ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸನ್ಮಾನ-ಕಹಳೆ ನ್ಯೂಸ್
ಪುತ್ತೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಆಯೋಜಿಸುವ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 852 ನೇ ರ್ಯಾಂಕ್ ಗಳಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರೀತಂ ಜಿ ಮತ್ತು ಸಿಎ ಫೌಂಡೇಶನ್ ಪರೀಕ್ಷೆಯನ್ನು ತೇರ್ಗಡೆಯಾಗುವುದರ ಮೂಲಕ ವಿಶೇಷ ಸಾಧನೆಗೈದ ಶಿಲ್ಪ ಎಂ.ಕೆ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದಿಸಿ, ಪುಸ್ತಕ ಮತ್ತು ಸ್ಮರಣಿಕೆ ನೀಡಿ ಸನ್ಮಾನಿಸಿಲಾಯಿತು. ಆರ್ಯಾಪು ಗ್ರಾಮದ ರಾಮ ನಾಯ್ಕ ಮತ್ತು ಗೀತಾ ದಂಪತಿಗಳ ಪುತ್ರನಾದ ಪ್ರೀತಂ ಜಿ ಮತ್ತು...







