Sunday, April 26, 2026

ಪ್ರಾದೇಶಿಕ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ : ವಿವಿಧ ಮಠಾಧೀಶರು ಹಾಗೂ ಗಣ್ಯಮಾನ್ಯರ ನೇತೃತ್ವದಲ್ಲಿ ನಡೆದ ಸುಧರ್ಮ ಸಭೆ – ಕಹಳೆ ನ್ಯೂಸ್

ಬಂಟ್ವಾಳ : ಧರ್ಮದ ಆಧಾರದ ಮೇಲೆ ನಿಂತಿರುವ ಸನಾತನ ಸಂಸ್ಕೃತಿಯನ್ನು ಉಳಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಹೇಳಿದ ಅವರು, ಪ್ರಪಂಚದಲ್ಲಿ ದೇವರ ಮನೆಗೆ ಹೆಚ್ಚು ಮಹತ್ವ ನೀಢಬೇಕು. ನಮ್ಮ ಧರ್ಮ, ಸಂಸ್ಕೃತಿಯನ್ನು ಕಳೆದುಕೊಂಡು ಬದುಕಬಾರದು. ನಮ್ಮದೇ ಆದಂಥ ಆಚರಣೆಗಳನ್ನು ಉಳಿಸಿಕೊಳ್ಳಬೇಕು ಎಂದು ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.30ರಂದು ಸಂಜೆ ಹೊರೆಕಾಣಿಕೆ ಮೆರವಣಿಗೆ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಅವರು...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಆರೀಫ್‌ ಹತ್ಯೆ ಪ್ರಕರಣ: ಸಿಸಿಬಿ ಪೊಲೀಸರು ಸೇರಿ ವಿಶೇಷ ಪತ್ತೆ ದಳ ರಚನೆ , ತೊಕ್ಕೊಟ್ಟು ಫೈಓವ‌ರ್ ಬಳಿ ಹತ್ಯೆಯಾದ ಆರೀಫ್ ಹಂತಕರ ಶೋಧ ಚುರುಕು -ಕಹಳೆ ನ್ಯೂಸ್

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಫೈಓವರ್ ಮೇಲೆ ಮೀನಿನ ವ್ಯಾಪಾರಿ, ರೌಡಿ ಶೀಟರ್‌ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ ಹುಸೇನ್ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆ ಕಾರ್ಯದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಕೊಲೆಯಾದ ಆರೀಫ್‌ ಪುತ್ರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನೌಫಾಲ್ ಸಹಚರ ಮಹಮ್ಮದ್ ರಿಫಾತ್ ಆಲಿ ನೇತೃತ್ವದ ತಂಡ ಕೊಲೆ ಮಾಡಿದ್ದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಆರೀಫ್‌ ಕೊಲೆ ನಡೆಸಿದ್ದ ಹಂತಕರು ಇನ್ನೋವಾ ಕಾರನ್ನು ವಿಟ್ಲ ಬುಡೋಳಿಯಲ್ಲಿ ಬಿಟ್ಟು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಸುಳ್ಯ

ಮಂಗಳೂರು ವಿಶ್ವವಿದ್ಯಾನಿಲಯ ಅಂತರ್‌ ಕಾಲೇಜು ಮತ್ತು ಅಂತರ್‌ ವಲಯ ಮಟ್ಟದ ಮೂರು ದಿನಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಸಮಾರೋಪ: ಆಳ್ವಾಸ್ ಮೂಡಬಿದಿರೆ‌ ಚಾಂಪಿಯನ್‌, ಎಸ್.ಡಿ.ಎಂ ಉಜಿರೆ ರನ್ನರ್ಸ್‌ -ಕಹಳೆ ನ್ಯೂಸ್

ಮಂಗಳೂರು : ಸುಳ್ಯದ ಪ್ರತಿಷ್ಠಿತ ನೆಹರು ಮೆಮೋರಿಯಲ್‌ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕಬಡ್ಡಿ ಪಂದ್ಯಾಟ ದಿನಾಂಕ 27 ಮಾರ್ಚ್‌ 2026ರಂದು ಮುಕ್ತಾಯಗೊಂಡಿದ್ದು, ಆಳ್ವಾಸ್‌ ಕಾಲೇಜು ಮೂಡಬಿದಿರೆ ಪ್ರಥಮ ಹಾಗೂ ಎಸ್.ಡಿ.ಎಂ ಕಾಲೇಜು ಉಜಿರೆ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿತು. ದಿನಾಂಕ 25 ಮತ್ತು 26ನೇ ಮಾರ್ಚ್‌ 2026ರಂದು ಪಂದ್ಯಾಟದ ಮೊದಲೆರಡು ದಿನ ಅಂತರ ಕಾಲೇಜು ಮಂಗಳೂರು ವಲಯದ ಪಂದ್ಯಾಟಗಳು ನಡೆದು ಎಸ್.ಡಿ.ಎಂ ಕಾಲೇಜು ಉಜಿರೆ ಪ್ರಥಮ...
ಜಿಲ್ಲೆಮಂಗಳೂರುಸುದ್ದಿ

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌ -ಕಹಳೆ ನ್ಯೂಸ್

ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ (New Mangalore Port) ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ (LPG) ಇರುವ ಅಪೋಲೋ ಓಷನ್(Apollo Ocean) ಹೆಸರಿನ ಹಡಗು ಮಂಗಳೂರಿಗೆ ಆಗಮಿಸಿದ್ದು ಇಳಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ. ಕತಾರಿನ ರಾಸ್ ಲಫಾನ್‌ನಿಂದ 46 ಸಾವಿರ ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್ ಸರಕು ಹಡಗು ಗುಜರಾತಿನ ಮುದ್ರಾ ಬಂದರಿಗೆ ಮಾ.16ಕ್ಕೆ ಬಂದಿತ್ತು. ಈ ಹಡಗು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಂಡವರಕಲ್ಲು ಶ್ರೀ ಬ್ರಹ್ಮಬೈದೆರೆ ಗರೋಡಿ ಕ್ಷೇತ್ರದಲ್ಲಿ ಮಾ.26 ರಿಂದ ಏ.2 ರ ತನಕ ವಾರ್ಷಿಕ ಜಾತ್ರಾ ಮಹೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಪಾಂಡವರಕಲ್ಲು ಶ್ರೀ ಬ್ರಹ್ಮಬೈದೆರೆ ಗರೋಡಿ ಕ್ಷೇತ್ರದಲ್ಲಿ ಮಾ.26 ರಿಂದ ಏ.2 ರ ತನಕ ವಾರ್ಷಿಕ ಜಾತ್ರಾ ಮಹೋತ್ಸವವು ನಡೆಯಲಿರುವುದು. ಮಾ.26 ರಂದು ಬೆಳಿಗ್ಗೆ 10.ಕ್ಕೆ ಸಾರಿ ಹಾಕುವುದು ಅದೇ ದಿನ ರಾತ್ರಿ ದೊಂಪದಬಲಿ ನೇಮೋತ್ಸವ ನಡೆಯಲಿದೆ. ಮಾ.29 ರಂದು ರಾತ್ರಿ ಕಜೆಕಾರುಗುತ್ತಿನಿಂದ ಶ್ರೀ ರಾಜನ್ ದೈವ ಕೊಡಮಾಣಿತ್ತಾಯ ಮತ್ತು ಪಟ್ರಾಡಿ ತಾವಿನಿಂದ ಶ್ರೀ ಬ್ರಹ್ಮಬೈದೆರೆ ಭಂಡಾರ ಬಂದು ಬಲಿ ಉತ್ಸವ ನಡೆಯಲಿದೆ. ಮಾ.30 ರಂದು ಬೆಳಿಗ್ಗೆ ಧ್ವಜಾರೋಹಣ...
ಕುಂದಾಪುರಜಿಲ್ಲೆಸುದ್ದಿ

ಕಾರ್ಯಕರ್ತನಲ್ಲಿ ವೈಚಾರಿಕ ಬದ್ಧತೆ ಬೆಳೆಸುವುದು ಪಕ್ಷದ ಕಾರ್ಯವೈಖರಿ ತಿಳಿಸುವ ಪ್ರಶಿಕ್ಷಣ. ಶಾಸಕ ಎ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ : ಭಾರತೀಯ ಜನತಾ ಪಾರ್ಟಿ ಕುಂದಾಪುರದ ಕಾರ್ಯಾಲಯದಲ್ಲಿ ಪ್ರಶಿಕ್ಷಣ ಪೂರ್ವಭಾವಿಯ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಪಕ್ಷದಲ್ಲಿ ವ್ಯಕ್ತಿ ನಿರ್ಮಾಣದಿಂದ ಸಂಘಟನೆ ನಿರ್ಮಾಣ ನಡೆಸಲಾಗುತ್ತಿದೆ. ಸಂಘಟನೆಯಿಂದ ಪ್ರಶಿಕ್ಷಣದ ಮುಖ್ಯ ಗುರಿ ಕಾರ್ಯಕರ್ತನಲ್ಲಿ ವೈಚಾರಿಕ ಬದ್ಧತೆ ಬೆಳೆಸುವುದು ಪಕ್ಷದ ಕಾರ್ಯವೈಖರಿ ತಿಳಿಸುವ ನಿಟ್ಟಿನಲ್ಲಿ ಪ್ರಶಿಕ್ಷಣ ಎಂದು ಪೂರ್ವಭಾವಿ ಸಭೆಯಲ್ಲಿ ಶಾಸಕರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ-ಕಹಳೆ ನ್ಯೂಸ್

ಮಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧ ಹಿನ್ನೆಲೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಇದೀಗ ಕರಾವಳಿಯ ಪ್ಲಾಸ್ಟಿಕ್ ಉದ್ಯಮದ  ಮೇಲೆ‌ ಭಾರಿ ಹೊಡೆತ ಬಿದ್ದಿದೆ. ಕರಾವಳಿಯ ಪ್ಲಾಸ್ಟಿಕ್ ಪ್ಯಾಕ್ಟರಿಗಳು ಬಂದ್ ಆಗುವ ಭೀತಿ ಎದುರಾಗಿದೆ. ಪೆಟ್ರೋಲಿಯಂ ಬೈ ಪ್ರಾಡೆಕ್ಟ್‌ನ‌ ಕಚ್ಚಾ ವಸ್ತುವಿನಿಂದ ತಯಾರಿಸಲಾಗುವ ಪ್ಲಾಸ್ಟಿಕ್ ಉತ್ಪನ್ನಗಳ ಸುಮಾರು 50 ಕ್ಕೂ ಹೆಚ್ಚು ಫ್ಯಾಕ್ಟರಿಗಳು ಮಂಗಳೂರು  ಹಾಗೂ ಉಡುಪಿಯಲ್ಲಿವೆ . ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಉತ್ಪಾದನಾ ವೆಚ್ಚವನ್ನ ಭರಿಸಲು ಫ್ಯಾಕ್ಟರಿಗಳು ಪರದಾಡುತ್ತಿದೆ‌....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!-ಕಹಳೆ ನ್ಯೂಸ್

ಮಂಗಳೂರು ಸಮೀಪದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಾ .18 ರಂದು ನೀಡಲಾದ ದೂರಿನ ಮೇರೆಗೆ, ಆರೋಪಿಯು ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಿಳಿದುಬಂದಿದೆ. ಅಲ್ಲದೆ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದೂ ತನಿಖೆಯಲ್ಲಿ...
1 4 5 6 7 8 872
Page 6 of 872