ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ, ಅಂತರಂಗದ ಬೆಳಕು ದೇಶದ ಭವಿಷ್ಯವನ್ನು ಬೆಳಗಬೇಕು; ಯು.ಜಿ.ರಾಧ-ಕಹಳೆ ನ್ಯೂಸ್
ಪುತ್ತೂರು : ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಶಿಕ್ಷಣ ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಬೇಕು. ವಿದ್ಯಾರ್ಥಿಗಳು ಬದುಕನ್ನು ಗೌರವಿಸುವ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು. ದೊರೆತ ಅವಕಾಶಗಳನ್ನು ಉಪಯೋಗಿಸಿಕೊಂಡು ಪರಿಪೂರ್ಣ ವ್ಯಕ್ತಿತ್ವವನ್ನು ಪಡೆದುಕೊಳ್ಳಬೇಕು. ಅಂತರಂಗದ ಬೆಳಕು ದೇಶದ ಭವಿಷ್ಯವನ್ನು ಬೆಳಗುವಂತಾಗಬೇಕು ಎಂದು ಉಪ್ಪಿನಂಗಡಿ ಶ್ರೀ ರಾಮ ವಿದ್ಯಾಲಯದ ಸಂಚಾಲಕ ಯು.ಜಿ.ರಾಧ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನ 2020-21 ಸಾಲಿನ ವಿದ್ಯಾರ್ಥಿ ಸಂಘ, ಲಲಿತಾಕಲಾ, ವಿಜ್ಞಾನ, ವಾಣಿಜ್ಯ,...







