Wednesday, May 6, 2026

ಪ್ರಾದೇಶಿಕ

ಪುತ್ತೂರು

ಅಂಬಿಕಾದಲ್ಲಿ ವಿದ್ಯಾರ್ಥಿ ಸಂಘಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು : ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆ ಇಲ್ಲಿಯ 2020-21ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ದ್ವಿತೀಯ ಪಿ.ಯು.ಸಿ.ಯ ಅನ್ಮಯ್ ಭಟ್ ಅಧ್ಯಕ್ಷ ಸ್ಥಾನಕ್ಕೂ ಆಕಾಶ್ ಕೆ ಕಾರ್ಯದರ್ಶಿಯಾಗಿಯೂ ಆಯ್ಕೆಯಾಗಿರುತ್ತಾರೆ....
ಸುಳ್ಯ

ಸಾವಿರಾರು ಬೀಡಿ ಕಾರ್ಮಿಕರಿಗೆ ಉದ್ಯೋಗವನ್ನು ನೀಡಿ ಬದುಕಿಗೆ ಆಸರೆಯಾಗಿದ್ದ ಸುಳ್ಯದ ಬೀಡಿ ಉದ್ಯಮಿ, ಲಯನ್ ಟಿ.ಪಿ.ಸುಲೈಮಾನ್ ನಿಧನ-ಕಹಳೆ ನ್ಯೂಸ್

ಸುಳ್ಯ : ಸಾವಿರಾರು ಬೀಡಿ ಕಾರ್ಮಿಕರಿಗೆ ಉದ್ಯೋಗವನ್ನು ನೀಡಿ ಬದುಕಿಗೆ ಆಸರೆಯಾಗಿದ್ದ ಸುಳ್ಯದ ಬೀಡಿ ಉದ್ಯಮಿ, 60ವರ್ಷದ ಲಯನ್ ಟಿ.ಪಿ.ಸುಲೈಮಾನ್ ಹೃದಯಾಘಾತದಿಂದ ಮಾರ್ಚ್ 3 ರಂದು ನಿಧನರಾಗಿದ್ದಾರೆ. ಇವರು ಕ್ರೀಡಾ ಪ್ರೋತ್ಸಾಹಕ ರಾಗಿದ್ದು, ಬಾಲ್ಯದಿಂದಲೇ ವಾಲಿಬಾಲ್ ಟೆನ್ನಿಸ್, ಶಟಲ್ ಬ್ಯಾಡ್ಮಿಂಟನ್ ಪಂದ್ಯಗಳ ಕ್ರೀಡಾಪಟುವಾಗಿದ್ದರು. ಸುಳ್ಯದಲ್ಲಿ ನಿರ್ಮಾಣಗೊಂಡಿರುವ ಟೆನ್ನಿಸ್ ಕ್ರೀಡಾಂಗಣದ ಸ್ಥಾಪಕರಲ್ಲಿ ಓರ್ವರಾಗಿದ್ದ ಇವರು ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದ ಅಭಿರುಚಿ ಸುಳ್ಯಕ್ಕೆ ತೋರಿಸಿಕೊಟ್ಟವರು ಇವರಾಗಿದ್ದರು. ಕೊಡುಗೈ ದಾನಿಯಾಗಿದ್ದ ಇವರು ಸುಮಾರು...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಮಾರ್ಚ್ 5ರಂದು ರಂಗ ವಿಮರ್ಶಾ ಕಮ್ಮಟ-ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಐಕ್ಯುಎಸಿ ಘಟಕ ಹಾಗೂ ಪತ್ರಿಕೊದ್ಯಮ ವಿಭಾಗಗಳ ಆಶ್ರಯದಲ್ಲಿ ಒಂದು ದಿನದ ರಂಗ ವಿಮರ್ಶಾ ಕಮ್ಮಟವನ್ನು ಮಾರ್ಚ್ 5ರಂದು ಹಮ್ಮಿಕೊಳ್ಳಲಾಗಿದೆ. ಪೂರ್ವಾಹ್ನ 10 ಗಂಟೆಗೆ ಆರಂಭವಾಗಲಿರುವ ಕಮ್ಮಟಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಚಾಲನೆ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ನಾಟಕ ಅಕಾಡಮಿಯ ಅಧ್ಯಕ್ಷ ಪ್ರೊ. ಭೀಮಸೇನ ಆರ್. ವಹಿಸಲಿರುವರು. ಈ ಸಂದರ್ಭ ವೇದಿಕೆಯಲ್ಲಿ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ‘ನೂತನ ಪರೀಕ್ಷಾ ಸಾಪ್ಟ್‍ವೇರ್’ ಕುರಿತು ಕಾರ್ಯಗಾರ, ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ತೊಂದರೆಯಾಗಬಾರದು; ಡಾ. ಪಿ. ಎಲ್. ಧರ್ಮ-ಕಹಳೆ ನ್ಯೂಸ್

ಪುತ್ತೂರು : ವಿದ್ಯಾ ಸಂಸ್ಥೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಮಂಗಳೂರು ವಿಶ್ವವಿದ್ಯಾಲಯದ ಬೆಳವಣಿಗೆಗೆ ಕಾರಣವಾಗಿದೆ. ಕಾಲೇಜಿನಲ್ಲಿ ಪರೀಕ್ಷಾ ವಿಚಾರದಲ್ಲಿ ಏನೇ ತೊಂದರೆ ಆದರೂ ಅದು ಪರೀಕ್ಷಾಂಗವನ್ನು ತಲುಪುತ್ತದೆ. ವಿದ್ಯಾರ್ಥಿಗಳ ಪಲಿತಾಂಶ ಪ್ರಕಟಣೆಯಲ್ಲಿ ಈ ಹಿಂದೆ ಲೋಪದೋಷಗಳಿಂದಾಗಿ ತೊಂದರೆಯಾಗಿದೆ. ಅನೇಕ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ ಅನ್ನುವ ಪಲಿತಾಂಶವು ಬಂದಿದೆ. ಇದನ್ನೆಲ್ಲಾ ಸರಿಪಡಿಸುವ ಸಲುವಾಗಿ ಪರೀಕ್ಷಾಂಗ ಮಂಡಳಿ ಹೊಸ ಪ್ರಯೋಗವನ್ನು ಮಾಡುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ. ಪಿ.ಎಲ್. ಧರ್ಮ ನುಡಿದರು. ಪುತ್ತೂರಿನ...
ಪುತ್ತೂರು

ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ-ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯ ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ತೆಂಕಿಲದ ನರೇಂದ್ರ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ತೆಂಕಿಲದ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಬಾಲಕರ ವಿಭಾಗದ ತಂಡದಲ್ಲಿ ವಿದ್ಯಾರ್ಥಿಗಳಾದ ಅನಿಕೇತ್ ಬದನಾಜೆ, ಮಿಥುನ್ ಜಿ.ಪಿ, ಚೇತನ್, ತರುಣ್ ಕುಮಾರ್, ಭಗತ್ ಎಚ್ ಎನ್, ತನುಜ್, ಚರಣ್, ಸಾತ್ವಿಕ್, ಚಿರಾಗ್ ಶೆಟ್ಟಿ,...
ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ-ವಿದ್ಯಾರ್ಥಿ ಸಮಾಲೋಚನೆ, ಮಕ್ಕಳಿಗೆ ಜೀವನ ಪಾಠವೂ ಬಹಳ ಅಗತ್ಯವಿದೆ ; ವಂ. ಲಾರೆನ್ಸ್ ಮಸ್ಕರೇನಸ್-ಕಹಳೆ ನ್ಯೂಸ್

ಪುತ್ತೂರು : ಉತ್ತಮ ಶಿಕ್ಷಣವು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತವಾಗಿರದೆ ಭವಿಷ್ಯದಲ್ಲಿ ಎದುರಾಗುವ ನಾನಾ ರೀತಿಯ ಸವಾಲುಗಳನ್ನು ದಿಟ್ಟವಾಗಿ ಎದುರಿಸಬಲ್ಲ ಸಾಮಥ್ರ್ಯವನ್ನು ಬೆಳೆಸುತ್ತದೆ. ಶಿಕ್ಷಣವು ನಿಂತ ನೀರಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳಿರಬೇಕು. ಮಕ್ಕಳಿಗೆ ಜೀವನ ಪಾಠವೂ ಬಹಳ ಅಗತ್ಯವಿದೆ ಎಂದು ಸಂತ ಫಿಲೋಮಿನಾ ಕಾಲೇಜಿನ ಸಂಚಾಲಕರಾದ ಅವಂ. ಲಾರೆನ್ಸ್ ಮಸ್ಕರೇನಸ್ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಆಶ್ರಯದಲ್ಲಿ ಫೆಬ್ರವರಿ 22, 23 ಮತ್ತು...
ಪುತ್ತೂರು

ಅವಿರತವಾಗಿ ಮತ್ತು ಅವ್ಯಾಹತವಾಗಿ ನಡೆಯುವ ಪರಿಸರದ ಮೇಲಿನ ದೌರ್ಜನ್ಯದಿಂದಾಗಿ ಮಾನವ ಮತ್ತು ಪ್ರಾಣಿಗಳ ಮಧ್ಯೆ ಸಂಘರ್ಷಗಳು ಉಂಟಾಗುತ್ತಿದೆ; ಡಾ.ರವೀಂದ್ರನಾಥ್ ಐತಾಳ್-ಕಹಳೆ ನ್ಯೂಸ್

ಪುತ್ತೂರು : ಅವಿರತವಾಗಿ ಮತ್ತು ಅವ್ಯಾಹತವಾಗಿ ನಡೆಯುವ ಪರಿಸರದ ಮೇಲಿನ ದೌರ್ಜನ್ಯದಿಂದಾಗಿ ಮಾನವ ಮತ್ತು ಪ್ರಾಣಿಗಳ ಮಧ್ಯೆ ಸಂಘರ್ಷಗಳು ಉಂಟಾಗುತ್ತಿದ್ದು ಇದನ್ನು ತಡೆಯದೇ ಹೋದರೆ ಮುಂದೊಂದು ದಿನ ಪ್ರಾಣಿ ಪಕ್ಷಿಗಳನ್ನು ಚಿತ್ರಪಟದಲ್ಲಿ ನೋಡಬೇಕಾದ ಪರಿಸ್ಥಿತಿ ಉದ್ಭವಿಸಬಹುದು ಎಂದು ಪುತ್ತೂರಿನ ಶೇಷವನ ಚಾರಿಟೇಬಲ್ ಟ್ರಸ್ಟ್‍ನ ನಿರ್ವಾಹಕ ನಿರ್ದೇಶಕ ಡಾ.ರವೀಂದ್ರನಾಥ್ ಐತಾಳ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಐಎಸ್‍ಟಿಇ ಸ್ಟೂಡೆಂಟ್ ಚಾಪ್ಟರ್...
ಬೆಳ್ತಂಗಡಿ

ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎನ್. ಗಣೇಶ್ ಗೌಡ-ಕಹಳೆ ನ್ಯೂಸ್

ಬೆಳ್ತಂಗಡಿ : ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಎನ್. ಗಣೇಶ್ ಗೌಡ ನಾವೂರು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಶಾಸಕ ಹರೀಶ್ ಪೂಂಜರವರ ಸಮ್ಮುಖದಲ್ಲಿ ಇವರನ್ನು ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಈಗಾಗಲೇ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್...
1 789 790 791 792 793 874
Page 791 of 874