ಕಡಬದಲ್ಲಿ ಮರ ಲೂಟಿ ವಿರುದ್ಧ ದೂರು ನೀಡಿದ ವ್ಯಕ್ತಿಯ ಮನೆಗೆ ದಾಳಿ; ಹಳೆಯ ಮರದ ಹಲಗೆಗಳನ್ನು ವಶಕ್ಕೆ ಪಡೆದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು-ಕಹಳೆ ನ್ಯೂಸ್
ಕಡಬ : ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಮರ ಲೂಟಿ ವಿರುದ್ಧ ದೂರು ನೀಡಿದ ವ್ಯಕ್ತಿಯ ಮನೆಗೆ ದಾಳಿ ನಡೆಸಿ, ಹಳೆಯ ಮರದ ಹಲಗೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳವಾರ ತಡ ರಾತ್ರಿ ಮೂರು ವಾಹನಗಳಲ್ಲಿ ಸಂಚಾರಿ ದಳದ ಸಂಧ್ಯಾ ಅವರ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದು, ಪ್ರಸಾದ್ ಅವರು ಅಕ್ರಮವಾಗಿ ಮರ ಕಡಿದು ಮನೆಯಲ್ಲಿ ಶೇಖರಣೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನಲೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ...







