Wednesday, June 10, 2026

ಪ್ರಾದೇಶಿಕ

ಮೂಡಬಿದಿರೆ

ಎಕ್ಸಲೆಂಟ್ ಮೂಡುಬಿದಿರೆಯ ಸಿಇಟಿ ಸಾಧಕನಿಗೆ ಸನ್ಮಾನ- ಕಹಳೆನ್ಯೂಸ್

ಮೂಡುಬಿದಿರೆ - ರಾಜ್ಯದಾದ್ಯಂತ ವೃತ್ತಿಪರ ಕೋರ್ಸುಗಳಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ) ಯಲ್ಲಿ ರಾಜ್ಯಕ್ಕೆ 7 ಮತ್ತು 8ನೇ ರ್ಯಾಂಕ್ ಪಡೆದ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್.ಜಿ.ಭಟ್ ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾತ್ವಿಕ್.ಜಿ.ಭಟ್ ನಿರಂತರ ಪರಿಶ್ರಮ, ಶ್ರದ್ಧೆ, ಗುಣಮಟ್ಟದ ಬೋಧಕ ವೃಂದ, ಶಿಸ್ತು ಬದ್ಧ ವ್ಯವಸ್ಥೆ, ಕಲಿಕೆಗೆ ಪೂರಕವಾದ ಪರಿಸರ ಹಾಗೂ...
ಬಂಟ್ವಾಳ

ಬಂಟ್ವಾಳ: ಅನುಮಾನಾಸ್ಪದವಾದ ರೀತಿಯಲ್ಲಿ ಹರೀಶ್ ಅವರ ಸಾವು..!ಸೂಕ್ತ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ಆಗ್ರಹ-ಕಹಳೆ ನ್ಯೂಸ್

ಬಂಟ್ವಾಳ : ಸಜೀಪ ಮೂಡ ಬೆಂಕೈಯ ಎಂಬಲ್ಲಿನ ಪದವಿಪೂರ್ವ ಕಾಲೇಜಿನ ಹಿಂಬದಿಯಲ್ಲಿ ಮನೆ ವಾಸಿಸುತ್ತಿರುವ ಹರೀಶ ( 42 ) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ . ಸಾವಿನ ಶಂಕೆಯನ್ನು ವ್ಯಕ್ತಪಡಿಸಿ ಪೊಲೀಸರು ಪ್ರಕರಣವನ್ನು ಮುಚ್ಚುತ್ತಿದ್ದಾರೆ ಮೇಲ್ನೋಟಕ್ಕೆ ಮೃತದೇಹದಲ್ಲಿ ಗಾಯದ ಗುರುತುಗಳಿದ್ದು ಇದು ಹತ್ಯೆ ಎಂದು ಕಾಣುತ್ತಿದೆ ಆದರೂ ಇದನ್ನು ಮುಚ್ಚಿಹಾಕಲು ಕಾಣದ ಕೈಗಳು ಯತ್ನಿಸುತ್ತಿದ್ದು ಸಾವಿನ ಸಂಪೂರ್ಣ ತನಿಖೆ ಆಗಬೇಕೆಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ಆಗ್ರಹಿಸುತ್ತದೆ....
ಬಂಟ್ವಾಳ

ಸಜೀಪ ಮೂಡದಲ್ಲಿ ಅಸೌಖ್ಯದಿಂದ ಬಳಲುತ್ತಿದ್ದ ವ್ಯಕ್ತಿ ಸಾವು – ಕಹಳೆ ನ್ಯೂಸ್

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಇದು ಸಂಶಯಾಸ್ಪದ ಸಾವು ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪ ಮೂಡ ಗ್ರಾಮದ ಬೇಂಕ್ಯ ನಿವಾಸಿ ಅವಿವಾಹಿತ ಹರೀಶ್ ಪೂಜಾರಿ (೪೨) ಮೃತಪಟ್ಟ ವ್ಯಕ್ತಿ ಎನ್ನಲಾಗಿದೆ. ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹರೀಶ್ ಪೂಜಾರಿ ಅವರು ಮನೆಯಲ್ಲಿ ಮಲಗಿದ್ದರು. ಆದರೆ ಇವರ ಅರೋಗ್ಯ ತೀರಾ...
ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಕುರಿತು ಕಾರ್ಯಾಗಾರ – ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಐಕ್ಯೂಎಸಿ ಮತ್ತು ಎನ್‍ಇಪಿ ಟಾಸ್ಕ್ ಫೋರ್ಸ್ ಆಶ್ರಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತು ಸಪ್ಟೆಂಬರ್ 21 ರಂದು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾತನಾಡಿದ, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನೋರ್ಬರ್ಟ್ ಲೋಬೊ ವಿದ್ಯಾರ್ಥಿಗಳ ಸಮಗ್ರ ಅಭ್ಯುದಯವೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಆಶಯವಾಗಿದೆ. ಈ ನೀತಿಯು ಭವಿಷ್ಯದಲ್ಲಿ ಉದ್ಯೋಗವನ್ನು...
ಪುತ್ತೂರು

ಪುತ್ತೂರಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ನೂತನ ಮಳಿಗೆಗೆ ಭೇಟಿ ನೀಡಿದ ಎಡನೀರು ಶ್ರೀಗಳು – ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ ನ ನೂತನ ಮಳಿಗೆಗೆ ಇಂದು ಎಡನೀರು ಮಠದ ಶ್ರೀಗಳಾದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಶ್ರೀಪಾಂಗಳವರು ಭೇಟಿ ನೀಡಿ ನೂತನ ಮಳಿಗೆಯ ಯಶಸ್ಸಿಗೆ ಆಶೀರ್ವದಿಸಿದರು.   ನೂತನ ಮಳಿಗೆಯ ಉದ್ಘಾಟನೆಯನ್ನು ಎಪ್ರಿಲ್ ತಿಂಗಳಲ್ಲಿ ನಿಗದಿ ಪಡಿಸಲಾಗಿತ್ತು. ಆದರೆ ಕೋವಿಡ್ -19ರ ಕಾರಣದಿಂದಾಗಿ ಸರ್ಕಾರದ ಮಾರ್ಗಸೂಚಿಯಂತೆ ನೂತನ ಮಳಿಗೆಯ ಉದ್ಘಾಟನೆಯನ್ನು ಸಾಂಕೇತಿಕವಾಗಿ ನೆರವೇರಿಸಲಾಗಿತ್ತು. ಬಳಿಕ ಶ್ರೀಗಳು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿದ್ದರಿಂದ ಇದೀಗ ಕೋವಿಡ್ -19 ಮಾರ್ಗಸೂಚಿ ತೆರವಿನ...
ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ಹಾಗೂ ಬಿಬಿಎ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಸುಬ್ರಹ್ಮಣ್ಯ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ಆಯೋಜಿಸಲಾಗಿದ್ದ, 2021-22 ನೇ ಸಾಲಿನ ಪ್ರಥಮ ವರ್ಷದ ಬಿಕಾಂ ಹಾಗೂ ಬಿಬಿಎ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನ ಪ್ರಾಚಾರ್ಯರಾದ ಆಡಿ ಗೋವಿಂದ ಎನ್. ಎಸ್. ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಉಪನ್ಯಾಸಕರು ಹಾಗೂ ಕಚೇರಿ ಸಿಬ್ಬಂದಿಗಳು ವಿವಿಧ ಚಟುವಟಿಕೆಗಳ ಕುರಿತು ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾಕ್ಟರ್ ಪ್ರಸಾದ್ ಎನ್...
ಪುತ್ತೂರು

ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲ್ಲಿ ಪ್ರಬೋಧನ ಶಿಬಿರ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಪ್ರಬೋಧನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ, ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪಿ. ಜೆ. ಜಗನ್ನಿವಾಸ ರಾವ್ ಸಂಸ್ಕಾರ ಭಾರತೀಯ ವ್ಯವಸ್ಥೆಯ ತಳಹದಿ. ಆದ್ದರಿಂದ ಸಂಸ್ಕಾರ ರಹಿತವಾದ ಶಿಕ್ಷಣಕ್ಕೆ ಅರ್ಥವಿಲ್ಲ. ಹಿಂದೂ ಸಂಸ್ಕøತಿ ಸಹಿತವಾದ ಶಿಕ್ಷಣವನ್ನು ಮಕ್ಕಳಿಗೆ ಕೊಟ್ಟಾಗ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ. ಈ ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು...
ದಕ್ಷಿಣ ಕನ್ನಡಪುತ್ತೂರು

ಪುತ್ತೂರಿನ ಮಾರ್ಕೆಟ್ ರಸ್ತೆಯ ಯೂನಿಯನ್ ಕ್ಲಬ್ ಕಟ್ಟಡದಲ್ಲಿ ನಾಳೆ ಸೆಪ್ಟೆಂಬರ್ 22ರಂದು ನೂತನ ‘ಭಗವತಿ ಟ್ರೇಡರ್ಸ್’ ಶುಭಾರಂಭ- ಕಹಳೆ ನ್ಯೂಸ್

ಪುತ್ತೂರು: ನೂತನವಾಗಿ ‘ಭಗವತಿ ಟ್ರೇಡರ್ಸ್‘ ಸೆ.22 ರಂದು ಪುತ್ತೂರಿನ ಮಾರ್ಕೆಟ್ ರಸ್ತೆಯ ಯೂನಿಯನ್ ಕ್ಲಬ್ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಎಡನೀರು ಶ್ರೀ ಸಚ್ಚಿದಾನಂದ ಸ್ವಾಮೀಜಿ ಯವರು ನೆರವೇರಿಸಲಿದ್ದಾರೆ. ದಿನಸಿ, ಗಿಡಮೂಲಿಕೆ, ಸಾವಯವ ಆಹಾರ ಪದಾರ್ಥ, ಸಿರಿಧಾನ್ಯ, ಪೂಜಾ ಸಾಮಾಗ್ರಿ, ಜೋಳದ ರೊಟ್ಟಿ ಹಾಗೂ ಉತ್ತರ ಕರ್ನಾಟಕ ಶೈಲಿಯ ದಿನಸಿ ಪದಾರ್ಥಗಳು ಲಭ್ಯವಿದೆ. ಹಾಗೆಯೇ ಹೋಂ ಡೆಲಿವರಿ ಸೌಲಭ್ಯ ಕೂಡ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
1 722 723 724 725 726 885
Page 724 of 885