ನೆಲ್ಲಿಕಟ್ಟೆ ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ಪ್ರಥಮ ಪಿಯು ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಗಣಹೋಮ ಕಾರ್ಯಕ್ರಮ – ಕಹಳೆ ನ್ಯೂಸ್
ಪುತ್ತೂರು: ಪ್ರಥಮ ಪಿಯು ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪುರೋಹಿತ ವೇ.ಮೂ.ಶ್ರೀಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ಗಣಹೋಮ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯಂತ ಮುಖ್ಯವಾದದ್ದು. ಅದಿಲ್ಲದೆ ಯಾವ ಕೆಲಸ ಮಾಡಿದರೂ ಪ್ರತಿಫಲ ದೊರಕುವುದಕ್ಕೆ ಕಷ್ಟಸಾಧ್ಯ ಎಂದು ಹೇಳಿದರು. ಭಗವಂತನ ಆರಾಧನೆಯ ಸಂದರ್ಭದಲ್ಲಿ ನಾವು ಯಾವ ದೇವರನ್ನು ಉದ್ದೇಶಿಸಿ ಪೂಜಾ-ಕೈಂಕರ್ಯ ಮಾಡುತ್ತೇವೆಯೋ ಆ ದೇವರನ್ನು...







