Monday, April 27, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೆಯ್ಯೂರು: ಪ್ರಗತಿ ಬಂಧು ಒಕ್ಕೂಟಗಳ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ : ಧಾರ್ಮಿಕ ಸಭಾ ಕಾರ್ಯಕ್ರಮ, ಸ್ವ-ಸಹಾಯ ಸಂಘಗಳಿಗೆ 1001 ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ- ಕಹಳೆ ನ್ಯೂಸ್ 

ಕೆಯ್ಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಮತ್ತೂರು ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಯ್ಯೂರು ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಹಾಗೂ ಸ್ವ-ಸಹಾಯ ಸಂಘಗಳಿಗೆ 1001 ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಕೆಯ್ಯೂರು ಜಯಕರ್ನಾಟಕ ಸಭಾಭವನದಲ್ಲಿ ನಡೆಯಿತು. ಬೆಳಗ್ಗೆ ಭಜನಾ ಸೇವೆ ನಡೆದು ಬಳಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಪ್ರಾರಂಭಗೊಂಡಿತು. ಬಳಿಕ ಕೇಂದ್ರ ಒಕ್ಕೂಟದ...
ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಸ್ವಾಸ್ತ್ಯ ನೇಚರ್ ಕ್ಯೂರ್ ನಲ್ಲಿ ಹೊಸ ವರುಷದ ಪ್ರಯುಕ್ತ ಶೇ.10ರಷ್ಟು ಡಿಸ್ಕೌಂಟ್ ಆಫರ್..! – ಕಹಳೆ ನ್ಯೂಸ್

ಸ್ವಾಸ್ತ್ಯ ನೇಚರ್ ಕ್ಯೂರ್, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರ. ಕಳೆದ ಸುಮಾರು 8 ವರ್ಷಗಳಿಂದ ಹಲವಾರು ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವ ಮೂಲಕ ಹಲವರ ಪಾಲಿಗೆ ಆಶಾಕಿರಣವಾದ ಕ್ಲಿನಿಕ್. ಪುತ್ತೂರಿನ ಬೊಳುವಾರಿನಲ್ಲಿ ಕಾರ್ಯಾಚರಿಸುತ್ತಿರುವ ಈ ಕ್ಲಿನಿಕ್‍ನಲ್ಲಿ ಹೊಸ ವರುಷದ ಪ್ರಯುಕ್ತ ಆಫರ್ ನಡಿತಾ ಇದೆ. ಯಾವುದೇ ಸೇವೆಯ ಮೇಲೆ ಶೇ.10ರಷ್ಟು ಡಿಸ್ಕೌಂಟ್ ನೀಡಲಾಗುತ್ತಿದೆ. ಇಲ್ಲಿ ಚರ್ಮದ ಅಲರ್ಜಿ ರೋಗಗಳು, ಅಸ್ತಮಾ, ರಕ್ತಹೀನತೆ, ಆತಂಕ, ಡಿಪ್ರೆಶನ್, ಹೊಟ್ಟೆಯುಬ್ಬರ, ಬೊಜ್ಜು, ಬಿಪಿ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಡಿ. 22ರಂದು ಕಲ್ಲಕಟ್ಟದಲ್ಲಿ ‘ರಕ್ಷಾ ಕ್ಲಿನಿಕ್’ ಶುಭಾರಂಭ: ಎಡನೀರು ಶ್ರೀಗಳಿಂದ ಉದ್ಘಾಟನೆ- ಕಹಳೆ ನ್ಯೂಸ್

ವಿಟ್ಲ: ಸಾರ್ವಜನಿಕರಿಗೆ ಸುಸಜ್ಜಿತ ವೈದ್ಯಕೀಯ ಸೇವೆ ನೀಡುವ ನಿಟ್ಟಿನಲ್ಲಿ ವಿಟ್ಲದ ಚಂದಳಿಕೆ ಸಮೀಪದ ಕಲ್ಲಕಟ್ಟದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 'ರಕ್ಷಾ ಕ್ಲಿನಿಕ್' ಡಿಸೆಂಬರ್ 22ರಂದು ಉದ್ಘಾಟನೆಗೊಳ್ಳಲಿದೆ. ಕಲ್ಲಕಟ್ಟದ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸಲಿರುವ ಈ ಕ್ಲಿನಿಕ್ ಅನ್ನು ಡಿ.22ರಂದು ಬೆಳಿಗ್ಗೆ 11:30ಕ್ಕೆ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠಾಧೀಶರಾದ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಿದ್ದಾರೆ. ಕ್ಲಿನಿಕ್‌ನ ವಿಶೇಷತೆಗಳು ಮತ್ತು ಸೌಲಭ್ಯಗಳು: ರೋಗಿಗಳ ಅನುಕೂಲಕ್ಕಾಗಿ ಈ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಇಂದಬೆಟ್ಟು ವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ – ಕಹಳೆ ನ್ಯೂಸ್

ಇಂದಬೆಟ್ಟು ಗ್ರಾಮದ ತುರ್ಕರೆಬೆಟ್ಟು ರಾಜೇಶ್ ಬಿನ್ ಉರ್ಮಿಶ್ ರವರ ದನದ ಹಟ್ಟಿ, ಕೊಟ್ಟಿಗೆ ಹಾಗೂ ರಬ್ಬರ್ ಸ್ಮೋಕ್ ಹೌಸ್ ಗೆ ತಡ ರಾತ್ರಿ 12.30 ರ ವೇಳೆಗೆ ಆಕಸ್ಮಿಕ ಬೆಂಕಿ ತಗಲಿ ಕೊಟ್ಟಿಗೆ ಸಂಪೂರ್ಣ ಸುಟ್ಟು ಹೋಗಿರುತ್ತದೆ. ಈ ಸಂದರ್ಭದಲ್ಲಿ ಸ್ಥಳಿಯರ ತುರ್ತು ಸಹಕಾರದಿಂದ ಹಟ್ಟಿಯಲ್ಲಿ ಕಟ್ಟಿದ್ದ ದನ ಹಾಗೂ ಕರುವನ್ನು ರಕ್ಷಿಸಲಾಗಿದೆ, ನೀರು ಹಾಕಿ ಬೆಂಕಿ ನಂದಿಸಲಾಗಿದೆ, ಯಾವುದೇ ಪ್ರಾಣ ಹಾನಿ ಆಗಿರುವುದಿಲ್ಲ. ಕೊಟ್ಟಿಗೆಯಲ್ಲಿ ಇದ್ದ ರಬ್ಬರ್ ಸೀಟ್,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ : ಲಾಂಛನ ಬಿಡುಗಡೆ – ಕಹಳೆ ನ್ಯೂಸ್

ವಿಟ್ಲ: ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಿನ್ನೆಲೆಯಲ್ಲಿ ಲಾಂಛನ ಬಿಡಗಡೆ ಕಾರ್ಯಕ್ರಮ ಶೃಂಗೇರಿಯಲ್ಲಿ ನಡೆಯಿತು. ಶೃಂಗೇರಿ ದಕ್ಷಿಣಾಮ್ನಾಯ ಶಾರಾದಾಪೀಠದ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ವಿದುಶೇಖರ ಭಾರತೀ ಮಹಾಸ್ವಾಮೀಜಿಯವರು ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ದಿನಾಂಕವನ್ನು ಘೋಷಿಸಿ, ಬ್ರಹ್ಮಕಲಶಾಭಿಷೇಕದ ಲಾಂಛನವನ್ನು ಲೋಕಾರ್ಪಣೆಗೊಳಿಸಿ ಸ್ವರ್ಣ ಮಂತ್ರಾಕ್ಷತೆಯನ್ನಿತ್ತು ಹರಸಿದರು. ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ರಘುರಾಮ ಕಾರಂತ ಪದ್ಯಾಣ, ಅಧ್ಯಕ್ಷರಾದ ಅರವಿಂದ ಭಟ್ ಪದ್ಯಾಣ, ಆಡಳಿತ ಮೊಕ್ತೇಸರ ಸೇರಾಜೆ ಸತ್ಯನಾರಾಯಣ ಭಟ್, ಕಾರ್ಯದರ್ಶಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 63 : ನಾರಾಯಣಗುರುಗಳು ಸ್ವಾವಾಲಂಬಿ ಬದುಕಿನ‌ ದಾರಿದೀಪ : ರಾಜೇಶ್ ಬಲ್ಯ-ಕಹಳೆ ನ್ಯೂಸ್

ಬಾಯಿಲ : ಸ್ವಾವಲಂಬಿ ಬದುಕು ಮಾನವ ಗೌರವದ ಮೂಲವೆಂದು ನಾರಾಯಣಗುರು ಬೋಧಿಸಿದರು. ಪರಿಶ್ರಮ, ಶಿಕ್ಷಣ ಮತ್ತು ಸ್ವಶಕ್ತಿಯ ಅರಿವು ಜೀವನವನ್ನು ಬಲಿಷ್ಠಗೊಳಿಸುತ್ತದೆ ಎಂಬುದು ಅವರ ಸಂದೇಶ. ಇತರರ ಮೇಲೆ ಅವಲಂಬನೆ ಬಿಡಿಸಿ, ಸ್ವತಂತ್ರ ಚಿಂತನೆ ಮತ್ತು ಕಾಯಕದ ಗೌರವಕ್ಕೆ ಗುರುಗಳು ದಾರಿ ತೋರಿದರು. ಅವರ ತತ್ವಗಳು ಇಂದು ಕೂಡ ಆತ್ಮನಿರ್ಭರ ಸಮಾಜ ನಿರ್ಮಾಣಕ್ಕೆ ಶಾಶ್ವತ ಪ್ರೇರಣೆಯಾಗಿ ಉಳಿದಿವೆ ಎಂದು ಯುವ ವಾಗ್ಮಿ ರಾಜೇಶ್ ಬಲ್ಯ ತಿಳಿಸಿದರು ಅವರು ಡಿಸೆಂಬರ್ 14...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ (ರಿ) ಕಲ್ಲಡ್ಕ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಬೈದ್ಯಶ್ರೀ ಕ್ರೀಡೋತ್ಸವ – 2025-ಕಹಳೆ ನ್ಯೂಸ್

ಕಲ್ಲಡ್ಕ,: ಗೋಳ್ತಮಜಲು, ಬಾಲ್ತಿಲ, ಅಮ್ಟೂರು, ವೀರಕಂಭ ಬೋಳಂತೂರು, ಬೊಂಡಾಲ, ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವ ಸಂಘ (ರಿ) ಕಲ್ಲಡ್ಕ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ, ಹಾಗೂ ಬೈದ್ಯಶ್ರೀ ಕ್ರೀಡೋತ್ಸವ - 2025 ಡಿಸೆಂಬರ್ 14 ರ ರವಿವಾರ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜರಗಿತು. ಸೇರಿದ ಅತಿಥಿಗಳು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಗೋಳ್ತ ಮಜಲು ಗ್ರಾಮ ಪಂಚಾಯತ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿವಿಧ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಕಲ್ಲಡ್ಕ ಪೇಟೆ ಸ್ವಚ್ಛತಾ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕಲ್ಲಡ್ಕ ಘಟಕ, ಗ್ರಾಮ ಪಂಚಾಯತ್ ಬಾಳ್ತಿಲ ಮತ್ತು ಗೋಳ್ತಾ ಮಜಲು, ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಕಲ್ಲಡ್ಕ,,ಹಸಿರು ಸೇವಾದಳ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಹಾಗೂ ಸ್ಥಳೀಯ ಸಂಘಟನೆಗಳ ಸಾಕಾರದೊಂದಿಗೆ ಕಲ್ಲಡ್ಕ ಪೇಟೆಯ ಸ್ವಚ್ಛತಾ ಕಾರ್ಯಕ್ರಮ ಡಿಸೆಂಬರ್ 14 ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ಗೋಳ್ತ ಮಜಲು ಗ್ರಾಮ...
1 30 31 32 33 34 872
Page 32 of 872