Monday, June 15, 2026

ಪ್ರಾದೇಶಿಕ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟು ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಬ್ರಹ್ಮಕಲಶ ಆಮಂತ್ರಣ ಗೀತೆ ಟೀಸರ್ ಬಿಡುಗಡೆ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟು ಕಳ್ಳಿಗೆ ಗ್ರಾಮ ಬಂಟ್ವಾಳ ತಾಲೂಕು ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಫೆ.6ರಂದು ಬ್ರಹ್ಮಕಲಶ ಆಮಂತ್ರಣ ಗೀತೆ ಟೀಸರ್ ಬಿಡುಗಡೆಗೊಳ್ಳಲಿದೆ. ಇಡೀ ತುಳುನಾಡಿನಾದ್ಯಂತ ಸಂಚಲನ ಸೃಷ್ಟಿಸಿದ ಕರಿಯಜ್ಜೆ ಖ್ಯಾತಿಯ ತುಳುನಾಡ ಕಲಶ ಜಿಎಸ್ ಗುರುಪುರ ರಚನೆಯಿಂದ ಇದೀಗ ಮೂಡಿ ಬರುತ್ತಿರುವಂತಹ ದೇವಂದಬೆಟ್ಟು ಬ್ರಹ್ಮಕಲಶ ಆಮಂತ್ರಣ ಗೀತೆಯೊಂದಿಗೆ ಮತ್ತೊಂದು ಭಕ್ತಿ ಪ್ರಧಾನ ಹಾಡು ಮುಂದಿನ ವಾರ ತೆರೆಕಾಣಲಿದೆ. ಖ್ಯಾತ ಗಾಯಕಿ ಕು. ಚೈತ್ರಾ ಗಾಣಿಗ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಶಾಲಾ ಬಾಲಕಿ- ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುತ್ತಿಗಾರು ಎಂಬಲ್ಲಿ ನಡೆದಿದೆ. ಗುತ್ತಿಗಾರಿನ ನ್ಯಾಯವಾದಿ ಹರೀಶ್ ಪೂಜಾರಿಕೋಡಿ ಎಂಬವರ ಪುತ್ರಿ ನಿಹಾರಿಕಾ (13 ವರ್ಷ) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ನಿಹಾರಿಕಾ ಏಳನೇ ತರಗತಿಗೆ ನವೋದಯ ಶಾಲೆಗೆ ಆಯ್ಕೆಯಾಗಿದ್ದಳು. ಕೊರೋನ ಕಾರಣದಿಂದಾಗಿ ಶಾಲೆ ಆರಂಭಗೊಳ್ಳದೆ, ಮನೆಯಲ್ಲಿಯೇ ನವೋದಯದ ಆನ್‍ಲೈನ್ ತರಗತಿ ನಡೆಯುತ್ತಿತ್ತು. ಇನ್ನು ಒಂದೆರಡು ದಿನಗಳಲ್ಲಿ ನವೋದಯ ಶಾಲೆ ಪುನರಾರಂಭಗೊಳ್ಳುವುದರಲ್ಲಿತ್ತು. ಇಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾಣಿಜ್ಯೋದ್ಯಮ ಅಭಿವೃದ್ಧಿ ಪ್ರಕೋಷ್ಟ ಹಾಗೂ ಎಂಬಿಎ ವಿಭಾಗದ ಆಶ್ರಯದಲ್ಲಿ ನಡೆದ ವಿಚಾರ ಸಂಕಿರಣ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾಣಿಜ್ಯೋದ್ಯಮ ಅಭಿವೃದ್ಧಿ ಪ್ರಕೋಷ್ಟ ಹಾಗೂ ಎಂಬಿಎ ವಿಭಾಗದ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಮಾತಾಡಿದ ಕೊಯಮುತ್ತೂರಿನ ಇಕೋಗ್ರೀನ್ ಯುನಿಟ್‍ನ ಮುಖ್ಯಸ್ಥ ಎಸ್. ಕೆ. ಬಾಬು ಅವರು ಬಾಳೆಗಿಡದ ಕಾಂಡದಿಂದ ನಾರನ್ನು ತೆಗೆದು ಅದನ್ನು ಸಂಸ್ಕರಿಸಿ ವಿವಿಧ ರೀತಿಯ ಉತ್ಪನ್ನಗಳನ್ನು ತಯಾರಿಸುವ ನೂತನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದ್ದು ಈ ಮೂಲಕ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ವೇದಿಕೆ ನಿರ್ಮಾಣವಾಗಿದೆ ಎಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ತೃತೀಯ ಐಚ್ಚಿಕ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಸಾಹಿತ್ಯ ಮಂಟಪ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಒಬ್ಬ ವ್ಯಕ್ತಿಯ ಸೃಜನಾತ್ಮಕ ಪ್ರತಿಭೆಯನ್ನು ಹೊರತೆಗೆಯಲು ಸಾಹಿತ್ಯ ಮಂಟಪ ಒಂದು ಉತ್ತಮ ವೇದಿಕೆ. ವ್ಯಕ್ತಿಯು ತನ್ನ ಅನುಭವಗಳನ್ನು, ಭಾವನೆಗಳನ್ನು ಸಾಹಿತ್ಯ ರೂಪಕ್ಕೆ ತರುವ ಪ್ರಯತ್ನ ಮಾಡಬೇಕು. ಸಾಹಿತ್ಯ ಮಂಟಪ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದೆ. ಕಾಲೇಜಿನಲ್ಲಿ ಸಿಗುವ ಸಮಯ, ಅವಕಾಶಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಇಲ್ಲಿನ ವಿವೇಕಾನಂದ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಉಪನ್ಯಾಸಕಿ ರೇಖಾ ಪಿ. ಎಂ. ಹೇಳಿದರು. ಅವರು ಕಾಲೇಜಿನ ತೃತೀಯ ಐಚ್ಚಿಕ ಕನ್ನಡ...
ದಕ್ಷಿಣ ಕನ್ನಡಸುದ್ದಿಸುಳ್ಯ

ನದಿ ನೀರಿನಲ್ಲಿ ಮುಳುಗಿ ಆರು ವರ್ಷದ ಬಾಲಕ ಸಾವು – ಕಹಳೆ ನ್ಯೂಸ್

ಸುಳ್ಯ: ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಸುಳ್ಯ ತಾಲೂಕು ಪೈಚಾರು ದೊಡ್ಡೇರಿ ಎಂಬಲ್ಲಿ ನಡೆದಿದೆ. ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದ, ಆಂಧ್ರ ಮೂಲದ ಕುಟುಂಬಸ್ಥರು ಟೆಂಟ್ ನಿರ್ಮಿಸಿ ವಾಸಿಸುತ್ತಿದ್ದರು. ನದಿಗೆ ಸ್ನಾನ ಮಾಡಲೆಂದು ಕುಟುಂಬದ ಹಿರಿಯರು ಮತ್ತು ಮಕ್ಕಳು ಹೋಗಿದ್ದು, ಸ್ನಾನ ಮಾಡುತ್ತಿದ್ದ ಸಂದರ್ಭ ಆರು ವರ್ಷದ ಮಗು ಕುಪ್ಪರಾ ಕಾಣೆಯಾಗಿದ್ದು, ಆತ ನೀರಿನಲ್ಲಿ ಮುಳುಗಿರುವ ಅನುಮಾನದಿಂದ ಹುಡುಕಾಡಿದಾಗ ಪಕ್ಕದಲ್ಲಿ ಆತನ ಮೃತದೇಹ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ದುರ್ಗಾ ಭಜನಾ ಮಂದಿರ ಕುಂಜೂರು, ಪಂಜ, ಆರ್ಯಾಪು-ಪುತ್ತೂರು ವತಿಯಿಂದ ಮನೆ ಮನೆ ಭಜನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಶ್ರೀ ದುರ್ಗಾ ಭಜನಾ ಮಂದಿರ ಕುಂಜೂರು ಪಂಜ ಆರ್ಯಾಪು ಪುತ್ತೂರು ವತಿಯಿಂದ ಮನೆ ಮನೆ ಭಜನಾ ಕಾರ್ಯಕ್ರಮದ 19ನೇ ವರ್ಷದ ಭಜನಾ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ವರ್ಷಂಪ್ರತಿ ಶ್ರೀ ದುರ್ಗಾ ಭಜನಾ ಮಂಡಳಿಯ ಆಶ್ರಯದಲ್ಲಿ ವಿಜೃಂಭಣೆಯಿಂದ ನಡೆಯಿತು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫೆ. 12 ಮತ್ತು 13 ರಂದು ನಡೆಯಲಿರುವ ನರಿಮೊಗರು ಶ್ರೀ ಬ್ರಹ್ಮಬೈದೆರ್ಕಳ ಗರಡಿ ಕೈಪಂಗಳ ಬಾರಿಕೆ ಕ್ಷೇತ್ರದ ವಿಜ್ಞಾಪನ ಪತ್ರ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಫೆ. 12 ರಿಂದ 13 ರವರೆಗೆ ಶ್ರೀ ಬ್ರಹ್ಮಬೈದೆರ್ಕಳ ಗರಡಿ ಕೈಪಂಗಳ ಬಾರಿಕೆ ನರಿಮೊಗರಿನಲ್ಲಿ ವಾರ್ಷಿಕ ನೇಮೋತ್ಸವ ಹಾಗೂ ಶ್ರೀ ಕ್ಷೇತ್ರದ ದೈವಗಳಿಗೆ ಹಾಗು ಶ್ರೀ ಕೋಟಿ ಚೆನ್ನಯ ಬ್ರಹ್ಮಬೈದೇರುಗಳಿಗೆ ಮುಂದಿನ ನೇಮೋತ್ಸವದ ಮೊದಲು ದೈವಗಳಿಗೆ ಭಕ್ತಾದಿಗಳೆಲ್ಲರೂ ಸಮರ್ಪಿಸುವುದೆಂದು ತೀರ್ಮಾನಿಸಿದ್ದ, ಬೆಳ್ಳಿಯ ತಲೆಮಣಿ, ತಲೆಪಟ್ಟಿ, ಅಪ್ಪರಕೊಂಬು, ಮುಂತಾದ ದೈವ ಆಭರಣಗಳ ಅಂದಾಜು 15 ಲಕ್ಷ ರೂಪಾಯಿ ವೆಚ್ಚವಿರುವ ಕ್ಷೇತ್ರದ ವಿಜ್ಞಾಪನ ಪತ್ರವನ್ನು ಬಿಡುಗಡೆ ಮಾಡಲಾಯಿತು. ಕೋಟಿ ಚೆನ್ನಯ ಗೆಳೆಯರ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊರೊನಾ ಹಿನ್ನಲೆ ನಿಲ್ಲಿಸಲಾಗಿದ್ದ ಸೇವೆಗಳು ಪುನರರಾಂಭ- ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕೊರೊನಾ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಲ್ಲಿಸಲಾಗಿದ್ದ ಸೇವೆಗಳಿಗೆ ಇದೀಗ ಮತ್ತೆ ಅನುಮತಿಯನ್ನು ನೀಡಲಾಗಿದೆ. ಕೊರೊನಾ  ಹಿನ್ನಲೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದುಗೊಳಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ 19ರ ನಿಯಮಗಳನ್ನು ಪಾಲಿಸಿಕೊಂಡು ಮೊದಲಿನಂತೆ ಭಕ್ತರು ಸೇವೆಗಳನ್ನು ನೆರವೇರಿಸಲು ಅವಕಾಶ ಮಾಡಲಾಗಿದೆ...
1 663 664 665 666 667 887
Page 665 of 887