ಇಂದು ಸಿಎಂ ಸಿದ್ದರಾಮಯ್ಯ ; ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ-ಕಹಳೆ ನ್ಯೂಸ್
ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು (ಡಿ.3) ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ 11:40ಕ್ಕೆ ಉಳ್ಳಾಲ ತಾಲೂಕಿನ ಕೊಣಾಜೆ ಮಂಗಳ ಗಂಗೋತ್ರಿಯಲ್ಲಿ ನಡೆಯಲಿರುವ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆನಂತರ ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ...







