Wednesday, May 6, 2026

ಪ್ರಾದೇಶಿಕ

ಕಡಬ

ಕಡಬದಲ್ಲಿ ಮೂರನೇ ದಿನವೂ ಮುಂದುವರೆದ ಅರಣ್ಯಾಧಿಕಾರಿಗಳ ದೌರ್ಜನ್ಯ ಖಂಡಿಸಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ; ಧರಣಿ ನಿರತ ಇಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು –ಕಹಳೆ ನ್ಯೂಸ್

ಕಡಬ : ಅರಣ್ಯಾಧಿಕಾರಿಗಳ ದೌರ್ಜನ್ಯ ದ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಮೂರನೇದಿನವೂ ಮುಂದುವರೆದಿದೆ. ಧರಣಿಯಲ್ಲಿ ನಿರತರಾಗಿದ್ದ ವೃದ್ದ ಮಹಿಳೆಯೊಬ್ಬರು ಮತ್ತು ನೀತಿ ತಂಡದ ರಾಜ್ಯಧ್ಯಕ್ಷ ಜಯನ್ ಟಿ ಅವರು ಅಸ್ವಸ್ಥಗೊಂಡಿದ್ದು, ಅವರನ್ನು ಅಂಬ್ಯುಲನ್ಸ್ ಮೂಲಕ ಕಡಬದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಪುತ್ತೂರು ಎಸಿಯವರು ನಿನ್ನೆ ಭೇಟಿ ನೀಡಿದ ಸಂದರ್ಭದಲ್ಲಿ ಗುರುವಾರ ಸಂಜೆಯ ಒಳಗೆ ಎಸ್ಪಿ ಅವರಿಂದ ಹಿಂಬರಹ ನೀಡುವುದಾಗಿ ಭರವಸೆ...
ಸುಬ್ರಹ್ಮಣ್ಯ

ಹರಿಹರ : ವೈನ್ ಶಾಪ್ ಗೆ ವಿರೋಧ, ವಿಶೇಷ ಗ್ರಾಮ ಸಭೆಗೆ ನಿರ್ಧಾರ; ಮದ್ಯದಂಗಡಿ, ವಿರೋಧಿ ಸಮಿತಿ ಅಸ್ತಿತ್ವಕ್ಕೆ-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ವೈನ್ ಶಾಪ್ ತೆರೆಯಲು ಪ್ರಯತ್ನ ನಡೆಸುತ್ತಿರುವುದರ ಬೆನ್ನಲ್ಲೆ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹರಿಹರ ಪಳ್ಳತ್ತಡ್ಕ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು, ನಾಗರಿಕರು, ಶ್ರೀ ಕ್ಷೇ..ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದವರು ಎಲ್ಲರು ವೈನ್ ಶಾಪ್ ತೆರೆಯುವುದನ್ನು ವಿರೋಧಿಸಿದ್ದು, ಮಂಗಳವಾರ ಶ್ರೀ ಹರಿಹರೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ಪಕ್ಷ ಬೇಧ ಮರೆತು ಎಲ್ಲರು ವೈನ್ ಶಾಪ್ ತೆರೆಯುವುದಕ್ಕೆ ವಿರೋಧ ವ್ಯಕ್ತಪಡಿಸಿದರು 1994ರಲ್ಲಿ...
ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಇಲ್ಲಿನ ಅಸಹಾಯಕ ವಯೋವೃದ್ಧೆಯ ಮನೆ ದುರಸ್ತಿ ಮಾಡಿದ ವಿಪತ್ತು ನಿರ್ವಹಣಾ ತಂಡ-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಇಲ್ಲಿನ ವಲಯ ವಿಪತ್ತು ನಿರ್ವಹಣೆ ಘಟಕದವರಿಂದ ಕೊಲ್ಲಮೊಗ್ರು ಗ್ರಾಮದ ಕಟ್ಟದಲ್ಲಿರುವ ಯೋವೃದ್ಧೆಯ ಮನೆ ದುರಸ್ತಿ ಮಾಡಿ ಮಾದರಿ ಕಾರ್ಯ ಮಾಡಿದ್ದಾರೆ. ಮಾನಿಕ ಎಂಬ ಅಸಹಾಯಕ ವಯೋವೃದ್ಧೆಯ ಮನೆಯ ಛಾವಣಿ ಮಾಡಿದ್ದು ಮುಂಜಾನೆ ಬೆಳಗ್ಗೆ 8.30 ರಿಂದ ರಾತ್ರಿ 8.00 ಗಂಟೆ ವರೆಗೆ ಕೆಲಸ ಮಾಡಿದ್ದಾರೆ. ವಿಪತ್ತು ನಿರ್ವಹಣೆ ಘಟಕದ ಸಂಯೋಜಕರಾದ ಸತೀಶ್ ಟಿ ಎನ್, ಮಣಿಕಂಠ ಕಟ್ಟ, ಮತ್ತು ಲಕ್ಷ್ಮಣ ಐನೆಕಿದು, ಕುಸುಮಾಧರ ಪಿ, ಯಶವಂತ, ಚಂದ್ರಶೇಖರ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಹೆತ್ತವರ ಸಭೆ-ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಹೆತ್ತವರು ಮತ್ತು ಶಿಕ್ಷಕರ ಪಾತ್ರ ಹಿರಿದು. ತಮ್ಮ ಮಕ್ಕಳೊಡನೆ ಸೂಕ್ಷ್ಮ ಬಾಂಧವ್ಯವನ್ನು ಬೆಳೆಸಿಕೊಂಡು ಅವರ ಸಂವೇದನೆಗೆ ಸ್ಪಂದಿಸಬೇಕು. ಈ ಮೂಲಕ ಸ್ವತಂತ್ರ ವ್ಯಕ್ತಿತ್ವವನ್ನು ಬೆಳೆಸಲು ಸಹಾಯ ಮಾಡಬೇಕು. ಭವಿಷ್ಯದ ಗುರಿಯು ಪ್ರಾಮಾಣಿಕವಾಗಿದ್ದು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಂಡರೆ ಯಶಸ್ಸು ಸಾಧ್ಯ ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ ಶೆಟ್ಟಿಗಾರ್ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಪ್ರಥಮ ಪಿ.ಯು.ಸಿ...
ಕಡಬ

ಅರಣ್ಯಾಧಿಕಾರಿಗಳ ದೌರ್ಜನ್ಯ ದ ವಿರುದ್ದ ಪ್ರಕರಣ ದಾಖಲಿಸಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ನೀತಿ ತಂಡದ ರಾಜ್ಯಾಧ್ಯಕ್ಷ ಅಸ್ವಸ್ಥ-ಕಹಳೆ ನ್ಯೂಸ್

ಕಡಬ : ಅರಣ್ಯಾಧಿಕಾರಿಗಳ ದೌರ್ಜನ್ಯ ದ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಿ ನಿನ್ನೆಯಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ನೀತಿ ತಂಡದ ರಾಜ್ಯಾಧ್ಯಕ್ಷ ಜಯನ್.ಟಿ ಅವರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ಜಯನ್ ಅವರಿಗೆ ಅವರಿಗೆ ಸ್ಥಳದಲ್ಲಿಯೇ ಖಾಸಗಿ ವೈದ್ಯರಿಂದ ಗ್ಲೂಕೋಸ್ ನೀಡಲಾಗುತ್ತಿದ್ದು, ಉಪವಾಸ ಸತ್ಯಾಗ್ರಹ ನಡೆಯುತ್ತಿರುವ ಇಂದು ಸ್ಥಳಕ್ಕೆ ತಾ.ಪಂ. ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಉಪಾಧ್ಯಕ್ಷೆ ಜಯಂತಿ ಆರ್.ಗೌಡ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಪಿ.ವೈ.ಕುಸುಮಾ, ತಾ.ಪಂ. ಸದಸ್ಯ ಗಣೇಶ್ ಕೈಕುರೆ...
ಪುತ್ತೂರು

ಬಪ್ಪಳಿಗೆಯ ಅಂಬಿಕಾ ಸಂಸ್ಥೆಯಲ್ಲಿ ಎನ್‍ಡಿಎ ತರಬೇತಿ ತರಗತಿಗಳಿಗೆ ಚಾಲನೆ, ರಾಷ್ಟ್ರೀಯ ಭಾವೈಕ್ಯಕ್ಕೆ ಸೇನೆ ಅತ್ಯುತ್ತಮ ಉದಾಹರಣೆ ; ಕರ್ನಲ್ ಶರತ್ ಚಂದ್ರ ಭಂಡಾರಿ-ಕಹಳೆ ನ್ಯೂಸ್

ಪುತ್ತೂರು : ಜಗತ್ತಿನ ಹತ್ತು ಅತ್ಯುತ್ತಮ ತರಬೇತಿ ಸಂಸ್ಥೆಗಳಲ್ಲಿ ನಮ್ಮ ದೇಶದ ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಕೂಡ ಒಂದು ಎನ್ನುವುದು ಅತ್ಯಂತ ಹೆಮ್ಮೆಯ ವಿಚಾರ. ಹಾಗಾಗಿಯೇ ಇಲ್ಲಿಗೆ ಆಯ್ಕೆಯಾಗುವುದು ಅನೇಕರ ಕನಸಾಗಿದೆ. ಪ್ರೌಢಶಾಲಾ ಮಟ್ಟದಿಂದಲೇ ಆ ಕುರಿತು ಅಧ್ಯಯನ, ಅಭ್ಯಾಸ ಆರಂಭಿಸಿ ನಿಗದಿತ ಸಂಗತಿಗಳಲ್ಲಿ ಹಿಡಿತ ಸಾಧಿಸುತ್ತಾ ಮುಂದುವರೆದರೆ ಎನ್‍ಡಿಎ ಪರೀಕ್ಷೆಯಲ್ಲಿ ತೇರ್ಗಡೆಯಾಗಬಹುದು ಎಂದು ನಿವೃತ್ತ ಕರ್ನಲ್ ಶರತ್ ಚಂದ್ರ ಭಂಡಾರಿ ಹೇಳಿದರು. ಅವರು ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್...
ಪುತ್ತೂರು

ಅಂಬಿಕಾದಲ್ಲಿ ಸಿ.ಎ ಪೌಂಡೇಶನ್ ತರಗತಿ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು : ವರ್ತಮಾನ ದಿನಗಳಲ್ಲಿ ಚಾರ್ಟರ್ಡ್ ಅಕೌಂಟೆಂಟ್‍ಗಳಿಗೆ ಅಧಿಕ ಬೇಡಿಕೆ ಇದೆ. ಆದರೆ ಇದನ್ನು ಆಯ್ಕೆ ಮಾಡುವವರ ಸಂಖ್ಯೆ ಇನ್ನೂ ವೃದ್ಧಿಯಗಬೇಕಿದೆ ಎಂದು ಚಾರ್ಟರ್ಡ್ ಅಕೌಂಟೆಂಟ್ ಅರವಿಂದ ಕೃಷ್ಣ ಅವರು ಅಂಬಿಕಾದಲ್ಲಿ ಸಿ.ಎ ಪೌಂಡೇಷನ್ ತರಗತಿಯನ್ನು ಉದ್ಘಾಟಿಸಿ , ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿಸುವುದರ ಜತೆಗೆ ಪರೀಕ್ಷೆಗಳನ್ನು ಹೇಗೆ ಎದುರಿಸಬಹುದೆನ್ನುವುದರ ಬಗ್ಗೆ ಮಾಹಿತಿ ನೀಡಿದರು. ನಟ್ಟೋಜ ಪೌಂಡೇಷನ್ ಟ್ರಸ್ಟ್‍ನ ಕಾರ್ಯದರ್ಶಿ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಯ ಸಂಚಾಲಕ ಸುಬ್ರಮಣ್ಯ ನಟ್ಟೋಜರು...
ಬಂಟ್ವಾಳ

ಪೊಳಲಿ ನಿವಾಸಿ ಹಿರಿಯ ಕಲ್ಲಂಗಡಿ ಕೃಷಿಕ ಶತಾಯುಷಿ ಕೆ.ಸೇಸು ಸಪಲ್ಯ ನಿಧನ-ಕಹಳೆ ನ್ಯೂಸ್

ಬಂಟ್ವಾಳ : ಇಲ್ಲಿನ ಕರಿಯಂಗಳ ಗ್ರಾಮದ ಪೊಳಲಿ ಸಮೀಪದ ಕಂಚೇಶ್ವರ ನಿವಾಸಿ, ಹಿರಿಯ ಕಲ್ಲಂಗಡಿ ಕೃಷಿಕ ಶತಾಯುಷಿ ಕೆ.ಸೇಸು ಸಪಲ್ಯ (102) ಇವರು ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಮಾಜಿ ಅಧ್ಯಕ್ಷ ಎಸ್.ಎ. ವಿಶ್ವನಾಥ್ ಬಿ.ಸಿ.ರೋಡು ಸಹಿತ ಮೂವರು ಪುತ್ರರು ಮತ್ತು ಏಳು ಮಂದಿ ಪುತ್ರಿಯರು ಇದ್ದಾರೆ. ಮೃತರು ಪ್ರಗತಿಪರ ಕೃಷಿಕರಾಗಿ, ತರಕಾರಿ ಮತ್ತು ಕಲ್ಲಂಗಡಿ ಕೃಷಿ ಜೊತೆಗೆ ಜಾನಪದ...
1 778 779 780 781 782 874
Page 780 of 874