ಕುಡಿದ ಮತ್ತಿನಲ್ಲಿ ಪತ್ನಿಯನ್ನು ಮರದ ತುಂಡಿನಿಂದ ಹುಬ್ಬಿನ ಮೇಲೆ ಹೊಡೆದು ಕೊಂದ ಪತಿ-ಕಹಳೆ ನ್ಯೂಸ್
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗಂಡನೆ ಹೆಂಡತಿಯನ್ನು ಕೊಂದ ಘಟನೆ ನಿನ್ನೆ ರಾತ್ರಿ ನಡೆದಿದೆ. ಈ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿ ಬಾಗಿಲಿನ ಕುಟ್ಟಿಚ್ಛಾರು ಮನೆ ಎಂಬಲ್ಲಿ ನಡೆದಿದ್ದು, ಆರೋಪಿ ಜಾನ್ಸನ್ ಎಂದು ಗುರುತಿಸಲಾಗಿದೆ. ಆರೋಪಿ ಜಾನ್ಸನ್ನು ಕೇರಳ ಮೂಲದ ಇರುಟ್ಟಿ ಎಂಬಲ್ಲಿಯ ತನ್ನ ಪತ್ನಿ ಸೌಮ್ಯಾ ಜಾನ್ಸನ್ನನ್ನು ಕೊಲೆ ಮಾಡಿದ್ದಾನೆ ಎಂದು ಆಕೆಯ ಸಹೋದರ ಸನೋಜ್ ಫ್ರಾನ್ಸಿಸ್ ಕುತ್ರೊಟ್ಟು ಎಂಬವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ....







