Thursday, May 14, 2026

ಪ್ರಾದೇಶಿಕ

ಪುತ್ತೂರು

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಕರ ಪತ್ರ ಬಿಡುಗಡೆ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ, ಜನ್ಮ ಫೌಂಡೇಶನ್ ಟ್ರಸ್ಟ್ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ವಿಶ್ವ ಹಿಂದು ಪರಿಷತ್ ಸ್ಥಾಪನಾ ದಿನದ ಅಂಗವಾಗಿ 2 ವರ್ಷದಿಂದ 7 ವರ್ಷದ ಮಕ್ಕಳಿಗೆ ಶ್ರೀ ಕೃಷ್ಣ ಸ್ಪರ್ಧೆ ಏರ್ಪಡಿಸಲಾಗಿದ್ದು, ಇದರ ಪೂರ್ವಭಾವಿಯಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ಕರ ಪತ್ರ ಬಿಡುಗಡೆಗೊಳಿಸಲಾಯಿತು. ಕೋವಿಡ್ ಸೋಂಕು ನಿಯಂತ್ರಣದ ಸಲುವಾಗಿ ಸರಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಶ್ರೀಕೃಷ್ಣ ವೇಷ ಸ್ಪರ್ಧೆ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಬಿ.ಎಸ್ ಭಾರ್ಗವಿ ರವರಿಗೆ ಅಭಿನಂದನೆ- ಕಹಳೆ ನ್ಯೂಸ್

ಪುತ್ತೂರು; 2020-21 ಸಾಲಿನ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ 621 ಅಂಕಗಳನ್ನು ಗಳಿಸಿ ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಬಿ.ಎಸ್ ಭಾರ್ಗವಿ ಅವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿನಿ ಬಿ.ಎಸ್ ಭಾರ್ಗವಿ ಅವರಿಗೆ ಶಾಲು ಹೊದಿಸಿ ಅಭಿನಂದಿಸಿದರು. ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಬಿ.ಎಸ್  ಭಾರ್ಗವಿ ,ತಮ್ಮ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮುಂದುವರಿಸಿ...
ಬೆಳ್ತಂಗಡಿ

ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡಕ್ಕದಲ್ಲಿ ಪೋಷಕರ ಸಭೆ-ಕಹಳೆ ನ್ಯೂಸ್

ಮೈರೋಳ್ತಡಕ್ಕ: ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡಕ್ಕದಲ್ಲಿ ಪೋಷಕರ ಸಭೆ ಕೋವಿಡ್ ನಿಯಮಕ್ಕೆ ಅನುಸಾರವಾಗಿ ನಡೆಯಿತು. ಸಭೆಯಲ್ಲಿ ಮಕ್ಕಳ ಪಠ್ಯ ಮತ್ತು ಪಠ್ಯಯೇತರ ಚಟುವಟಿಕೆಯ ಕುರಿತು ಚರ್ಚೆ ಹಾಗೂ ಶಾಲೆಯಲ್ಲಿ ಶ್ರಮದಾನ ನಡೆಸುವ ಬಗ್ಗೆ ಮತ್ತು ಕೈ ತೋಟದ ಏಲಂ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಾಯ್ಯ ಆಚಾರ್ಯ, ಪಂಚಾಯತ್ ಸದಸ್ಯರಾದ ಸುಚಿತ್ರ, ಮುಖ್ಯೋಪಾಧ್ಯಾಯರಾದ ಚಂದ್ರಾವತಿ ಕಾರ್ಯಕ್ರಮಕ್ಕೆ...
ಪುತ್ತೂರು

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ಆಟಿ-ಕೂಟ ಕಾರ್ಯಕ್ರಮ; ತುಳುನಾಡಿನ ಆಚರಣೆಗಳು ಮುಂದಿನ ತಲೆಮಾರಿಗೆ ತಿಳಿಯಬೇಕು : ಸತೀಶ್ ಇರ್ದೆ

ಪುತ್ತೂರು: ತುಳುನಾಡು ಅನ್ನುವುದು ಪರಶುರಾಮ ಸೃಷ್ಟಿ ಎನ್ನುವುದು ಎಲ್ಲರಿಗೂ ತಿಳಿದಿದೆ. ಇಂತಹ ತುಳುನಾಡಿನ ಪರಂಪರೆಯಲ್ಲಿ ಆಟಿ ನಾಲ್ಕನೇ ತಿಂಗಳು. ಈ ಮಣ್ಣಿನಲ್ಲಿ ಆಟಿ ಮಾಸ, ಭೀಮನ ಅಮಾವಾಸ್ಯೆಯಂತಹ ಅನೇಕ ಆಚರಣೆಗಳು ಹುದುಗಿವೆ. ಇವುಗಳನ್ನೆಲ್ಲ ನಮ್ಮ ಮುಂದಿನ ತಲೆಮಾರಿಗೆ ತಲಪಿಸುವಂತಹ ಕಾರ್ಯ ನಮ್ಮಿಂದಾಗಬೇಕಿದೆ ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ಶಿಕ್ಷಕರಾದ ಸತೀಶ್ ಇರ್ದೆ ಹೇಳಿದರು. ಅಂಬಿಕಾ ವಿದ್ಯಾಲಯದಲ್ಲಿ ಆಯೋಜಿಸಲಾದ ಆಟಿಯ ಕೂಟ ಕಾರ್ಯಕ್ರಮದಲ್ಲಿ ಅಂಬಿಕಾ...
ಬೆಳ್ತಂಗಡಿ

ವಿದ್ಯುತ್ ವಿತರಣಾ ಕಂಪನಿ ಖಾಸಗೀಕರಣವನ್ನು ವಿರೋಧಿಸಿ ನಾಳೆ ಬೆಳ್ತಂಗಡಿ ಮೆಸ್ಕಾಂ ಕಚೇರಿಯಲ್ಲಿ ರಾಷ್ಟ್ರ ವ್ಯಾಪ್ತಿ ಮುಷ್ಕರ-ಕಹಳೆ ನ್ಯೂಸ್

ಮೆಸ್ಕಾಂ ಮತ್ತು ಇತರ ಎಸ್ಕಾಂಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಸರಕಾರ ಪುಯತ್ನ ಪಡುತ್ತಿದ್ದು ಇದರ ವಿರುದ್ಧ ಮತ್ತು 2003 ನೇ ಇಸವಿಯ ಕಾಯಿದೆಗೆ ತಿದ್ದುಪಡಿ ತರುವುದರ ವಿರುದ್ಧ ದೇಶಾದ್ಯಂತ ವಿದ್ಯುತ್ ನೌಕರರ ಮುಷ್ಕರ ನಾಳೆ ನಡೆಯಲಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಳ್ತಂಗಡಿ ಮತ್ತು ಉಜಿರೆ ಮೆಸ್ಕಾಂ ಕಚೇರಿಯಲ್ಲಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಹಾಗೂ ಅಧಿಕಾರಿಗಳ ಒಕ್ಕೂಟ ಮಂಗಳೂರು ವತಿಯಿಂದ ನಾಳೆ ಬೆಳಿಗ್ಗೆ 8.30 ರಿಂದ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆದ ಆನ್‍ಲೈನ್ ಉಪನ್ಯಾಸ ಕಾರ್ಯಕ್ರಮ : ಸಮಾಜ ಮತ್ತು ಉದ್ಯಮ ಕ್ಷೇತ್ರಗಳೆರಡರಲ್ಲೂ ಸಾಮಾಜಿಕ ಬದಲಾವಣೆ ಅತ್ಯಗತ್ಯ ; ರಂಜನ್ ಬೆಳ್ಳರ್ಪಾಡಿ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆದ ಆನ್‍ಲೈನ್ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಸಾಮಾಜಿಕ ಉದ್ಯಮಶೀಲತೆ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಮಂಗಳ ಸಂಪನ್ಮೂಲ ನಿರ್ವಹಣಾ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ರಂಜನ್ ಬೆಳ್ಳರ್ಪಾಡಿಯವರು, ಯಾವುದೇ ಸಮಾಜ ಸೇವಕನೊಬ್ಬ ಸಮಾಜದ ಸಮಸ್ಯೆಯೊಂದನ್ನು ಗುರುತಿಸಿ, ಬಳಿಕ ತನ್ನ ಉದ್ಯಮಶೀಲ ತತ್ವಗಳನ್ನು ಬಳಸಿಕೊಂಡು ವಾಣಿಜ್ಯ ಉದ್ಯಮವೊಂದನ್ನ ಹುಟ್ಟುಹಾಕಿ, ವ್ಯವಸ್ಥಿತ ರೀತಿಯಲ್ಲಿ ಅದನ್ನು ಪೋಷಿಸುತ್ತ, ಬೆಳೆಸಿಕೊಂಡು ಹೋಗಬೇಕು. ಆ ಮೂಲಕ ಸಮಾಜ ಮತ್ತು ಉದ್ಯಮ ಕ್ಷೇತ್ರಗಳೆರಡರಲ್ಲೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರಿಗೆ ಅವಹೇಳನ – ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಪ್ರಖಂಡ ಹಾಗೂ ಕೆಯ್ಯೂರು ಘಟಕದ ವತಿಯಿಂದ ಮನವಿ – ಕಹಳೆ ನ್ಯೂಸ್

ಹಿಂದೂಗಳ ಆರಾಧನೆಯ ದೈವ ದೇವರುಗಳ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿ ಕಳೆದ ೩ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅದನ್ನು ರವಾನಿಸಿ ವಿಕೃತಿ ಮೆರೆಯುತ್ತಿರುವುದು ನಡೆಯುತ್ತಿದೆ. ಇದರಿಂದಾಗಿ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಘಾಸಿ ಉಂಟಾಗಿದೆ. ಇಂತಹ ಸಂದೇಶಗಳು ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ ತರುವಂತದ್ದಾಗಿದ್ದು ಈ ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಹಾಗೂ ಇನ್ನು ಮುಂದಕ್ಕೆ, ಇಂತಹ ಅಶ್ಲೀಲ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಮರುಕಳಿಸದಂತೆ ಸಂದೇಶ...
ಪುತ್ತೂರು

ಕಣಿಯೂರಲ್ಲಿ ವಿದ್ಯುತ್ ಶಾಕ್ ಹೊಡೆದ್ದು ಒರ್ವ ವ್ಯಕ್ತಿ ಸಾವು – ಕಹಳೆ ನ್ಯೂಸ್

ಕಣಿಯೂರು : ವಿದ್ಯುತ್ ಶಾಕ್ ಹೊಡೆದ್ದು ಒರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ, ಕಣಿಯೂರು ಗ್ರಾಮದ ಪೋಯ್ಯ ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಕಣಿಯೂರು ಗ್ರಾಮದ ಪೋಯ್ಯ ಮನೆಯ ನಾಣ್ಯಪ್ಪ ಪೂಜಾರಿ ಎಂದು ಗುರುತಿಸಿಲಾಗಿದೆ. ನಿನ್ನೆ ರಾತ್ರಿ ಜೋರಾಗಿ ಸುರಿದ ಗಾಳಿ ಮಳೆಯಿಂದಾಗಿ, ವಿದ್ಯುತ್ ತಂತಿ ತುಂಡಾಗಿ ಬಿದ್ದಿತು. ಬೆಳಿಗ್ಗೆ ತೋಟದ ಕಡೆಗೆ ಹೊರಟ್ಟಿದ ವ್ಯಕ್ತಿ, ತಂತಿಯನ್ನು ನೋಡದೆ, ತಂತಿಯನ್ನು ತುಳಿದ ಕಾರಣ, ಘಟನೆ ಸಂಭವಿಸಿದೆ. ಘಟನ ಸ್ಥಳಕ್ಕೆ ಮೆಸ್ಕಾಂ ಇಲಾಖೆಯವರು...
1 739 740 741 742 743 877
Page 741 of 877