ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟು ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಬ್ರಹ್ಮಕಲಶ ಆಮಂತ್ರಣ ಗೀತೆ ಟೀಸರ್ ಬಿಡುಗಡೆ – ಕಹಳೆ ನ್ಯೂಸ್
ಬಂಟ್ವಾಳ: ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟು ಕಳ್ಳಿಗೆ ಗ್ರಾಮ ಬಂಟ್ವಾಳ ತಾಲೂಕು ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಫೆ.6ರಂದು ಬ್ರಹ್ಮಕಲಶ ಆಮಂತ್ರಣ ಗೀತೆ ಟೀಸರ್ ಬಿಡುಗಡೆಗೊಳ್ಳಲಿದೆ. ಇಡೀ ತುಳುನಾಡಿನಾದ್ಯಂತ ಸಂಚಲನ ಸೃಷ್ಟಿಸಿದ ಕರಿಯಜ್ಜೆ ಖ್ಯಾತಿಯ ತುಳುನಾಡ ಕಲಶ ಜಿಎಸ್ ಗುರುಪುರ ರಚನೆಯಿಂದ ಇದೀಗ ಮೂಡಿ ಬರುತ್ತಿರುವಂತಹ ದೇವಂದಬೆಟ್ಟು ಬ್ರಹ್ಮಕಲಶ ಆಮಂತ್ರಣ ಗೀತೆಯೊಂದಿಗೆ ಮತ್ತೊಂದು ಭಕ್ತಿ ಪ್ರಧಾನ ಹಾಡು ಮುಂದಿನ ವಾರ ತೆರೆಕಾಣಲಿದೆ. ಖ್ಯಾತ ಗಾಯಕಿ ಕು. ಚೈತ್ರಾ ಗಾಣಿಗ...






