ಬೆಳ್ತಂಗಡಿ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಭೇಟಿ ; ಮನೆ ನಿರ್ಮಾಣಕ್ಕೆ 2ನೇ ಕಂತು 5 ಕೋ.ರೂ. ಶೀಘ್ರ ಬಿಡುಗಡೆ – ಕಹಳೆ ನ್ಯೂಸ್
ಬೆಳ್ತಂಗಡಿ: ಕಳೆದ ಬಾರಿ ಪ್ರವಾಹದಿಂದ ತಾಲೂಕಿನಲ್ಲಿ ಅತೀ ಹೆಚ್ಚು ಮನೆಗಳು ಹಾನಿಗೀಡಾಗಿದ್ದವು. ನೂತನ ಮನೆ ನಿರ್ಮಾಣ ಕಾರ್ಯಕ್ಕೆ ಜಿಪಿಎಸ್ ಹಾಗೂ ತಾಂತ್ರಿಕ ತೊಂದರೆ ಉಂಟಾಗಿರುವುದನ್ನು ಸರಿಪಡಿಸಿ ಎರಡನೇ ಕಂತು 5 ಕೋಟಿ ರೂ.ಗಳನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದರು. ದ.ಕ. ಜಿಲ್ಲಾಧಿಕಾರಿಯಾದ ಬಳಿಕ ಮೊದಲನೇ ಬಾರಿಗೆ ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಮಿತ್ತಬಾಗಿಲು ಕಾಳಜಿ ಕೇಂದ್ರದಲ್ಲಿ ಮಾಧ್ಯಮದೊಂದಿಗೆ...







