ಪೆರ್ಮುದೆ ಗ್ರಾ.ಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ – ಕಹಳೆ ನ್ಯೂಸ್
ಪೆರ್ಮುದೆ ಪೆರ್ಮುದೆ ಗ್ರಾಮ ಪಂಚಾಯತ್ನ ಕುತ್ತೆತ್ತೂರು ಗ್ರಾಮದ ಕುಕ್ಕುದ ಕಟ್ಟೆ ಬಳಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಗುದ್ದಲಿ ಪೂಜೆ ನೆರವೇರಿದರು. ಕೇಂದ್ರ ಸರಕಾರದ ಜಲ ಜೀವನ್ ಮಿಷನ್ ಯೋಜನೆಯ ಮೂಲಕ ಕುತ್ತೆತ್ತೂರು ಮತ್ತು ಪೆರ್ಮುದೆ ಗ್ರಾಮದ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರದಲ್ಲಿ ಪೆರ್ಮುದೆ ಗ್ರಾಮ ಪಂಚಾಯತ್ಗೆ 1.86 ಕೋಟಿ ರೂಪಾಯಿ ವೆಚ್ಚದಲ್ಲಿ...







