Monday, April 27, 2026

ಪ್ರಾದೇಶಿಕ

ಬಂಟ್ವಾಳ

ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಇದೇ 20 ರಂದು ವಾರ್ಷಿಕ ಷಷ್ಠಿ ಮಹೋತ್ಸವ ಸಂಭ್ರಮ- ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಇದೇ 20 ರಂದು ಸಂಭ್ರಮ ಸಡಗರದಿಂದ ನಡೆಯಲಿದೆ. ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ ತಂತ್ರಿ ಮಾರ್ಗದರ್ಶನದಲ್ಲಿ ಇದೇ 18 ರಿಂದ ವಿವಿಧ ಧಾರ್ಮಿಕ ವಿಧಿ ವಿಧಾನ ಆರಂಭಗೊಂಡು. ಡಿಸೆಂಬರ್ 19 ರಂದು ಬೆಳಿಗ್ಗೆ 9 ಗಂಟೆಗೆ ಬ್ರಹ್ಮಲಿಂಗೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ, ಮತ್ತು ಮಧ್ಯಾಹ್ನ ಮಹಾಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಮತ್ತು...
ಪುತ್ತೂರು

ಡಿಸೆಂಬರ್ 17 ರಂದು ಕಡಬಕ್ಕೆ ಡಿಸಿ ಭೇಟಿ- ಕಹಳೆ ನ್ಯೂಸ್

ಪುತ್ತೂರು: ಕಡಬ ತಾಲೂಕು ಕಛೇರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಡಿಸೆಂಬರ್ 17 ರಂದು ಪೂರ್ವಾಹ್ನ 11 ಘಂಟೆಗೆ ಭೇಟಿ ನಿಡಲಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದಾರೆ. ಹಾಗಾಗಿ ಸಾರ್ವಜನಿಕರು ಇದರ ಸಹಪಯೋಗ ಪಡೆದುಕೊಳ್ಳಬೇಕೆಂದು ಕಡಬ ತಹಶಿಲ್ದಾರ್ ಅನಂತ ಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ಬಂಟ್ವಾಳ

ವಿಟ್ಲದಲ್ಲಿ ಮೆಸ್ಕಾಂ ನೀತಿ ವಿರೋಧಿಸಿ ಪ್ರತಿಭಟನೆ-ಕಹಳೆ ನ್ಯೂಸ್

ಬಂಟ್ವಾಳ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಮೆಸ್ಕಾಂ ನೀತಿಯನ್ನು ವಿರೋಧಿಸಿ ವಿಟ್ಲದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು. ಮುಖಂಡರಾದ ಸುರೇಶ್ ಭಟ್ ಕೊಜಂಬೆ ಮಾತನಾಡಿ ಸಾಮಾನ್ಯರು ಸೋತಾಗ ಸರ್ಕಾರ ಅವರ ನೆರವಿಗೆ ಬರಬೇಕು. ಅದನ್ನು ಬಿಟ್ಟು ದಬ್ಬಾಳಿಕೆ ಮಾಡುವುದು ಸರಿಯಲ್ಲ ಎಂದು ದೂರಿದರು. ಹಾಗೂ ಜಿಲ್ಲಾ ಕಾರ್ಮಿಕ ಮುಖಂಡ ಬಿ.ಎಂ ಭಟ್ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಸುತ್ತಿದೆ ಎಂದರು....
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಆದ್ಯ ಸುಲೋಚನಾ ಮುಳಿಯ ನೇತೃತ್ವದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕೇಶದಾನ ಮಾಡಿ ಪುತ್ತೂರಿನ ವಿದ್ಯಾರ್ಥಿಗಳಿಂದ ಸಮಾಜಮುಖಿ ಚಿಂತನೆಗೆ ನಾಂದಿ – ಕಹಳೆ ನ್ಯೂಸ್

ಪುತ್ತೂರು, ಡಿ.16 : ಕೇಶದಾನದಿಂದ ಕ್ಯಾನ್ಸರ್ ಕಾರಣದಿಂದಾಗಿ ರೂಪ ಕಳೆದುಕೊಂಡ ರೋಗಿಗಳಿಗೆ ವಿಗ್ ನೀಡುವುದರ ಮೂಲಕ ಅವರ ಮುಖದಲ್ಲಿ ಮಂದಹಾಸ ತರಬಹುದು. ರಕ್ತದಾನ, ಅಂಗದಾನ ಇದರಂತೆ ಕೇಶದಾನ ಮಾಡುವ ನಿಟ್ಟಿನಲ್ಲಿ ಪುತ್ತೂರಿನ 9 ಶಾಲಾ ವಿದ್ಯಾರ್ಥಿಗಳು ಯೋಜನೆಯೊಂದನ್ನು ರೂಪಿಸಿದ್ದಾರೆ. ಕೇಶದಾನ ಮಾಡುವ ಅಪರೂಪದ ಕಾರ್ಯಕ್ರಮವನ್ನು ಅವರು ಹಮ್ಮಿಕೊಂಡಿದ್ದು ಇದು ಉತ್ತಮ ಯೋಜನೆಯಾಗಿ ಹೊರಹೊಮ್ಮಿದೆ. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ಆದ್ಯ ಸುಲೋಚನಾ ಮುಳಿಯ ಎಂಬ ಕುವರಿಯು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸ ಪೂಜೆ ಇಂದಿನಿಂದ ಆರಂಭ ; ವೇದ ಸಂವರ್ಧನ ಪ್ರತಿಷ್ಠಾನದ ನೇತೃತ್ವದಲ್ಲಿ ಒಂದು ತಿಂಗಳುಗಳ ಕಾಲ ನಡೆಯುವ ವೇದ ಹಾಗೂ ರುದ್ರ ಪಾರಾಯಣಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮುಂದಿನ ಒಂದು ತಿಂಗಳು ನಡೆಯುವ ಧನುರ್ಮಾಸ ಪೂಜೆಯು ಡಿ.16ರಂದು ಆರಂಭಗೊಂಡಿದೆ. ಬೆಳಿಗ್ಗೆ ಗಂಟೆ 5.30ಕ್ಕೆ ಧನುರ್ಮಾಸ ಪೂಜೆ ನಡೆಯಿತು. ಬಳಿಕ ಶ್ರೀ ದೇವರ ನಿತ್ಯ ಬಲಿ ಉತ್ಸವ ನಡೆಯಿತು. ದೇವಳದ ಪ್ರಧಾನ ಅರ್ಚಕ ಎ ವಸಂತ ಕೆದಿಲಾಯ ಅವರು ವೈದಿಕ ಕಾರ್ಯಕ್ರಮ ನೆರವೇರಿಸಿದರು. ವೇದ ಸಂವರ್ಧನ ಪ್ರತಿಷ್ಠಾನದ ನೇತೃತ್ವದಲ್ಲಿ ಒಂದು ತಿಂಗಳು ನಸುಕಿನ ನಡೆಯುವ ವೇದ ಮತ್ತು ರುದ್ರ ಪಾರಾಯಣ...
ಬೆಳ್ತಂಗಡಿ

ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ 1ನೇ ಮುಗೇರಡ್ಕ ವಾರ್ಡ್‍ನಿಂದ ಸಾಮಾನ್ಯ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಾಲಕೃಷ್ಣ ಗೌಡ- ಕಹಳೆ ನ್ಯೂಸ್

ಬಂದಾರು:ರಾಜ್ಯದಲ್ಲಿ ಗ್ರಾ.ಪಂ. ಚುನಾವಣೆಯ ಕಾವು ಶುರುವಾಗಿದ್ದು, ಈಗಾಗ್ಲೇ ಹಲವಾರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅದರಂತೆ, ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ 1ನೇ ಮುಗೇರಡ್ಕ ವಾರ್ಡ್ ನಿಂದ ಬಿಜೆಪಿ ಬೆಂಬಲಿತ ಸಾಮಾನ್ಯ ಅಭ್ಯರ್ಥಿಯಾಗಿ, ಕಣಿಯೂರು ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ಸಾಮಾಜಿಕ ಜಾಲತಾಣ ಪ್ರಕೋಷ್ಟದ ಸಹ ಸಂಚಾಲಕರಾದ ಬಾಲಕೃಷ್ಣ ಗೌಡ ಎಂ. ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಯಾಗಿ ಗಂಗಾಧರ ಪೂಜಾರಿ ಇವರು ನಾಮಪತ್ರ ಸಲ್ಲಿಸಿದ್ದಾರೆ. ಹಲವಾರು ಸಮಾಜಮುಖಿ...
ಕಡಬ

ಕಡಬದ ಇಚ್ಲಂಪಾಡಿ ಗ್ರಾಮದ ಕೊರಮೇರಿನಲ್ಲಿ ಅನಾಥ ಶವ ಪತ್ತೆ- ಕಹಳೆ ನ್ಯೂಸ್

ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಕೊರಮೇರು ಎಂಬಲ್ಲಿ ಅನಾಥ ಶವ ನಿನ್ನೆ ಪತ್ತೆಯಾಗಿದೆ. ಸುಮಾರು ೪೫ ರಿಂದ ೫೦ ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ವಾರಸುದಾರರು ಯಾರಾದರೂ ಇದ್ದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವ0ತೆ ಪೊಲೀಸರು ತಿಳಿಸಿದ್ದಾರೆ....
ಕಡಬ

ಕಡಬ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ನಿಧನ-ಕಹಳೆ ನ್ಯೂಸ್

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಕಡಬದ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ಅವರು ಮೃತಪಟ್ಟಿದ್ದಾರೆ. ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ರಂಗದಲ್ಲಿ ಸೇವೆ ಸಲ್ಲಿಸಿದ್ದ ಖಾದರ್ ಸಾಹೇಬ್ ಕಲ್ಲುಗುಡ್ಡೆ ಹಲವು ವರ್ಷಗಳಿಂದ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನು ತೀವ್ರ ಅನಾರೋಗ್ಯಕ್ಕೊಳಗಾದ ಖಾದರ್ ಸಾಹೇಬ್ ಕಲ್ಲುಗುಡ್ಡೆ ಅವರು ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.  ...
1 831 832 833 834 835 872
Page 833 of 872