ವಿವೇಕಾನಂದ ಕ್ಯಾಂಪಸ್ಗೆ ಏ.8ಕ್ಕೆ ಸಿ.ಎಂ. ಭೇಟಿ; ವಿವೇಕಾನಂದ CBSE ಸಂಸ್ಥೆಯ ನೂತನ ಕಟ್ಟಡ ಲೋಕಾರ್ಪಣಾ ಕಾರ್ಯಕ್ರಮ-ಕಹಳೆ ನ್ಯೂಸ್
ಪುತ್ತೂರು : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ (CBSE) ನೂತನ ಕಟ್ಟಡವನ್ನು ಇಲ್ಲಿನ ನೆಹರೂ ನಗರದಲ್ಲಿರುವ ವಿವೇಕಾನಂದ ಕ್ಯಾಂಪಸ್ನಲ್ಲಿ ನಿರ್ಮಿಸಲಾಗಿದ್ದು, ವಿದ್ಯುಕ್ತವಾಗಿ ಲೋಕಾರ್ಪಣಾ ಕಾರ್ಯಕ್ರಮವು ಏ.8ರಂದು ಸಂಜೆ 5.30ಕ್ಕೆ ನಡೆಯಲಿದೆ. ಈ ಕಟ್ಟಡವನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ. ಕೆ. ಪ್ರಭಾಕರ...







