Recent Posts

Wednesday, May 6, 2026

ಪ್ರಾದೇಶಿಕ

ಪುತ್ತೂರು

ಮರೆಯಾದ ತರಕಾರಿ ಕೃಷಿಯ ಭೀಷ್ಮ ಧರ್ಣಪ್ಪ ಗೌಡ ಕುಂಟ್ಯಾನ- ಕಹಳೆ ನ್ಯೂಸ್

ಪುತ್ತೂರು : ತರಕಾರಿ ಕೃಷಿಯ ಭೀಷ್ಮ ಎಂದೇ ಪ್ರಸಿದ್ದರಾದ ಬನ್ನೂರು ಗ್ರಾಮದ ಕೃಷಿಕ ಧರ್ಣಪ್ಪ ಗೌಡ ಕುಂಟ್ಯಾನರವರು ಚಾರ್ವಾಕ ಗ್ರಾಮದ ಕುಂಟ್ಯಾನ ಫಾರ್ಮ್‍ನಲ್ಲಿ ಮೃತಪಟ್ಟಿದ್ದಾರೆ. ಕಳೆದ 50 ವರ್ಷಗಳಿಂದ ತರಕಾರಿ ಕೃಷಿಯಲ್ಲಿ ಪರಿಣಿತರಾಗಿದ್ದ ಧರ್ಣಪ್ಪ ಗೌಡರು ಚಾರ್ವಾಕ, ಸಂಪ್ಯ, ಮಾಡಾವುಗಳಲ್ಲಿ ಜಾಗವನ್ನು ಖರೀದಿಸಿ ತನ್ನ ಕೃಷಿ ಕ್ಷೇತ್ರದ ಸಾಧನೆಯನ್ನು ವಿಸ್ತರಿಸಿದ್ದರು. ಕೃಷಿ ಕ್ಷೇತ್ರದ ಮಹಾನ್ ಸಾಧಕರಾಗಿದ್ದ ಧರ್ಣಪ್ಪ ಗೌಡರನ್ನು ಹಲವಾರು ಪ್ರಶಸ್ತಿಗಳು ಹರಸಿ ಬಂದಿತ್ತು. ಇವರ ಸಾಧನೆಯನ್ನು ಗುರುತಿಸಿ ಹಲವು...
ಪುತ್ತೂರು

ಹೃದಯಾಘಾತದಿಂದ ವಿವೇಕಾನಂದ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸಾವು – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ 16ವರ್ಷದ ಶ್ರೇಯಾ ಪಕ್ಕಳ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳ್ಳಿಪ್ಪಾಡಿ ಗ್ರಾಮದ ಕುಂಡಾಪು ಎಂಬಲ್ಲಿ ನಡೆದಿದೆ. ಇಲ್ಲಿನ ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಯ ಎರಡನೇ ಪುತ್ರಿಯಾಗಿರುವ ಶ್ರೇಯಾ ಪಕ್ಕಳ ಹಲವು ದಿನಗಳಿಂದ ಆರೋಗ್ಯದ ಸಮಸ್ಯೆಯಿಂದಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಚೇತರಿಸಿಕೊಂಡಿದ್ದರು. ಕಳೆದ ರಾತ್ರಿ ಆಕೆಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆ ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿತು ಹೆಚ್ಚಿನ...
ಬಂಟ್ವಾಳ

ಪಂಜಿಕಲ್ಲು ಬಾಲೇಶ್ವರ ಗರಡಿ ಬಳಿ ಕೃಷಿ ವಸ್ತು ಪ್ರದರ್ಶನ ಮತ್ತು ಕೃಷಿಕರ ಜಾಗೃತಿ ಸಮಾವೇಶ-ಕಹಳೆ ನ್ಯೂಸ್

ಬಂಟ್ವಾಳ : ಉಚಿತ ಅಕ್ಕಿ ವಿತರಣೆಗೆ ಬದಲಾಗಿ ಶಾಶ್ವತ ಆಹಾರ ಭದ್ರತೆ ನೀಡುವ ಭತ್ತದ ಬೇಸಾಯಕ್ಕೆ ಯುವಜನತೆ ಸೆಳೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪ್ರಶಸ್ತಿ ವಿಜೇತ ಭತ್ತದ ತಳಿ ಸಂರಕ್ಷಕ ಬಿ.ಕೆ.ದೇವರಾವ್ ಹೇಳಿದ್ದಾರೆ. ಇಲ್ಲಿನ ಪಂಜಿಕಲ್ಲು ಬಾಲೇಶ್ವರ ಗರಡಿ ಬಳಿ ನೇತ್ರಾವತಿ ಕೃಷಿಕರ ಅಭಿವೃದ್ಧಿ ಸಂಘಗಳ ಒಕ್ಕೂಟ ಮತ್ತು ಕೈಕಂಬ ದಿಶಾ ಟ್ರಸ್ಟ್ ವತಿಯಿಂದ ಭಾನುವಾರ ಏರ್ಪಡಿಸಿದ್ದ ಕೃಷಿ ವಸ್ತು ಪ್ರದರ್ಶನ ಮತ್ತು ಕೃಷಿಕರ ಜಾಗೃತಿ ಸಮಾವೇಶ ಉದ್ಘಾಟಿಸಿ...
ಪುತ್ತೂರು

ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ ಸುನಂದರವರ ಉತ್ತರಕ್ರಿಯೆಯನ್ನು ಮಾಡಲು ನೆರವಿನ ಚೆಕ್ಕನ್ನು ನೀಡಿದ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ ಸುನಂದರವರು ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮರಣಹೊಂದಿರುತ್ತಾರೆ. ಇವರ ಉತ್ತರಕ್ರಿಯೆಯನ್ನು ಮಾಡಲು ಇವರ ಅಣ್ಣ ಗುರುವ ಎಂಬವರಿಗೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೆರವಿನ ಚೆಕ್ಕನ್ನು ನೀಡಿದರು....
ಬಂಟ್ವಾಳ

ತಾಲೂಕು ಸಮ್ಮೇಳನಾಧ್ಯಕ್ಷರ ಸಮ್ಮಿಲನ ಕಾರ್ಯಕ್ರಮ, ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ; ಡಾ.ಬಿ.ಎ.ವಿವೇಕ ರೈ-ಕಹಳೆ ನ್ಯೂಸ್

ಬಂಟ್ವಾಳ : ಕೆಲವೊಂದು ರಾಷ್ಟ್ರಗಳಲ್ಲಿ ಮಕ್ಕಳ ಸಾಹಿತ್ಯಕ್ಕೆ ಸಿಗುವಂತೆ ದೇಶದಲ್ಲಿ ಕೂಡಾ ಸಾಹಿತ್ಯಾಭಿರುಚಿ ಮತ್ತು ಓದುವ ಹವ್ಯಾಸ ಬೆಳೆಸಲು ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ. ಇಲ್ಲಿನ ಬಿ.ಸಿ.ರೋಡು ಕೈಕುಂಜೆ ನೂತನ ರಂಗ ಮಂದಿರದಲ್ಲಿ ಕಸಾಪ ವತಿಯಿಂದ ಶನಿವಾರ ಸಂಜೆ ನಡೆದ ತಾಲೂಕು ಸಮ್ಮೇಳನಾಧ್ಯಕ್ಷರ ಸಮ್ಮಿಲನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಹಿತ್ಯಕ್ಕೆ ನಿವೃತ್ತಿ ಎಂಬುವುದು ಇಲ್ಲ. ಸಾಹಿತ್ಯದಿಂದ ಮಾನಸಿಕ...
ಪುತ್ತೂರು

ಸುಳ್ಯ ತಾಲೂಕಿನ ಸತೀಶ್ ಕುಮಾರ್ ಅವರ ಚಿಕಿತ್ಸೆಗೆ ನೆರವಿನ ಚೆಕ್ಕನ್ನು ಹಸ್ತಾಂತರಿಸಿದ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಪುತ್ತೂರು : ಸುಳ್ಯ ತಾಲೂಕಿನ ಕಸಬ ಗ್ರಾಮದ ಪರಿವಾರಕಾನ ನಿವಾಸಿ ಬಾಲಕೃಷ್ಣ ರವರ ಮಗ ಸತೀಶ್ ಕುಮಾರ್ ಪಿ.ಬಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಚಿಕಿತ್ಸೆಗೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೆರವಿನ ಚೆಕ್ಕನ್ನು ಅವರ ಸಂಬಂಧಪಟ್ಟ ವರಿಗೆ ಹಸ್ತಾಂತರಿಸಿದರು....
ಬೆಳ್ತಂಗಡಿ

ತನ್ನ ಸ್ವಂತ ಕಚೇರಿಯ ಉದ್ಘಾಟನೆಗೆಂದು ತೆರಳುತ್ತಿದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವು-ಕಹಳೆ ನ್ಯೂಸ್

ಬೆಳ್ತಂಗಡಿ : ಮದ್ದಡ್ಕ ಸಮೀಪ ತನ್ನ ಸ್ವಂತ ಕಚೇರಿಯ ಉದ್ಘಾಟನೆಗೆಂದು ತೆರಳುತ್ತಿದ್ದ ಯುವಕ ಮಾಲಾಡಿ ಸಮೀಪ ಅರ್ಕುಲ ತಿರುವಿನಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವಕನನ್ನು ಬಂಟ್ವಾಳ ತಾಲೂಕಿನ ಮದ್ದ ನಿವಾಸಿ 28ವರ್ಷದ ಮಾಝಿನ್ ಎಂದು ಗುರುತಿಸಲಾಗಿದೆ. ಸ್ಥಳೀಯರು ಯವಕನನ್ನು ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದರು, ಯುವಕ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಮಾಝಿನ್ ಎಂಜಿನಿಯರ್ ಆಗಿದ್ದು, ಮದ್ದಡ್ಕದಲ್ಲಿ ಕಚೇರಿಯ ಉದ್ಘಾಟನೆಗೆ ತೆರಲುತ್ತಿದ್ದ ವೇಳೆಯಲ್ಲಿ ಮಾಲಾಡಿ ಬಳಿ...
ಪುತ್ತೂರು

ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಉಚಿತ ಲ್ಯಾಪ್‌ಟಾಪ್-ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಉಚಿತವಾಗಿ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್ ಪಿ. ಮಾತನಾಡಿ ಎಂಬಿಎಯಂತಹ ಸ್ನಾತಕೋತ್ತರದ ಕಲಿಕೆಯು ವ್ಯಕ್ತಿಯೊಬ್ಬನ ಜೀವನದ ಗತಿಯನ್ನು ಬದಲಾಯಿಸುತ್ತದೆ ಎಂದರು. ಹೆಚ್ಚಿನ ಜ್ಞಾನ ಮತ್ತು ನಾಯಕತ್ವ ಗುಣಗಳನ್ನು ಒದಗಿಸುವುದರ ಜತೆಯಲ್ಲಿ ಕಾರ್ಪೋರೇಟ್ ಜಗತ್ತಿನ ಪರಿಚಯವನ್ನು ಮಾಡಿಕೊಡುತ್ತವೆ ಎಂದರು. ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯನ್ನು ಇನ್ನೂ...
1 775 776 777 778 779 874
Page 777 of 874