Monday, September 7, 2026

ಪ್ರಾದೇಶಿಕ

ಜಿಲ್ಲೆದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ನಾಳೆ 21ರಂದು ದ್ವಾರಕಾ ಕಾರ್ಪ್ ಪ್ರೈ. ಲಿ. ನ ಉಜ್ಜೀವನ ಲೋಕಾರ್ಪಣ ಕಾರ್ಯಕ್ರಮ – ಕಹಳೆ ನ್ಯೂಸ್ 

ಪುತ್ತೂರು : ದ್ವಾರಕಾ ಕಾರ್ಪ್ ಪ್ರೈ. ಲಿ. ನ ನೂತನ ಉಜ್ಜೀವನ ಬಡಾವಣೆ, ದ್ವಾರಕಾ ನೆಸ್ಟ್, ದ್ವಾರಕಾ ರಿಫೆಪ್ಟೆಂಟ್, ದ್ವಾರಕಾ ಮಾರ್ಟ್ ಇದರ ಲೋಕಾರ್ಪಣ ಕಾರ್ಯಕ್ರಮವು ಜೂ.21 (ನಾಳೆ) ಉಪ್ಪಿನಂಗಡಿಯ ಕೆಮ್ಮಾರ ಉಜ್ಜೀವನ ಬಡಾವಣೆಯಲ್ಲಿ ನಡೆಯಲಿದೆ. ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ಟ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವು ನಡೆಯಲಿದ್ದು, ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉಜ್ಜೀವನ ಬಡಾವಣೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಪುತ್ತೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ಕ್ಕೆ ಇನ್ನೂ ಕೇವಲ 3 ದಿನಗಳು ಮಾತ್ರ-ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾದ ‘ಮುಂಗಾರು ಮೇಳ’ಕ್ಕೆ ಇನ್ನೂ ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಗ್ರಾಹಕರು ಈ ವಿಶೇಷ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆಯ ಮುಖ್ಯಸ್ಥರಾದ ಬಲರಾಮಾ ಆಚಾರ್ಯರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ದರವು ಸುಮಾರು ₹15,000ರಿಂದ ₹13,300 ರ ಮಟ್ಟಕ್ಕೆ ಇಳಿಕೆಯಾಗಿರುವುದು ಆಭರಣ ಖರೀದಿಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದೆ. ಇದರೊಂದಿಗೆ ಮುಂಗಾರು ಮೇಳದ ವಿಶೇಷ ಕೊಡುಗೆಗಳು ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶವನ್ನು ಒದಗಿಸುತ್ತಿವೆ....
ಕೊಡಗುಜಿಲ್ಲೆದಕ್ಷಿಣ ಕನ್ನಡಪುತ್ತೂರು

ಮುಳಿಯ ಗೋಲ್ಡ್ & ಡೈಮಂಡ್ಸ್‌ನ ವಿಶೇಷ ಎಕ್ಸ್‌ಕ್ಲೂಸಿವ್ ಬೆಳ್ಳಿ ಆಭರಣಗಳ ಬ್ರ್ಯಾಂಡ್ “ಸಿಲ್ವೆರಿಯಾ” ವತಿಯಿಂದ “ಸಿಲ್ವರ್ ಮ್ಯಾರಥಾನ್ 2026” ಯೋಜನೆಗೆ ಚಾಲನೆ -ಕಹಳೆ ನ್ಯೂಸ್

ಪುತ್ತೂರು/ಕೊಡಗು: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ವಿಶೇಷ ಎಕ್ಸ್‌ಕ್ಲೂಸಿವ್ ಬೆಳ್ಳಿ ಆಭರಣಗಳ ಬ್ರ್ಯಾಂಡ್ "ಸಿಲ್ವೆರಿಯಾ" ವತಿಯಿಂದ "ಸಿಲ್ವರ್ ಮ್ಯಾರಥಾನ್ 2026" ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಈ 90 ದಿನಗಳ ವಿಶೇಷ ಯೋಜನೆಯು ಸೆಪ್ಟೆಂಬರ್ 14, 2026ರವರೆಗೆ ನಡೆಯಲಿದ್ದು, ಗ್ರಾಹಕರಿಗೆ ವೈವಿಧ್ಯಮಯ 92.5 ಶುದ್ಧತೆಯ ಸ್ಟರ್ಲಿಂಗ್ ಸಿಲ್ವರ್ ಆಭರಣಗಳನ್ನು ಪರಿಚಯಿಸುವ ಉದ್ದೇಶವನ್ನು ಹೊಂದಿದೆ. 92.5 ಶುದ್ಧತೆಯ ಬೆಳ್ಳಿ ಸರಗಳು , ನೆಕ್ಲೇಸ್‌ಗಳು, ಕಾಲ್ಗೆಜ್ಜೆ , ಮಕ್ಕಳ ಜ್ಯುವೆಲ್ಲರಿ, ಉಂಗುರಗಳು, ಬಳೆಗಳು,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ನದಿ ನೀರಿನ ಮಟ್ಟದಲ್ಲಿ ಸಂಪೂರ್ಣ ಕುಸಿತ, ಜನರಲ್ಲಿ ಆತಂಕ -ಕಹಳೆ ನ್ಯೂಸ್

ಉಪ್ಪಿನಂಗಡಿ  : ಸಂಗಮ ತಾಣವೆಂದು ಪ್ರಸಿದ್ದಿ ಪಡೆದಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಹರಿಯುತ್ತಿರುವ ನದಿಯಲ್ಲಿ ನೀರಿನ ಮಟ್ಟ ಸಂಪೂರ್ಣ ಕುಸಿತ ಕಂಡಿದ್ದು, ಮರಳು ಕಾಣುತ್ತಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ ವರ್ಷ 2025 ರ ಜೂನ್ ತಿಂಗಳ 15 ರಂದು ನದಿಯ ನೀರಿನ ಮಟ್ಟ ಹಾಗೂ 2026 ರ ಜೂನ್ ತಿಂಗಳ 15 ರಂದು ನದಿಯ ನೀರಿನ ಮಟ್ಟವನ್ನು ಹೋಲಿಕೆ ಮಾಡಿದ ಫೋಟೋ ಸಖತ್ ವೈರಲ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಜೂನ್ ಅಂತ್ಯಕ್ಕೆ ಬೆಂಗಳೂರು-ಮಂಗಳೂರು ವಂದೇ ಭಾರತ್ ಘಾಟ್ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ -ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕದ ಕರಾವಳಿ ಪ್ರದೇಶ ಮತ್ತು ರಾಜ್ಯ ರಾಜಧಾನಿ ಬೆಂಗಳೂರು ನಡುವಿನ ಹೈಸ್ಪೀಡ್ ರೈಲು ಸಂಪರ್ಕದ ಕನಸನ್ನು ನನಸಾಗಿಸುವತ್ತ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ ಸವಾಲಿನ 55 ಕಿಮೀ ಘಾಟ್ ವಿಭಾಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಪ್ರಾಯೋಗಿಕ ಸಂಚಾರ ಜೂನ್ ಕೊನೆಯ ವಾರದಲ್ಲಿ ನಡೆಯುವ ಸಾಧ್ಯತೆಯಿದೆ. ರೈಲ್ವೆ ಸಚಿವಾಲಯದ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ ಈ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಮೀನು ಕೊರತೆ, ಯುದ್ಧದ ಪರಿಣಾಮ – ಮೊಟ್ಟೆ ದರ 8 ರೂ. ಗಡಿ ದಾಟಿತು -ಕಹಳೆ ನ್ಯೂಸ್

ಮಂಗಳೂರು : ಮೀನುಗಾರಿಕೆ ನಿಷೇಧ ಅವಧಿಯಲ್ಲಿ ಸಾಮಾನ್ಯವಾಗಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗುತ್ತದಾದರೂ, ಈ ಬಾರಿ ಜಾಗತಿಕ ಪರಿಸ್ಥಿತಿ ಹಾಗೂ ಉತ್ಪಾದನಾ ವೆಚ್ಚ ಏರಿಕೆಯೂ ದರ ಹೆಚ್ಚಳಕ್ಕೆ ಕಾರಣವಾಗಿದೆ. ಕೋಳಿಗಳಿಗೆ ನೀಡುವ ಔಷಧಗಳ ಬೆಲೆ ಹೆಚ್ಚಳ ಹಾಗೂ ಮೆಕ್ಕೆಜೋಳ ದರ ಏರಿಕೆಯಿಂದ ಮೊಟ್ಟೆಯ ಬೆಲೆ ಒಂದಕ್ಕೆ 8 ರೂಪಾಯಿ ಗಡಿ ದಾಟಿದೆ. ಬದಲಾಗುತ್ತಿರುವ ಹವಾಮಾನವೂ ಮೊಟ್ಟೆ ಉತ್ಪಾದನೆಗೆ ಹೊಡೆತ ನೀಡಿದೆ. ಶಾಲೆಗಳು ಆರಂಭವಾಗಿರುವುದರಿಂದ ಬೇಡಿಕೆ ಹೆಚ್ಚಿದ್ದು, ಮೀನು ಲಭ್ಯತೆ ಕಡಿಮೆಯಾಗಿರುವ ಹಿನ್ನೆಲೆ...
ಕೊಡಗುಜಿಲ್ಲೆಮಡಿಕೇರಿಸುದ್ದಿ

ಕೊಡಗಿನ ತಾಯಿ-ಮಗು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಮತಾಂತರ & ಲವ್ ಜಿಹಾದ್‌ಗೆ ದೊಡ್ಡ ಸಂಚು -ಕಹಳೆ ನ್ಯೂಸ್

ಮಡಿಕೇರಿ: ಒಂದೂವರೆ ತಿಂಗಳ ಹಿಂದೆ ಕೊಡಗಿನ  ಕುಶಾಲನಗರದಿಂದ ನಾಪತ್ತೆಯಾಗಿದ್ದ ಸಚಿತಾ ಹಾಗೂ ಆಕೆಯ 9 ವರ್ಷದ ಮಗು ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ಮದರಸವೊಂದರಲ್ಲಿ ಪತ್ತೆಯಾಗಿದ್ದಾರೆ. ಈ ಪ್ರಕರಣದ ಹಿಂದೆ ಮತಾಂತರ ಹಾಗೂ ಲವ್ ಜಿಹಾದ್‌ನ  ದೊಡ್ಡ ಸಂಚು ಇದೆ ಎಂದು ಕುಶಾಲನಗರದ ಹಿಂದೂಪರ ಸಂಘಟನೆಗಳು ಆರೋಪಿಸಿವೆ. ಮಲಪ್ಪುರಂ ಜಿಲ್ಲೆಯ ಪೊನ್ನಾಣಿ ಹಾಗೂ ಮಂಜೇರಿ ಭಾಗಗಳಲ್ಲಿ ಮತಾಂತರ ಜಾಲ ಕಾರ್ಯನಿರ್ವಹಿಸುತ್ತಿದೆ ಎಂಬ ಆರೋಪವನ್ನೂ ಮಾಡಿವೆ. ಕುಶಾಲನಗರ ಬಳಿಯ ಎನ್‌ಟಿಸಿ ಕಾಂಪ್ಲೆಕ್ಸ್‌ನ...
ದಕ್ಷಿಣ ಕನ್ನಡಪುತ್ತೂರುಮಾರುಕಟ್ಟೆವಾಣಿಜ್ಯಸುದ್ದಿ

ಉಪ್ಪಿನಂಗಡಿ ಸಮೀಪದ ಕೆಮ್ಮಾರದ ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ – ಕಹಳೆ ನ್ಯೂಸ್

ದ್ವಾರಕಾ ಕಾರ್ಪ್. ಪ್ರೈ. ಲಿ. ಇದರ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಉಪ್ಪಿನಂಗಡಿ ಸಮೀಪದ ಕೆಮ್ಮಾರದ ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ ದಿನಾಂಕ 18-06-2026ರಂದು ಜರುಗಿತು. ಪುರೋಹಿತರಾದ ಶ್ರೀ ವೇ. ಮೂ. ಕೃಷ್ಣಕುಮಾರ ಉಪಾಧ್ಯಾಯ ಇವರ ನೇತೃತ್ವದಲ್ಲಿ ಸಾಮೂಹಿಕ ಭೂಮಿ ಪೂಜೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಸುಮಾರು 51 ಮನೆಯ ಭೂಮಿ ಪೂಜೆ ನಡೆದಿದ್ದು, ಹಲವು ಗ್ರಾಹಕರು ತಮ್ಮ ಸೈಟ್ ನ ಭೂಮಿ ಪೂಜೆಯನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಬಡಾವಣೆಯ ದ್ವಾರಕಾ...
1 11 12 13 14 15 901
Page 13 of 901