Thursday, May 14, 2026

ಪ್ರಾದೇಶಿಕ

ಬಂಟ್ವಾಳ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಕ್ಯಾಂಟೀನ್‍ ನಲ್ಲಿ ಪ್ರಥಮವಾಗಿ ತುಳು ಲಿಪಿಯ ನಾಮಫಲಕ ಅನಾವರಣ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಮೂಡಬಿದಿರೆ ರಸ್ತೆಯ ಎಸ್.ವಿ.ಎಸ್.ಕಾಲೇಜು ಸಮೀಪದಲ್ಲಿರುವ ಶ್ರೀ ದುರ್ಗಾ ಕ್ಯಾಂಟೀನ್‍ ಗೆ ತುಳುನಾಡ ಯುವ ಸೇನೆ ವತಿಯಿಂದ ಪ್ರಥಮವಾಗಿ ತುಳು ಲಿಪಿಯಲ್ಲಿ ಬರೆದ ನಾಮಫಲಕವನ್ನು ಅಳವಡಿಸಿಲಾಗಿದೆ. ಜೈ ತುಳುನಾಡು ಇದರ ಸದಸ್ಯೆ ಪೂರ್ಣಿಮಾ ಅವರು ಇಂದು ನಾಮಫಲಕವನ್ನು ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತುಳುನಾಡ ಯುವ ಸೇನೆಯ ಉಪಾಧ್ಯಕ್ಷ ಪ್ರತೀಕ್ ತುಲುವೆ, ಸಂಚಾಲಕ ಮಹೇಶ್, ಕಾರ್ಯದರ್ಶಿ ಚಿಂತನ್, ಸಹಕಾರ್ಯದರ್ಶಿ ಲಿಖಿತ್ ರಾಜ್ ಸೆರ್ಕಳ, ಸದಸ್ಯ ಅರುಣ್ ಕುಮಾರ್...
ಬೆಳ್ತಂಗಡಿ

ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ತಾಲೂಕಿನ ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ-ಕಹಳೆ ನ್ಯೂಸ್

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ವಾರದ ಸಭೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಸ್.ಎಸ್.ಎಲ್.ಸಿ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯದಲ್ಲೇ ಪ್ರಥಮ ಸ್ಥಾನಗಳಿಸಿದ ಸೈಂಟ್ ಮೇರೀಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ಸಂಯುಕ್ತಾ ಪ್ರಭು, ಗಿಲ್ಲಾ ಮಾಥು, ಜೀವನ್ ಆಶಿತ್ ಪಿರೇರಾ ಹಾಗೂ ರೋಟರಿ ಕುಟುಂಬದ ಸದಸ್ಯ, ಎಸ್.ಡಿ.ಎಂ. ಹೈಸ್ಕೂಲ್ ಉಜಿರೆ ವಿದ್ಯಾರ್ಥಿನಿ ಅನಘಾ ಅವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್‌ನ ಅಧ್ಯಕ್ಷರಾದ ಶರತ್ ಕೃಷ್ಣ ಪಡುವಟ್ನಾಯ,...
ಬೆಳ್ತಂಗಡಿ

ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಬೆಳಾಲು ವತಿಯಿಂದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ-ಕಹಳೆ ನ್ಯೂಸ್

ಬೆಳಾಲು: ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಬೆಳಾಲು ಇದರ ವತಿಯಿಂದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಏಳನೇ ವರ್ಷದ ವರಮಹಾಲಕ್ಷ್ಮಿ ಪೂಜೆ ನಡೆಯಿತು. ಪೂಜಾ ಕಾರ್ಯಕ್ರಮವನ್ನು ಶ್ರೀ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ ಮತ್ತು ಗಿರೀಶ್ ಬಾರಿತ್ತಾಯ ನೆರವೇರಿಸಿಕೊಟ್ಟರು. ಅದರಂತೆ ವೃತಧಾರಿಗಳು ಪೂಜೆಗೆ ಕುಳಿತು ಪೂಜೆಯನ್ನು ಯಶಸ್ವಿಗೊಳಿಸಿದರು. ಈ ಪೂಜೆಗೆ ವಿಶೇಷವಾಗಿ ರವಕೆ ಕಣದ ದಾನಿಗಳಾಗಿ ಶ್ರೀ ಅನಿಲ್ ಕುಂಬ್ಲೆ ಸಂಪೂರ್ಣ ಟೆಕ್ಸ್ ಟೈಲ್ ಉಜಿರೆ ಹಾಗೂ ಅಡುಗೆ ಸಾಮಾನು...
ಕಡಬ

ಛಾತ್ರ ಯುವ ಸಂಘರ್ಷ ಸಮಿತಿ ಕರ್ನಾಟಕ ವತಿಯಿಂದ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಕಡಬ ಯುವ ಸಾಹಿತಿ ಸಮ್ಯಕ್ತ್ ಜೈನ್ ಗೆ ತೃತೀಯ ಸ್ಥಾನ- ಕಹಳೆ ನ್ಯೂಸ್

ಕಡಬ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಛಾತ್ರ ಯುವ ಸಂಘರ್ಷ ಸಮಿತಿ ಕರ್ನಾಟಕ ವತಿಯಿಂದ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಶ್ರೀ ಧರಣೇಂದ್ರ ಇಂದ್ರ ಮತ್ತು ಮಂಜುಳಾ ದಂಪತಿಯ ಸುಪುತ್ರರಾದ ಸಮ್ಯಕ್ತ್ ಜೈನ್ ತೃತೀಯ ಸ್ಥಾನವನ್ನು ಪಡೆದು ಸಂಸ್ಥೆಯಿಂದ ಕೊಡಲ್ಪಡುವ ಪುರಸ್ಕಾರಕ್ಕೆ ಭಾಜನರಾಗಿರುವ ಸಮ್ಯಕ್ತ್ ಕವಿ , ಸಾಹಿತಿ, ಕಾರ್ಯಕ್ರಮದ ನಿರೂಪಕ, ವಾಗ್ಮಿಯಾಗಿ ,ಅಭಿನಯಕಾರರಾಗಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಸಾಫಿಯೆನ್ಶಿಯಾ ಬೆಥನಿ ಕಾಲೇಜು ನೆಲ್ಯಾಡಿಯಲ್ಲಿ...
ಪುತ್ತೂರು

ಪುತ್ತೂರಿನ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ 14ನೇ ವರ್ಷದ ಓಣಂ ಹಬ್ಬ ಆಚರಣೆ-ಕಹಳೆ ನ್ಯೂಸ್

ಪುತ್ತೂರು: ಈ ಬಾರಿ ಕೋವಿಡ್ ಸಾಂಕ್ರಾಮಿಕ ಪಿಡುಗಿನಿಂದ ಸಂಭ್ರಮಾಚರಣೆಗೆ ನಿರ್ಬಂಧವನ್ನು ಹೇರಲಾಗಿದ್ದು, ಕೊರೊನಾ ಮಾರ್ಗಸೂಚಿಗೆ ಅನುಸಾರವಾಗಿ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ 14ನೇ ವರ್ಷದ ಓಣಂ ಹಬ್ಬವನ್ನು ಬಹಳ ಸರಳವಾಗಿ ಆಚರಿಸಲಾಯಿತು. ಇನ್ನು ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಹೂವಿನ ರಂಗೋಲಿಯ ಭವ್ಯ ಅಲಂಕಾರದ ಮೂಲಕ ಓಣಂ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಕೆ.ಹೇಮಲತಾ ಗೋಕುಲ್‍ನಾಥ್, ಉಪನ್ಯಾಸಕರ ವೃಂದ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು....
ಪುತ್ತೂರು

ವಿವೇಕಾನಂದ ಸೆಂಟ್ರಲ್ ಸ್ಕೂಲ್‍ನಲ್ಲಿ ವೆಬಿನಾರ್- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ನೆಹರುನಗರ, ಪುತ್ತೂರು, ಕಮ್ಯುನಿಟಿ ರೇಡಿಯೋ ಅಸೋಸಿಯೇಶನ್, UNICEF ಮತ್ತು ರೇಡಿಯೋ ಪಾಂಚಜನ್ಯ ಇದರ ಸಹಯೋಗದಲ್ಲಿ “ಕೋವೀಡ್-19 ಸಂದರ್ಭದಲ್ಲಿ ಪೋಷಣೆಯ ಅಗತ್ಯತೆ” ಎಂಬ ವಿಷಯದ ಕುರಿತು ಡಾ. ಶಿವಾನಂದ ನಾಯಕ್, ನಿರ್ದೇಶಕರು ಶಿವಾನಿ ಡಯೋಗ್ನೋಸ್ಟಿಕ್ ಮತ್ತು ಪ್ರಾಧ್ಯಾಪಕರು ಜೀವರಸಾಯನಶಾಸ್ತ್ರ ವಿಭಾಗ (ಸುಬ್ಬಯ್ಯ ಇನ್‍ಸ್ಟಿಟ್ಯೂಷನ್ ಆಫ್ ಮೆಡಿಕಲ್ ಸೈನ್ಸ್, ಶಿವಮೊಗ್ಗ) ಇವರಿಂದ ವೆಬಿನಾರ್ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ...
ಪುತ್ತೂರು

ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕರ ಗುರುತಿನ ಚೀಟಿ ವಿತರಿಸುವ ಕಾರ್ಯಕ್ರಮ-ಕಹಳೆ ನ್ಯೂಸ್

ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ಸಮಾಜ ಸೇವಾ ಕಾರ್ಯಗಳಲ್ಲಿ ಒಂದಾಗಿರುವ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕರ ಗುರುತಿನ ಚೀಟಿಯನ್ನು ವಿತರಿಸುವ ಕಾರ್ಯಕ್ರಮ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನಡೆಯಿತು. ಕಾರ್ಮಿಕರು ಗುರುತಿನ ಚೀಟಿ ಮಾಡಿಸಲು ತಗಲುವ ಶುಲ್ಕ ವನ್ನು ಕಾರ್ಮಿಕರಿಂದ ಪಡೆಯದೆ ಟ್ರಸ್ಟ್‍ನ ಪ್ರವರ್ತಕ ರಾದ ಅಶೋಕ್ ಕುಮಾರ್ ರೈ ಪಾವತಿಸಿ ಉಚಿತವಾಗಿ ಮಾಡಿಕೊಡಲಾಗುತ್ತದೆ. ಗುರುತಿನ ಚೀಟಿಯನ್ನು ವಿತರಿಸಿ ಮಾತನಾಡಿದ ಟ್ರಸ್ಟ್...
ಪುತ್ತೂರು

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ಬಹುಮಾನ ವಿತರಣಾ ಸಮಾರಂಭ- ಕಹಳೆ ನ್ಯೂಸ್

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ, ಮಾತಾನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸದಸ್ಯ ಸುರೇಶ್ ಶೆಟ್ಟಿ, ಮಕ್ಕಳಲ್ಲಿ ದೇಶಪ್ರೇಮ, ನೈತಿಕ ಮೌಲ್ಯಗಳನ್ನು ತುಂಬುವ ಕಾರ್ಯವನ್ನು ಹೆತ್ತವರು ಇಂದು ಮಾಡಬೇಕಿದೆ. ಇದರೊಂದಿಗೆ ಓದಿನ ಹವ್ಯಾಸವೂ ಅತ್ಯಂತ ಮುಖ್ಯ. ಹಾಗಾಗಿ ಪತ್ರಿಕೆ , ಪುಸ್ತಕ, ನಿಯತಕಾಲಿಕೆಗಳನ್ನು ಓದುವೆಡೆಗೆ ಮಕ್ಕಳನ್ನು ಹುರಿದುಂಬಿಸಬೇಕು. ಆ ವಾತಾವರಣದಲ್ಲಿ ಮಕ್ಕಳು ಬೆಳೆದರೆ...
1 732 733 734 735 736 877
Page 734 of 877