Monday, June 15, 2026

ಪ್ರಾದೇಶಿಕ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಕೊರಗಜ್ಜನಿಗೆ ಅವಮಾನ ಪ್ರಕರಣ: ಇಬ್ಬರು ಬಂಧಿತ ಆರೋಪಿಗಳಿಗೆ ಜಾಮೀನು- ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕಿನ ಸಾಲೆತ್ತೂರು ಬಳಿ ಮದುವೆ ಮನೆಯಲ್ಲಿ ಕೊರಗಜ್ಜನ ವೇಷವನ್ನು ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಂಗಲ್ಪಾಡಿ ನಿವಾಸಿ, ಪುತ್ತೂರು ಫಾತಿಮಾ ಅಂಗಡಿಯ ಮಾಲಕ ಅಹ್ಮದ್ ಮುಜಿತಾಬು (28) ಮತ್ತು ಬಾಯಾರು ಪದವು ನಿವಾಸಿ ಮೊಯ್ದೀನ್ ಮುನಿಶ್ (19) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ಅಂದೇ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳ ಪರ ನ್ಯಾಯವಾದಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಟಿಪ್ಪರ್ ಲಾರಿ – ಬೈಕ್ ನಡುವೆ ಬೀಕರ ರಸ್ತೆ ಅಪಘಾತ: ಇಬ್ಬರು ಯುವಕರು ದಾರುಣ ಸಾವು- ಕಹಳೆ ನ್ಯೂಸ್

ಬೆಳ್ತಂಗಡಿ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ. ಮೃತ ಯುವಕರನ್ನು ನಾವೂರು ನಿವಾಸಿಗಳಾದ ಮಿಸ್ಪಾಯಿಲ್ (20) ಹಾಗೂ ಆಸ್ಪಾನ್ (19) ಎಂದು ಗುರುತಿಸಲಾಗಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಹಾಗೂ ಸಹಸವಾರ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಉದ್ಯಮಿಗೆ ಕರೆ ಮಾಡಿ 3 ಲಕ್ಷ ಬೇಡಿಕೆ ಇಟ್ಟ ಖದೀಮರು – ಖಾಕಿ ಪಡೆಯ ಕಾರ್ಯಚರಣೆಯಿಂದ ಆರೋಪಿಗಳು ಅಂದರ್ – ಕಹಳೆ ನ್ಯೂಸ್

ಉದ್ಯಮಿಯೊಬ್ಬರಿಗೆ ಕರೆ ಮಾಡಿ 3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು, ಬೆದರಿಕೆ ಹಾಕಿದ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯು ವಿವಿದ ಮೊಬೈಲ್‍ಗಳಿಂದ ಉದ್ಯಮಿಗೆ ಕರೆ ಮಾಡಿ ‘ಯಾರೋ ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾನೆ, ಅವನನ್ನು ಬಿಡಿಸಲು ಹಣ ಬೇಕು, ಅವನನ್ನು ಬಿಡಿಸಲು 3 ಲಕ್ಷವಾಗಲಿದೆ. ನೀನು 2 ದಿನದ ಒಳಗೆ 1,50,000/- ಹಣ ರೆಡಿ ಮಾಡಬೇಕು. ಇಲ್ಲದಿದ್ದರೆ ನಿನ್ನನ್ನು ಮತ್ತು ನಿನ್ನ ಮಕ್ಕಳನ್ನು ಜೀವ ಸಹಿತ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಹಿಳೆಯ ಮೇಲೆ ಹಲ್ಲೆ ಪ್ರಕರಣ : ಮುಕೈಯ ಅಬ್ದುಲ್ ಮುನಾಫ್ ವಿರುದ್ಧ ಗಡಿಪಾರಿಗೆ ದೂರು- ಕಹಳೆ ನ್ಯೂಸ್

ಪುತ್ತೂರು : ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮುಕ್ವೆ ನಿವಾಸಿ ಅಬ್ದುಲ್ ಮುನಾಫ್ ಎಂಬಾತನ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಪುತ್ತೂರು : ಕಸಬಾ ಆಶ್ರಯ ಕಾಲನಿಯ ಶ್ರೀಮತಿ ವಿನಯ ಎಂಬವರು ಚಂದ್ರಶೇಖರ ಎಂಬವರ ಜೊತೆ ಶುಂಠಿ ಹಾಗೂ ಬಾಳೆ ಕೃಷಿ ಮಾಡುವ ಸಲುವಾಗಿ ಲೀಸ್‌ ಗೆ ಪಡೆದುಕೊಂಡ, ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಆನೆಮಜಲು ಎಂಬಲ್ಲಿನ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಿವಾಜಿ ಬಳಗ ರಿ. ಶ್ರೀ ರಾಮನಗರ ಮಧ್ವ ಸಾರಥ್ಯದಲ್ಲಿ ಬೊಳ್ಳಿಮಾರ‍್ದ ಉಳ್ಳಾಯೆ ತುಳು ಭಕ್ತಿಗೀತೆ ಬಿಡುಗಡೆ- ಕಹಳೆ ನ್ಯೂಸ್

ಶ್ರೀ ಆದಿಶಕ್ತಿ ಬೊಳ್ಳಿಮಾರು ಶ್ರೀ ಕೊರಗಜ್ಜ ಕ್ಷೇತ್ರ ಬೊಳ್ಳಿಮಾರಿನಲ್ಲಿ ಇಂದು ಕೊರಗಜ್ಜ ದೈವದ ತುಳು ಭಕ್ತಿಗೀತೆ ಬೊಳ್ಳಿಮರ‍್ದ ಉಳ್ಳಾಯೆ ಬಿಡುಗಡೆಗೊಂಡಿದೆ. ಶಿವಾಜಿ ಬಳಗ ರಿ. ಶ್ರೀ ರಾಮನಗರ ಮಧ್ವ ಇವರ ಸಾರಥ್ಯದಲ್ಲಿ ಮೂಡಿಬಂದ ಈ ಭಕ್ತಿಗೀತೆಯನ್ನು ಬೊಳ್ಳಿಮಾರು ಕ್ಷೇತ್ರದ ಧರ್ಮದರ್ಶಿ ವಿಜಯ್ ಸಾಲ್ಯಾನ್ ಅವರು ಬಿಡುಗಡೆಗೊಳಿಸಿದ್ದಾರೆ. ಕಿಶೋರ್ ಕುಮಾರ್ ಪಂಜಕುಡೆಲ್ ಕರಾಯ ಅವರ ನಿರ್ಮಾಣದಲ್ಲಿ, ಧನುಷ್ ಮದ್ವ ಇವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಭಕ್ತಿಗೀತೆಗೆ ಕಲಾವತಿ ದಯಾನಂದ್ ಉಡುಪಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಹೆತ್ತ ತಾಯಿಯ ಮೇಲೆ ಅತ್ಯಾಚಾರ ಎಸಗಿದ ಮಗ ಅರೆಸ್ಟ್- ಕಹಳೆ ನ್ಯೂಸ್

ಪುತ್ತೂರು : ಹೆತ್ತ ತಾಯಿಯ ಮೇಲೆ ಮಗನೇ ಅತ್ಯಾಚಾರ ಎಸಗಿರುವ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಜಯರಾಮ ರೈ ಎಂದು ಗುರುತಿಸಲಾಗಿದ್ದು, ಈತ ತನ್ನ ತಾಯಿ ಜೊತೆ ಒಂದೇ ಮನೆಯಲ್ಲಿ ವಾಸಿಸುತ್ತಿದ್ದ, ಆರೋಪಿ ಜನವರಿ 12ರಂದು 3 ಗಂಟೆ ನಸುಕಿನ ವೇಳೆ ತಾಯಿ ಮಲಗಿದ್ದ ಕೋಣೆಗೆ ತೆರಳಿ ಅತ್ಯಾಚಾರ ಎಸಗಿದ್ದಾನೆ. ಈ ಸಂದರ್ಭ ತಾಯಿ ಕಿರುಚಿ, ತೀವ್ರ ವಿರೋಧ ವ್ಯಕ್ತಪಡಿಸಿದ್ದಾಳೆ. ಆರೋಪಿಯು ತಾಯಿಯ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಗುರುವಾಯನಕೆರೆ ಧಾರ್ಮಿಕ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ –ಕಹಳೆ ನ್ಯೂಸ್

ಮೋಗ್ರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೋಗ್ರು ಒಕ್ಕೂಟ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ಘಟಕದ ವತಿಯಿಂದ ಮೂವರು ದೈವಗಳ ದೇವಸ್ಥಾನ ಮುಗೇರಡ್ಕ ಮೋಗ್ರು ಇಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಹಾಗೂ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನವನ್ನು ನಡೆಸಲಾಯಿತು. ದೈವಸ್ಥಾನದ ಸುತ್ತಲ ಆವರಣ ಹಾಗೂ ಒಳಾಂಗಣವನ್ನು ಸ್ವಚ್ಛಗೊಳಿಸಲಾಯಿತು. ಶ್ರಮದಾನದ ಸಂದರ್ಭದಲ್ಲಿ ಬೆಳಗ್ಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ದೈವಸ್ಥಾನದ ವತಿಯಿಂದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಮಕರ ಸಂಕ್ರಾ0ತಿ ಹಬ್ಬದ ಆಚರಣೆಯ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ನರೇಂದ್ರ ಪ.ಪೂ.ಕಾಲೇಜಿನಲ್ಲಿ ಮಕರ ಸಂಕ್ರಾ0ತಿ ಹಬ್ಬದ ಆಚರಣೆಯ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಾದ ಶ್ರೀಮತಿ ಪುಷ್ಪಲತಾ ಅವರು ವಹಿಸಿದ್ರು. “ಮಕರ ಸಂಕ್ರಾ0ತಿಯ0ದು ವಿಶೇಷ ಪೂಜಾ ಕೈಂಕರ್ಯಗಳ ಮೂಲಕ ಆರಾಧಿಸುವ ವ್ರತವಾಗಿದ್ದು, ಇದು ದೇಹ,ಮನಸ್ಸು ಮತ್ತು ಆತ್ಮಕ್ಕೆ ಶಕ್ತಿಯನ್ನು ನೀಡುತ್ತದೆ. ಹಿಂದೂ ಪುರಾಣಗಳ ಪ್ರಕಾರ ಈ ಹಬ್ಬವು ಸೂರ್ಯ ದೇವನ ಆರಾಧನೆಯ ದಿನವಾಗಿದೆ. ಸೂರ್ಯ ನಮಗೆ...
1 668 669 670 671 672 887
Page 670 of 887