ವಿವೇಕಾನಂದ ಕಾಲೇಜಿನಲ್ಲಿ ತೃತೀಯ ಐಚ್ಚಿಕ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಸಾಹಿತ್ಯ ಮಂಟಪ ಕಾರ್ಯಕ್ರಮ – ಕಹಳೆ ನ್ಯೂಸ್
ಪುತ್ತೂರು : ಒಬ್ಬ ವ್ಯಕ್ತಿಯ ಸೃಜನಾತ್ಮಕ ಪ್ರತಿಭೆಯನ್ನು ಹೊರತೆಗೆಯಲು ಸಾಹಿತ್ಯ ಮಂಟಪ ಒಂದು ಉತ್ತಮ ವೇದಿಕೆ. ವ್ಯಕ್ತಿಯು ತನ್ನ ಅನುಭವಗಳನ್ನು, ಭಾವನೆಗಳನ್ನು ಸಾಹಿತ್ಯ ರೂಪಕ್ಕೆ ತರುವ ಪ್ರಯತ್ನ ಮಾಡಬೇಕು. ಸಾಹಿತ್ಯ ಮಂಟಪ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದೆ. ಕಾಲೇಜಿನಲ್ಲಿ ಸಿಗುವ ಸಮಯ, ಅವಕಾಶಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಇಲ್ಲಿನ ವಿವೇಕಾನಂದ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಉಪನ್ಯಾಸಕಿ ರೇಖಾ ಪಿ. ಎಂ. ಹೇಳಿದರು. ಅವರು ಕಾಲೇಜಿನ ತೃತೀಯ ಐಚ್ಚಿಕ ಕನ್ನಡ...






