ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಇದೇ 20 ರಂದು ವಾರ್ಷಿಕ ಷಷ್ಠಿ ಮಹೋತ್ಸವ ಸಂಭ್ರಮ- ಕಹಳೆ ನ್ಯೂಸ್
ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಇದೇ 20 ರಂದು ಸಂಭ್ರಮ ಸಡಗರದಿಂದ ನಡೆಯಲಿದೆ. ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ ತಂತ್ರಿ ಮಾರ್ಗದರ್ಶನದಲ್ಲಿ ಇದೇ 18 ರಿಂದ ವಿವಿಧ ಧಾರ್ಮಿಕ ವಿಧಿ ವಿಧಾನ ಆರಂಭಗೊಂಡು. ಡಿಸೆಂಬರ್ 19 ರಂದು ಬೆಳಿಗ್ಗೆ 9 ಗಂಟೆಗೆ ಬ್ರಹ್ಮಲಿಂಗೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ, ಮತ್ತು ಮಧ್ಯಾಹ್ನ ಮಹಾಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಮತ್ತು...







