ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಆನ್ಲೈನ್ನಲ್ಲಿ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ– ಕಹಳೆ ನ್ಯೂಸ್
ಪುತ್ತೂರು: ವಿದ್ಯಾರ್ಥಿಗಳ ಜೀವನದಲ್ಲಿ ೧೨ನೇ ತರಗತಿ ಎಂಬುದು ಪ್ರಮುಖ ಘಟ್ಟ. ಮುಂದಿನ ಉದ್ಯೋಗ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಯಾವ ವಿಭಾಗವನ್ನು ಆಯ್ಕೆ ಮಾಡಬೇಕು ಎಂಬುದನ್ನು ನಿರ್ಧರಿಸಬೇಕು. ಶಿಕ್ಷಣವು ದೇಶಭಕ್ತಿಯ ಶಿಸ್ತಿನ ಮತ್ತು ಉತ್ಪಾದಕ ಮಾನವಶಕ್ತಿಯನ್ನು ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸ್ಯಾಮ್ಸಂಗ್ ಕಂಪನಿಯಲ್ಲಿ ಎಸೋಸಿಯೇಟ್ ಇಂಜಿನಿಯರ್ , ಇಂದೋರಿನ ಐಐಮ್ ನಲ್ಲಿ ಎಂಬಿಎಯಲ್ಲಿ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿ ಗೌರವ್ ಯಂ. ಕುಮಾರ್ ಹೇಳಿದರು. ...







