ದು ಆತನದ್ದು ಸೇರಿ ಒಟ್ಟು 14 ಮಂದಿ ಆರೋಪಿಗಳ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಕೇರಳದ...
ಕಾಪುಶಿಕ್ಷಣ

ಅಚ್ಚಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ LKG ತರಗತಿ ಉದ್ಘಾಟನೆ-ಕಹಳೆ ನ್ಯೂಸ್

ಕಟಪಾಡಿ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಚ್ಚಡ ದಲ್ಲಿ ನೂತನವಾಗಿ ಆರಂಭಿಸಲಾದ LKG ತರಗತಿಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಬಂಗಾರದ ತುಂಡಿನಂತಿರುವ ಪುಟ್ಟ ಮಕ್ಕಳಿಗೆ ವಿದ್ಯೆ, ಬುದ್ಧಿ, ಸಂಸ್ಕಾರ ಹಾಗೂ ಆಟ-ಪಾಠಗಳ ಮೂಲಕ ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಪವಿತ್ರ ಕಾರ್ಯವನ್ನು ಶಾಲೆಗಳು ಮತ್ತು ಶಿಕ್ಷಕರು ಮಾಡುತ್ತಾರೆ. ಶಿಕ್ಷಕರು ಜವಾಬ್ದಾರಿಯಿಂದ ಸೇವೆ ಸಲ್ಲಿಸಿ ಸಮಾಜಕ್ಕೆ ಉತ್ತಮ ನಾಗರಿಕರನ್ನು ನೀಡಬೇಕು. ಶಾಲೆಗಳು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸದಸ್ಯತ್ವದ ಅರಿವಿನಿಂದ ನಾಯಕತ್ವದ ಬೆಳಕಿನೆಡೆಗೆ ಯುವ ಪಯಣ : ರಾಜೇಶ್ ಸುವರ್ಣ -ಕಹಳೆ ನ್ಯೂಸ್

ಮಾಣಿ: ಯುವ ಮನಸ್ಸುಗಳಲ್ಲಿ ಕನಸುಗಳ ಕಿಡಿ ಹೊತ್ತಿಸಿ, ಸೇವೆಯ ಸಂಕಲ್ಪಕ್ಕೆ ಶಕ್ತಿ ತುಂಬುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಶಿಬಿರವು ಮಾಣಿ ಕರ್ನಾಟಕ ಪ್ರೌಢಶಾಲೆಯ ಸಭಾಭವನದಲ್ಲಿ ಜರಗಿತು. “ಯುವಶಕ್ತಿ ಜಾಗೃತಿಯಾದರೆ ಸಮಾಜದ ನಾಳೆ ಬೆಳಗುತ್ತದೆ” ಎಂಬ ಆಶಯದೊಂದಿಗೆ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಯುವ ವಾಹಿನಿ ಕೇಂದ್ರ ಸಮಿತಿಯ ಬೈಲಾ ತಿದ್ದುಪಡಿ ಸಮಿತಿ ಸಂಚಾಲಕ ರಾಜೇಶ್ ಸುವರ್ಣ ಬಿಸಿ ರೋಡ್ರವರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೆರ್ ಸೇವಾ ಟ್ರೆಸ್ಟ್. (ರಿ. )ನರಿಕೊಂಬು ಬಿಲ್ಲವರ ಸೌಹಾರ್ದ ಕುಟುಂಬ ಮಿಲನ – 2026 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಬಂಟ್ವಾಳ : ಬಿರುವೆರ್ ಸೇವಾ ಟ್ರೆಸ್ಟ್ ( ರಿ.)ನರಿಕೊಂಬು ಬಂಟ್ವಾಳ ಇದರ ವತಿಯಿಂದ ನಡೆಯುವ ಬಿಲ್ಲವರ ಸೌಹಾರ್ದ ಕುಟುಂಬ ಮಿಲನ - 2026 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜೂ.28 ರವಿವಾರ ಸಂಸ್ಥೆ ಕಚೇರಿಯಲ್ಲಿ ಸಂಘದ ಅಧ್ಯಕ್ಷರಾದ ಸೀತಾರಾಮ್ ಪೂಜಾರಿ ಬೋಳಂತುರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ನಾಟಿ, ಶ್ರೀಧರ ಮೇಸ್ತ್ರಿಸಾಜಂಕ್ಪಾಳಿಕೆ, ಗೌರವ ಸಲಹೆಗಾರ ಮಾಧವ ಕರ್ಬೆಟ್ಟು, ಉಪಾಧ್ಯಕ್ಷರ ಹರೀಶ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಧಾತ್ರಿ ಕಲಾವಿದೆ‌ರ್ ಕುಡ್ಲ ಕಲಾ ಸಂಸ್ಥೆಯ ಆಶ್ರಯದಲ್ಲಿ ನಾಳೆ ವಿಧಾತ್ರಿ ಸಂಭ್ರಮ -2026; ‘ಜೈ ಹನುಮಾನ್‌’ ನಾಟಕ ಪ್ರದರ್ಶನ -ಕಹಳೆ ನ್ಯೂಸ್

ಮಂಗಳೂರು : ಕಳೆದ 17 ವರ್ಷಗಳಿಂದ ತುಳು ರಂಗಭೂಮಿಯಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ವಿಧಾತ್ರಿ ಕಲಾವಿದೆರ್ ಕುಡ್ಲ (ರಿ.) ಸಂಸ್ಥೆಯ ವತಿಯಿಂದ ವಿಧಾತ್ರಿ ಸಂಭ್ರಮ-2026 ಕಾರ್ಯಕ್ರವು ಜೂ. 28ರಂದು ಸಂಜೆ 4:30ಕ್ಕೆ ನಗರದ ಪುರಭವನ (ಟೌನ್‌ಹಾಲ್) ನಲ್ಲಿ ಜರಗಲಿದೆ ಮತ್ತು ಚಿದಾನಂದ ಅದ್ಯಪಾಡಿ ಸಾರಥ್ಯದಲ್ಲಿ, ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ, ಭರತ್ ಎಸ್. ಕರ್ಕೇರ ರಚನೆಯ ತುಳು ಮತ್ತು ಕನ್ನಡ ಭಾಷೆಯಲ್ಲಿ ರಚನೆಯಾದ 'ಜೈ ಹನುಮಾನ್' ನಾಟಕ ಪ್ರದರ್ಶನ ನಡೆಯಲಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬೈಕ್ ಸವಾರ ಗಂಭೀರ ಗಾಯ – ಕಹಳೆ ನ್ಯೂಸ್

ಮಂಗಳೂರು : ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಪಿ.ಎ. ಕಾಲೇಜಿನ ಬಸ್ ನಾಟೆಕಲ್ ತಿರುವಿನಲ್ಲಿ ದ್ವಿಚಕ್ರ ವಾಹನವನ್ನು ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ವಾಲಿದ ಘಟನೆ ನಡೆದಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಚಿಕ್ಕಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಆದರೆ ದ್ವಿಚಕ್ರ ವಾಹನ ಸವಾರ ಕೆಲಕಾಲ ಬಸ್‌ನಡಿ ಸಿಲುಕಿಕೊಂಡಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ಕ್ರೇನ್ ತರಿಸಿ ಬಸ್‌ನ್ನು ಮೇಲಕ್ಕೆತ್ತಿ ಸವಾರನನ್ನು ಹೊರತೆಗೆದರು.ಗಂಭೀರ ಗಾಯಗೊಂಡ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮುಖ್ಯ ಶಿಕ್ಷಕಿಯಾಗಿ ಪದೊನ್ನೋತಿ ಗೊಂಡ ಶಿಕ್ಷಕಿ ಚೇತನಾ ಕುಮಾರಿ ಯವರ ಬಿಳ್ಕೊಡುಗೆ ಸಮಾರಂಭ : ಒಂದು ಶಾಲೆಯ ಏಳಿಗೆ ಅಲ್ಲಿಯ ಶಿಕ್ಷಕರ ಹವ್ಯಾಸ ಮತ್ತು ಕಾರ್ಯತತ್ಪರತೆಯನ್ನು ಅವಲಂಬಿಸಿದೆ – ದಿವಾಕರ ಶೆಟ್ಟಿ – ಕಹಳೆ ನ್ಯೂಸ್

ಕಲ್ಲಡ್ಕ : ಒಂದು ಶಾಲೆಯ ಏಳಿಗೆ ಅಲ್ಲಿಯ ಶಿಕ್ಷಕರ ಹವ್ಯಾಸ ಮತ್ತು ಕಾರ್ಯತತ್ಪರತೆಯನ್ನು ಅವಲಂಬಿಸಿದೆ, ಶಿಕ್ಷಕರು ಶಾಲೆಯ ಭೌತಿಕ ಮತ್ತು ಶೈಕ್ಷಣಿಕ ಏಳಿಗೆಗೆ ಸೇವಾ ಮನೋಭಾವನೆಯಿಂದ ಕರ್ತವ್ಯ ನಿರ್ವಹಿಸಿದಾಗ ಅದರ ಫಲ ಉತ್ತಮವಾಗಿರುತ್ತದೆ.ಎಂದು ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ಅಧ್ಯಕ್ಷರಾದ ದಿವಾಕರ ಶೆಟ್ಟಿ ಹೇಳಿದರು. ಅವರು ಜೂನ್ 27 ಶನಿವಾರ ಬಾಳ್ತಿಲ ಗ್ರಾಮದ ಕಂಟಿಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆತ ಶಿಕ್ಷಕಿ ಚೇತನಾ ಕುಮಾರಿ ಯವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ...
1 8 9 10 11 12 901
Page 10 of 901