Thursday, May 14, 2026

ಪ್ರಾದೇಶಿಕ

ಪುತ್ತೂರು

ಎಸ್.ಎಸ್.ಎಲ್.ಸಿ ಟಾಪರ್ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ-ಕಹಳೆ ನ್ಯೂಸ್

ಪುತ್ತೂರು; 2020-21 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿವಿಧ ಪ್ರೌಢಶಾಲೆಗಳಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಟಾಪರ್ ಗಳಾಗಿ ಹೊರಹೊಮ್ಮಿದ ವಿದ್ಯಾರ್ಥಿಗಳನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ಅಭಿನಂದಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಮನಸ್ವಿ ಭಟ್(623 ಅಂಕ), ಆಶ್ರಯ ಪಿ(621 ಅಂಕ), ಶ್ರೀರಾಮಭಟ್(615 ಅಂಕ), ಕ್ಷತಿ ಕಶ್ಯಪ್(615 ಅಂಕ), ದೈವಿಕ್ ರಾಜೇಶ್(615 ಅಂಕ), ದೀಪ್ತಿಲಕ್ಷ್ಮಿ (615 ಅಂಕ),...
ಪುತ್ತೂರು

ಮುಳಿಯ ಜ್ಯುವೆಲ್ಸ್ ನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಛದ್ಮವೇಷ ಸ್ಪರ್ಧೆ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಸುಪ್ರಸಿದ್ಧ ಮಳಿಗೆ ಮುಳಿಯ ಜುವೆಲ್ಸ್ ನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಗಸ್ಟ್ 15ರಂದು “ಸ್ವಾತಂತ್ರ್ಯ ಹೋರಾಟಗಾರರು” ಎಂಬ ವಿಷಯದ ಮೇಲೆ ಛದ್ಮವೇಷ ಸ್ಪರ್ಧೆ ನಡೆಯಲಿದ್ದು, 3 ರಿಂದ 12 ವರ್ಷದ ಪುಟಾಣಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವನ್ನು ನೀಡಲಾಗಿದೆ. ಛದ್ಮವೇಷ ಸ್ಪರ್ಧೆಯನ್ನು Zoom App ಮೂಲಕ ಲೈವ್ ಮಾಡಲಾಗುತ್ತದೆ. ಸ್ಪರ್ಧಿಗಳು ತಮ್ಮ ಮನೆಯಿಂದಲೇ ವೇಷ- ಭೂಷಣಗಳನ್ನು ಧರಿಸಿ ಮಳಿಯ ಜ್ಯುವೆಲ್ಸ್ ನ Zoom ಲಿಂಕ್ ನಲ್ಲಿ ಭಾಗವಹಿಸಬಹುದಾಗಿದೆ. Zoom...
ಬಂಟ್ವಾಳ

ಪೆರುವಾಜೆ ಗ್ರಾಮದಲ್ಲಿ ಕಾಡು ಹಂದಿಗೆ ಇಟ್ಟ ಉರುಳಿಗೆ ಬಿದ್ದ ಚಿರತೆ-ಕಹಳೆ ನ್ಯೂಸ್

ಕಾಣಿಯೂರು: ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ಕಾಣಿಯೂರು ಸಮೀಪದ ಪೆರುವಾಜೆ ಗ್ರಾಮದಲ್ಲಿ ನಡೆದಿದೆ. ಅರಣ್ಯ ಪ್ರದೇಶದ ಭಾಗದಲ್ಲಿ ಕಾಡು ಹಂದಿಗಾಗಿ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತ ಜೀವಂತವಾಗಿದೆ. ಸಧ್ಯ ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ. ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅರವಳಿಕೆ ತಜ್ಞರು ಬಂದ ಬಳಿಕ ಅರವಳಿಕೆ ಮದ್ದು ನೀಡಿ ಚಿರತೆಯನ್ನು ಸೆರೆ ಹಿಡಿಯಬೇಕಿದೆ....
ಬಂಟ್ವಾಳ

2020-21ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಗೆ ಶೇ.100 ಫಲಿತಾಂಶ- ಕಹಳೆ ನ್ಯೂಸ್

ಕಲ್ಲಡ್ಕ: 2020-21ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶ್ರೀರಾಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 290 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ಗಳಿಸಿರುತ್ತದೆ. ಶೇ.80 ಗುಣಾತ್ಮಕ ಫಲಿತಾಂಶಗಳಿಸಿ "A ಗ್ರೇಡ್" ಪಡೆದಿರುತ್ತದೆ. ರಿಧೀಶ 625 ರಲ್ಲಿ 617 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಬಂದಿದ್ದು, ಗಣಿತ ಹಾಗೂ ತೃತೀಯ ಭಾಷೆ ಕನ್ನಡ ವಿಷಯದಲ್ಲಿ 100ಅಂಕಗಳನ್ನು ಪಡೆದಿರುತ್ತಾಳೆ, ತೃಪ್ತಿ ಮತ್ತು ಭೂಮಿಕ ಇಬ್ಬರು 615 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ...
ಪುತ್ತೂರು

ದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದರು ನಳಿನ್ ಕುಮಾರ್ ಕಟೀಲ್ ಮತ್ತು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಭೇಟಿ | ಪುತ್ತೂರಿನ ಅಭಿವೃದ್ಧಿ ಕುರಿತು ಮನವಿ – ಕಹಳೆ ನ್ಯೂಸ್

ಪುತ್ತೂರು ನಗರಕ್ಕೆ ಅತ್ಯವಶ್ಯಕ ಯೋಜನೆಯಾದ ಎ.ಪಿ.ಎಂ.ಸಿ ಯನ್ನು ಸಂಪರ್ಕಿಸುವ ರಸ್ತೆಗೆ ರೈಲ್ವೆ ಕೆಳಸೇತುವೆಯನ್ನು ನಿರ್ಮಾಣ ಮಾಡುವ ಬಗ್ಗೆ ಇಂದು ದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್ ಮತ್ತು ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು'ರವರು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವು ತನ್ನ ಪಾಲಿನ ಶೇಕಡ 50%...
ಪುತ್ತೂರು

ಎಸ್‍ಎಸ್‍ಎಲ್‍ಸಿಯಲ್ಲಿ ಪೂರ್ಣಾಂಕ ಪಡೆದು, ಅಂಬಿಕಾ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ದಾಖಲಾತಿ ಪಡೆದ ಮೂವರು ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ- ಕಹಳೆ ನ್ಯೂಸ್

ಪುತ್ತೂರು : ಎಸ್‍ಎಸ್‍ಎಲ್‍ಸಿಯಲ್ಲಿ 625ಕ್ಕೆ 625 ಅಂಕ ದಾಖಲಿಸಿ ರಾಜ್ಯಕ್ಕೆ ಟಾಪರ್‍ಗಳಾಗಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಾದ ಶ್ರೀಶ ಶರ್ಮ, ಅನನ್ಯ ಹಾಗೂ ತನೀಶಾ ರೈ ತಮ್ಮ ಮುಂದಿನ ಪಿಯು ಶಿಕ್ಷಣಕ್ಕಾಗಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳಲ್ಲಿ ದಾಖಲಾತಿ ಪಡೆದುಕೊಂಡಿದ್ದು, ವಿದ್ಯಾರ್ಥಿಗಳ ಸಾಧನೆಯನ್ನ ಗುರುತಿಸಿ ಬಪ್ಪಳಿಗೆಯಲ್ಲಿ ಅವರನ್ನು ಸನ್ಮಾನಿಸಲಾಯಿತು, ಈ ಸಂದರ್ಭದಲ್ಲಿ ಮೂರೂ ಮಂದಿ ಸಾಧಕ ವಿದ್ಯಾರ್ಥಿಗಳಿಗೆ ಉಚಿತ...
ಬಂಟ್ವಾಳ

ಬಂಟ್ವಾಳ ಸೋರ್ಣಾಡು ಡೀಸೆಲ್ ಕಳವು: ಆರು ಆರೋಪಿಗಳ ಬಂಧನ- ಕಹಳೆ ನ್ಯೂಸ್

ಬಂಟ್ವಾಳ: ಸೋರ್ಣಾಡು ಸಮೀಪ ಅರಳ ಗ್ರಾಮದ ಅರ್ಬ ನಿವಾಸಿ ಐವನ್ ಪಿಂಟೊ ಎಂಬುವರ ಜಮೀನಿನಲ್ಲಿ ಹಾದು ಹೋಗಿರುವ ಮಂಗಳೂರು-ಬೆಂಗಳೂರು ನಡುವಿನ ತೈಲ ಸರಬರಾಜು ಸಂಸ್ಥೆಗೆ ಸೇರಿದ ಡೀಸೆಲ್ ಪೂರೈಸುವ ಪೈಪ್ ಲೈನ್ ಗೆ ಕನ್ನ ಕೊರೆದು ಡೀಸೆಲ್ ಕಳವು ಮಾಡುವ ದಂಧೆಗೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆ ಪೊಲೀಸರು ಆರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಇವರಿಂದ ಲಕ್ಷಾಂತರ ಮೌಲ್ಯದ ಡೀಸೆಲ್ ಕ್ಯಾನ್ ವಶಪಡಿಸಿಕೊಂಡಿದ್ದಾರೆ. ಇನ್‍ಸ್ಪೆಕ್ಟರ್ ಟಿ.ಡಿ.ನಾಗರಾಜ್ ಮತ್ತು ಎಸ್‍ಐ ಪ್ರಸನ್ನ ಎಂ....
ಬೆಳ್ತಂಗಡಿ

ನಾಪತ್ತೆಯಾದ ಎರಡು ವರ್ಷದ ಹೆಣ್ಣು ಮಗು ನದಿಯಲ್ಲಿ ಶವವಾಗಿ ಪತ್ತೆ- ಕಹಳೆ ನ್ಯೂಸ್

ವೇಣೂರು: ಸುಲ್ಕೇರಿ ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ನಾಪತ್ತೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು ಇಂದು ಶವವಾಗಿ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮದ ಸುಲ್ಕೇರಿಯ ಜಂತೀಗೋಳಿಯ ಪರಾರಿ ನಿವಾಸಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ ಎರಡು ವರ್ಷದ ಹೆಣ್ಣು ಮಗು ಧೃತ್ವಿಯೊಂದಿಗೆ ಸುಲ್ಕೇರಿಯ ತವರು ಮನೆಯಲ್ಲಿ ವಾಸವಿದ್ದರು. ನಿನ್ನೆ ಮಧ್ಯಾಹ್ನ ಸುಚಿತ್ರಾ ಅವರು ಮಗುವನ್ನು ಅಜ್ಜನೊಂದಿಗೆ ಮನೆಯಲ್ಲಿ ಬಿಟ್ಟು ತಾಯಿಯೊಂದಿಗೆ ಹುಲ್ಲು ತರಲು ಸನಿಹದ ತೋಟಕ್ಕೆ ಹೋಗಿದ್ದರು. ಹಿಂತಿರುಗಿ...
1 738 739 740 741 742 877
Page 740 of 877